ಸಾ ರಾ ಮಹೇಶ್(ಸಂಗ್ರಹ ಚಿತ್ರ) 
ರಾಜ್ಯ

ರಾಜಕಾಲುವೆ ಒತ್ತುವರಿ ಆರೋಪ ಸಾಬೀತಾಗದಿದ್ರೆ ರೋಹಿಣಿ ಸಿಂಧೂರಿ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು: ಸಾ.ರಾ. ಮಹೇಶ್

ರಾಜಕಾಲುವೆ ಮೇಲೆ ಕಲ್ಯಾಣ ಮಂಟಪ ಕಟ್ಟಿಸಿದ್ದೇನೆ ಎಂಬ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆರೋಪವನ್ನು ಸಾಬೀತುಪಡಿಸಲಿ, ತನಿಖಾಧಿಕಾರಿಯನ್ನಾಗಿ ಸರ್ಕಾರ ಅವರನ್ನೇ ಬೇಕಾದರೆ ನೇಮಿಸಲಿ ಎಂದು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ತಿರುಗೇಟು ನೀಡಿದ್ದಾರೆ.

ಮೈಸೂರು: ರಾಜಕಾಲುವೆ ಮೇಲೆ ಕಲ್ಯಾಣ ಮಂಟಪ ಕಟ್ಟಿಸಿದ್ದೇನೆ ಎಂಬ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆರೋಪವನ್ನು ಸಾಬೀತುಪಡಿಸಲಿ, ತನಿಖಾಧಿಕಾರಿಯನ್ನಾಗಿ ಸರ್ಕಾರ ಅವರನ್ನೇ ಬೇಕಾದರೆ ನೇಮಿಸಲಿ ಎಂದು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ತಿರುಗೇಟು ನೀಡಿದ್ದಾರೆ.

ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿ ಮುಂದೆ ಧರಣಿ ನಡೆಸುತ್ತಿರುವ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನಾನು ರೋಹಿಣಿ ಸಿಂಧೂರಿಯವರನ್ನು ಎಂದೂ ವರ್ಗಾವಣೆ ಮಾಡಿ ಎಂದು ಹೇಳಿಲ್ಲ, ವರ್ಗಾವಣೆ ಮಾಡಿ ಎಂದು ಹೇಳಿದ್ದೇನೆ ಎಂದರು.

ನಿನ್ನೆ ರೋಹಿಣಿ ಸಿಂಧೂರಿಯವರು ನನ್ನ ವಿರುದ್ಧ ಅಕ್ರಮ ಭೂ ಒತ್ತುವರಿ ದಾಖಲೆ ಬಿಡುಗಡೆ ಮಾಡಿದ್ದಾರೆ. ಕಳೆದ 15 ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಕೂಡ ನನ್ನ ಮತ್ತು ರೋಹಿಣಿ ಸಿಂಧೂರಿಯವರ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ರಾಜಕಾಲುವೆ ಒತ್ತುವರಿ ಮಾಡಿ ಕಲ್ಯಾಣ ಮಂಟಪ ಕಟ್ಟಿಸಿದ್ದೇನೆ ಎಂದು ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ, ನನ್ನ ಒಡೆತನದಲ್ಲಿರುವ ಕಲ್ಯಾಣ ಮಂಟಪದ ಜಾಗ ಬಗ್ಗೆ  ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸಿ ಸಾಬೀತುಪಡಿಸಲಿ ಎಂದು ಸರ್ಕಾರವನ್ನು, ಮುಖ್ಯಮಂತ್ರಿಗಳನ್ನು ಒತ್ತಾಯಿಸುತ್ತೇನೆ ಎಂದರು.

ಆರೋಪ ಸಾಬೀತಾಗದಿದ್ರೆ ರೋಹಿಣಿ ಸಿಂಧೂರಿ ರಾಜೀನಾಮೆ ನೀಡಬೇಕು: ನಿಯಮ ಉಲ್ಲಂಘಿಸಿ ನಾನು ಕಲ್ಯಾಣ ಮಂಟಪ ಕಟ್ಟಿಸಿರುವುದು ಸಾಬೀತಾದರೆ ತಕ್ಷಣವೇ ಅದನ್ನು ರಾಜ್ಯಪಾಲರ ಹೆಸರಿಗೆ ನೋಂದಾವಣಿ ಮಾಡಿಸಿ ನನ್ನ ಸಾರ್ವಜನಿಕ ಜೀವನಕ್ಕೆ ವಿದಾಯ ಹೇಳುತ್ತೇನೆ, ಒಂದು ವೇಳೆ ಕಲ್ಯಾಣ ಮಂಟಪ ಕಟ್ಟಿಸಿದ್ದು ಅಕ್ರಮವಲ್ಲ ಎಂದು ನನ್ನ ಪರ ವರದಿ ಬಂದರೆ ರೋಹಿಣಿ ಸಿಂಧೂರಿಯವರು ತಕ್ಷಣವೇ ತಮ್ಮ ಐಎಎಸ್ ಹುದ್ದೆಗೆ ರಾಜೀನಾಮೆ ಸಲ್ಲಿಸಿ ಅವರ ಊರಾದ ಆಂಧ್ರಕ್ಕೇ ಹೋಗಿ ಮನೆಯಲ್ಲಿ ಅಡುಗೆ ಕೆಲಸ ಮಾಡಿಕೊಂಡು ಮಕ್ಕಳನ್ನು ನೋಡಿಕೊಂಡು ಇರಬೇಕು ಎಂದು ಸಾ ರಾ ಮಹೇಶ್ ಸವಾಲು ಹಾಕಿದ್ದಾರೆ. 

ಪ್ರಾದೇಶಿಕ ಆಯುಕ್ತರಿಂದ ಭರವಸೆ: ಶಾಸಕ ಸಾ ರಾ ಮಹೇಶ್ ಅವರ ದೂರು ಸ್ವೀಕರಿಸಿದ ಮೈಸೂರಿನ ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್ ಐವರು ಸದಸ್ಯರನ್ನೊಳಗೊಂಡ ಸಮಿತಿಯಿಂದ ರಾಜಕಾಲುವೆ ಒತ್ತುವರಿ ಬಗ್ಗೆ ತನಿಖೆ ನಡೆಸಿ ಸೋಮವಾರ ವರದಿ ಸಲ್ಲಿಸುವುದಾಗಿ ಹೇಳಿದ್ದಾರೆ. ಹೀಗಾಗಿ ಸಾ ರಾ ಮಹೇಶ್ ತಾತ್ಕಾಲಿಕವಾಗಿ ಧರಣಿ ಹಿಂಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT