ರಾಜ್ಯ

ಹಣಕಾಸಿನ ಬಿಕ್ಕಟ್ಟು: ಮಂಗಳೂರಿನ ಖ್ಯಾತ ತಬಲ ಕಲಾವಿದ ದಂಪತಿ ಆತ್ಮಹತ್ಯೆ

Raghavendra Adiga

ಮಂಗಳೂರು: ಖ್ಯಾತ ತಬಲಾ ಕಲಾವಿದ ಹಾಗೂ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಗರದ ಪಿಂಟೋಸ್ ಲೇನ್‌ನಲ್ಲಿ ನಡೆದಿದೆ.

ತಬಲಾ ಕಲಾವಿದ ಸುರೇಶ್ (52) ಹಾಗೂ ಅವರ ಪತ್ನಿ ವಾಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಾಣಿ ಅವರು ಖಾಸಗಿ ಕಾಲೇಜಿನಲ್ಲಿ ಕರ್ಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಹಣಕಾಸಿನ ಬಿಕ್ಕಟ್ಟು ಇಂತಹಾ ನಿರ್ಧಾರಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಥಳದಲ್ಲಿ ಡೆತ್ ನೋಟ್ ಕಂಡುಬಂದಿದೆ, ಇದರಲ್ಲಿ ಚಿಟ್ ಫಂಡ್ ನಲ್ಲಿನ ಹೂಡಿಕೆಯಿಂದ ಉಂಟಾದ ನಷ್ಟವನ್ನು ಉಲ್ಲೇಖಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಾವಿಯಲ್ಲಿ ಪತಿ ಸುರೇಶ್ ಅವರ ಶವ ಪತ್ತೆಯಾಗಿದ್ದು, ಮನೆಯೊಳಗೆ ಪತ್ನಿ ವಾಣಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕದ್ರಿ ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಕೈಗೊಂಡಿದ್ದಾರೆ. ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

SCROLL FOR NEXT