ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ಲಸಿಕೆ ಪಡೆಯುವುದಕ್ಕೂ ಮುನ್ನವೇ ಕೈಗೆ ಬಂತು ಪ್ರಮಾಣಪತ್ರ: ಅಘಾತಗೊಂಡ ಯುವಕನಿಂದ ಬಿಬಿಎಂಪಿಗೆ ದೂರು

ಕೊರೋನಾ ಲಸಿಕೆ ಪಡೆದುಕೊಳ್ಳುವುದಕ್ಕೂ ಮುನ್ನವೇ ಲಸಿಕೆ ಪ್ರಮಾಣಪತ್ರ ನೋಡಿದ ಯುವಕನೋರ್ವ ಆಘಾತಗೊಂಡು ಬಿಬಿಎಂಪಿಗೆ ದೂರು ನೀಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರು: ಕೊರೋನಾ ಲಸಿಕೆ ಪಡೆದುಕೊಳ್ಳುವುದಕ್ಕೂ ಮುನ್ನವೇ ಲಸಿಕೆ ಪ್ರಮಾಣಪತ್ರ ನೋಡಿದ ಯುವಕನೋರ್ವ ಆಘಾತಗೊಂಡು ಬಿಬಿಎಂಪಿಗೆ ದೂರು ನೀಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. 

ಕೋವಿನ್ ಆ್ಯಪ್ ನಲ್ಲಿ ತನ್ನ ಹೆಸರನ್ನು ನಮೂದಿಸಿದ್ದ ಜಾಲಹಳ್ಳಿ ನಿವಾಸಿ ಆದಿತ್ಯ ರಾಯ್ (24) ಅವರು ನಿನ್ನೆ ಮಧ್ಯಾಹ್ನ ಲಸಿಕೆ ಹಾಕಿಸಿಕೊಳ್ಳುವ ಸಲುವಾಗಿ ಆಸ್ಟರ್ ಆರ್'ವಿ ಆಸ್ಪತ್ರೆಗೆ ತೆರಳಲುತ್ತಿದ್ದರು. ಈ ವೇಳೆ ಲಸಿಕೆ ಯಶಸ್ವಿಯಾಗಿ ಪಡೆದುಕೊಂಡಿರುವ ಕುರಿತು ಆದಿತ್ಯ ಅವರ ಮೊಬೈಲ್'ಗೆ ಸಂದೇಶ ಬಂದಿದ್ದು, ಜೊತೆಗೆ ಲಸಿಕಾ ಪ್ರಮಾಣಪತ್ರದ ಲಿಂಕ್ ಕೂಡ ಬಂದಿದೆ. 

ಮೊಬೈಲ್ ಬಂದ ಸಂದೇಷ ನೋಡಿ ಬಹಳ ಆಘಾತವಾಯಿತು. ಲಸಿಕೆಯನ್ನೇ ಪಡೆದಿರಲಿಲ್ಲ. ಆಗಲೇ ಪ್ರಮಾಣಪತ್ರ ಬಂದಿರುವುದು ನೋಡಿ ಬಹಳ ಆಶ್ಚರ್ಯವಾಯಿತು. ಬಳಿಕ ಆಸ್ಪತ್ರೆಯ ಸಿಬ್ಬಂದಿಗಳೊಂದಿಗೆ ಸಾಕಷ್ಟು ಬಾರಿ ಮಾತುಕತೆ, ವಾದದ ಬಳಿಕ ಕೊನೆಗೂ ಲಸಿಕೆ ಪಡೆದುಕೊಂಡೆ. ಸಂದೇಶ ನೋಡಿ ಬಹಳ ಆತಂಕಗೊಂಡಿದ್ದೆ. ಲಸಿಕೆ ಪಡೆದುಕೊಳ್ಳುವ ಅವಕಾಶ ಕಳೆದುಕೊಳ್ಳುವ ಆತಂಕ ಶುರುವಾಗಿತ್ತು. ಸಂದೇಶ ಬಂದ ಬಳಿಕ ಕೂಡಲೇ ಆಸ್ಪತ್ರೆ ತೆರಳಿ ಅಲ್ಲಿನ ಸಿಬ್ಬಂದಿಗಳೊಂದಿಗೆ ಮಾತನಾಡಿದ್ದೆ. ಆದರೆ, ಆಸ್ಪತ್ರೆಯ ಸಿಬ್ಬಂದಿಗಳು ದೋಷಗಳನ್ನು ತಳ್ಳಿಹಾಕಿದ್ದರು. ನಿಮ್ಮ ಆಧಾರ್ ಕಾರ್ಡ್ ಬಳಸಿ ಬೇರೊಬ್ಬರು ಲಸಿಕೆ ಪಡೆದುಕೊಂಡಿರಬಹುದು ಎಂದು ಹೇಳಿದ್ದರು. ಸಾಕಷ್ಟು ಮಾತಿನ ಚಕಮಕಿ ಬಳಿಕ ಮತ್ತೆ ರಿಜಿಸ್ಟರ್ ಮಾಡಿಕೊಂಡು ಲಸಿಕೆ ನೀಡಿದರು ಎಂದು ಆದಿತ್ಯಾ ಅವರು ಹೇಳಿದ್ದಾರೆ. 

ಈ ಸಂಬಂಧ ಈಗಾಗಲೇ ಬಿಬಿಎಂಪಿ ಅಧಿಕಾರಿಗಳಿಗೆ ದೂರು ನೀಡಿದ್ದೇನೆ. ಕೆಎಎಸ್ ಅಧಿಕಾರಿಯೊಂದಿಗೆ ಈ ಕುರಿತು ಮಾಹಿತಿ ನೀಡಿದ್ದೆ. ಬಳಿಕ ಅವರು ಆರೋಗ್ಯ ವಿಶೇಷ ಆಯುಕ್ತರಿಗೆ ಮೇಲ್ ಮಾಡಿ ದೂರು ನೀಡುವಂತೆ ತಿಳಿಸಿದ್ದರು. ಅವರಿಗೂ ದೂರು ನೀಡಿದ್ದೇನೆಂದು ತಿಳಿಸಿದ್ದಾರೆ. 

ಈ ನಡುವೆ ಆಸ್ಪತ್ರೆಯ ಆಡಳಿತ ಮಂಡಳಿ ಪ್ರತಿಕ್ರಿಯೆ ನೀಡಿ, ಬಿಬಿಎಂಪಿಗೆ ಈ ಕುರಿತು ಮಾಹಿತಿ ನೀಡಲಾಗಿದೆ. ತಾಂತ್ರಿಕ ಸಮಸ್ಯೆಗಳಿಂದಾಗಿ ಈ ರೀತಿಯಾಗಿರಬಹುದು ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT