ಸಚಿವ ಸುಧಾಕರ್ 
ರಾಜ್ಯ

ಶೀಘ್ರದಲ್ಲೆ ರಾಜ್ಯದಲ್ಲಿ ಹೋಟೆಲ್ ಬುಕಿಂಗ್ ರೀತಿ ಕೋವಿಡ್ ರೋಗಿಗಳಿಗೆ ಆಸ್ಪತ್ರೆ ಬೆಡ್ ಹಂಚಿಕೆ ವ್ಯವಸ್ಥೆ!

ಕೊರೋನಾ ಎರಡನೆಯ ಅಲೆಯ ತೀವ್ರತೆಯಿಂದ ರಾಜ್ಯ ಸಂಕಷ್ಟಕ್ಕೆ ಸಿಲುಕಿತ್ತು. ಅಲ್ಲದೆ ಹಾಸಿಗೆ ಹಂಚಿಕೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ಬುದ್ದಿ ಕಲಿತ ರಾಜ್ಯ ಮತ್ತು ಬಿಬಿಎಂಪಿ ಯುದ್ಧ ವಾರ್ ರೂಂನಲ್ಲಿ ಕೆಲಸ ಮಾಡುವ ತಜ್ಞರು ಮತ್ತು ಅಧಿಕಾರಿಗಳು ಹೊಸ ವ್ಯವಸ್ಥೆಯನ್ನು ತಂದಿದ್ದಾರೆ.

ಬೆಂಗಳೂರು: ಕೊರೋನಾ ಎರಡನೆಯ ಅಲೆಯ ತೀವ್ರತೆಯಿಂದ ರಾಜ್ಯ ಸಂಕಷ್ಟಕ್ಕೆ ಸಿಲುಕಿತ್ತು. ಅಲ್ಲದೆ ಹಾಸಿಗೆ ಹಂಚಿಕೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ಬುದ್ದಿ ಕಲಿತ ರಾಜ್ಯ ಮತ್ತು ಬಿಬಿಎಂಪಿ ಯುದ್ಧ ವಾರ್ ರೂಂನಲ್ಲಿ ಕೆಲಸ ಮಾಡುವ ತಜ್ಞರು ಮತ್ತು ಅಧಿಕಾರಿಗಳು ಹೊಸ ವ್ಯವಸ್ಥೆಯನ್ನು ತಂದಿದ್ದಾರೆ.

ಹೋಟೆಲ್ ಕೊಠಡಿಗಳನ್ನು ಬುಕ್ ಮಾಡುವ ಸಾಫ್ಟ್ ವೇರ್ ಬಳಸಿ ಬೆಡ್ ಗಳನ್ನು ಕಾಯ್ದಿರಿಸಲಾಗುತ್ತದೆ. ಸಂಭಾವ್ಯ ಮೂರನೇ ಅಲೆಗೆ ಮುಂಚಿತವಾಗಿ 2-3 ತಿಂಗಳಲ್ಲಿ ಹೊಸ ವ್ಯವಸ್ಥೆಯನ್ನು ತರಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ.

ಹೋಟೆಲ್ ರೂಮ್ ಬುಕಿಂಗ್‌ ಸಾಫ್ಟ್ ವೇರ್ ಒಂದೇ ರೀತಿ ಇರಲಿದ್ದು, ಆದರೆ ವಿಭಿನ್ನವಾಗಿರುತ್ತದೆ. ಚಾನಲ್ ವ್ಯವಸ್ಥಾಪಕರ ಮೂಲಕ, ಜಾಗತಿಕವಾಗಿ ಗ್ರಾಹಕರು ಮತ್ತು ಟ್ರಾವೆಲ್ ಏಜೆಂಟರು ಕೋಣೆಯ ಲಭ್ಯತೆಯನ್ನು ಚೆಕ್-ಇನ್ ಎಂದು ಕರೆಯುತ್ತಾರೆ. ಪ್ರತಿ ಹೋಟೆಲ್‌ನ ಚೆಕ್-ಇಟ್ ಇದಕ್ಕೆ ಲಿಂಕ್ ಆಗಿದೆ. ಹಾಸಿಗೆ ಬ್ಲಾಕಿಂಗ್ ತಡೆಯಲು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೂ ಈಗ ಇದನ್ನೇ ಯೋಜಿಸಲಾಗಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಹೋಟೆಲ್‌ಗಳಲ್ಲಿರುವಂತೆ ಯಾವ ರೀತಿಯ ಬೆಡ್ ಗಳು, ದರ ಮತ್ತು ಸೇವೆಗಳನ್ನು ಪಟ್ಟಿ ಮಾಡಲಾಗುವುದು. ಈ ಮೂಲಕ, ನಾಗರಿಕರು ಲಭ್ಯತೆಯನ್ನು ಪರಿಶೀಲಿಸಲು, ಹೋಲಿಕೆ ಮಾಡಲು ಮತ್ತು ಚಿಕಿತ್ಸೆಗಾಗಿ ಉತ್ತಮ ಮತ್ತು ಹತ್ತಿರದ ಆಸ್ಪತ್ರೆಯನ್ನು ಆಯ್ಕೆ ಮಾಡಲು ಸಾಧ್ಯವಾಗುತ್ತದೆ. ಇದು ಆರೋಗ್ಯಕರ ಸ್ಪರ್ಧೆ ಮತ್ತು ಪಾರದರ್ಶಕತೆಯನ್ನು ತರುತ್ತದೆ ಎಂದು ಅಧಿಕಾರಿ ಹೇಳಿದರು.

ಸರ್ಕಾರದ ಆದೇಶದ ಹೊರತಾಗಿಯೂ ಅನೇಕ ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಶೇಕಡಾ 50 ಹಾಸಿಗೆಗಳನ್ನು ಕಾಯ್ದಿರಿಸದ ಕಾರಣ ಇದರ ಅವಶ್ಯಕತೆ ಉಂಟಾಯಿತು. ಚಿಕಿತ್ಸೆಗಾಗಿ ರೋಗಿಗಳಿಗೆ ಅತಿಯಾದ ಶುಲ್ಕ ವಿಧಿಸಿದ ಅನೇಕ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿವೆ. ಹೊಸ ವ್ಯವಸ್ಥೆಗೆ ಸರ್ಕಾರ ತಾತ್ವಿಕವಾಗಿ ಅನುಮೋದನೆ ನೀಡಿದೆ. ಆದಾಗ್ಯೂ, ಅನೇಕ ಆಸ್ಪತ್ರೆಗಳಿಗೆ ಇದು ಮನವರಿಕೆಯಾತ್ತಿಲ್ಲ. ಪರಿಸ್ಥಿತಿಯ ತೀವ್ರತೆಯನ್ನು ವಿವರಿಸುವ ಮೂಲಕ ಅವುಗಳನ್ನು ಒಂದೇ ಸೂರಿನಡಿ ತರಲು ಸಭೆ ನಡೆಸಲಾಗುತ್ತಿದೆ ಎಂದರು. 

ಹೊಸ ವ್ಯವಸ್ಥೆಯು ಸಹಾಯಕವಾಗಲಿದೆ ಆದರೆ ಸರ್ಕಾರಿ ಅಧಿಕಾರಿಗಳಿಂದ ಕಿರುಕುಳದ ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ ಆಸ್ಪತ್ರೆಯ ನಿರ್ವಹಣೆಗಳು ಹೆಚ್ಚು ಆಸಕ್ತಿ ಹೊಂದಿಲ್ಲ ಎಂದು ಫಾನಾ ಅಧ್ಯಕ್ಷ ಡಾ. ಪ್ರಸನ್ನ ಎಚ್‌ಎಂ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT