ಆತ್ಮಹತ್ಯೆ ಮಾಡಿಕೊಂಡ ಸ್ಥಳ (ಒಳಚಿತ್ರದಲ್ಲಿ ದಂಪತಿಗಳಾದ ಸುರೇಶ್ ಹಾಗೂ ವಾಣಿ) 
ರಾಜ್ಯ

ಹಣಕಾಸಿನ ಬಿಕ್ಕಟ್ಟು: ಮಂಗಳೂರಿನ ಖ್ಯಾತ ತಬಲ ಕಲಾವಿದ ದಂಪತಿ ಆತ್ಮಹತ್ಯೆ

ಖ್ಯಾತ ತಬಲಾ ಕಲಾವಿದ ಹಾಗೂ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಗರದ ಪಿಂಟೋಸ್ ಲೇನ್‌ನಲ್ಲಿ ನಡೆದಿದೆ.

ಮಂಗಳೂರು: ಖ್ಯಾತ ತಬಲಾ ಕಲಾವಿದ ಹಾಗೂ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಗರದ ಪಿಂಟೋಸ್ ಲೇನ್‌ನಲ್ಲಿ ನಡೆದಿದೆ.

ತಬಲಾ ಕಲಾವಿದ ಸುರೇಶ್ (52) ಹಾಗೂ ಅವರ ಪತ್ನಿ ವಾಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಾಣಿ ಅವರು ಖಾಸಗಿ ಕಾಲೇಜಿನಲ್ಲಿ ಕರ್ಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಹಣಕಾಸಿನ ಬಿಕ್ಕಟ್ಟು ಇಂತಹಾ ನಿರ್ಧಾರಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಥಳದಲ್ಲಿ ಡೆತ್ ನೋಟ್ ಕಂಡುಬಂದಿದೆ, ಇದರಲ್ಲಿ ಚಿಟ್ ಫಂಡ್ ನಲ್ಲಿನ ಹೂಡಿಕೆಯಿಂದ ಉಂಟಾದ ನಷ್ಟವನ್ನು ಉಲ್ಲೇಖಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಾವಿಯಲ್ಲಿ ಪತಿ ಸುರೇಶ್ ಅವರ ಶವ ಪತ್ತೆಯಾಗಿದ್ದು, ಮನೆಯೊಳಗೆ ಪತ್ನಿ ವಾಣಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕದ್ರಿ ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಕೈಗೊಂಡಿದ್ದಾರೆ. ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT