ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ನಿಯಮ ಗಾಳಿಗೆ ತೂರಿ ಜನರಿಗೆ ತರಕಾರಿ, ಕೋಳಿ ವಿತರಿಸಿದ ಕಾಂಗ್ರೆಸ್ ನಾಯಕ ವಿಜಯ್ ಕುಮಾರ್

ಕೊರೋನಾ ನಿಯಮಗಳನ್ನು ಗಾಳಿಗೆ ತೂರಿದ ಕಾಂಗ್ರೆಸ್ ನಾಯಕ ವಿಜಯ್ ಕುಮಾರ್ ಅವರು ಹಾಗೂ ಅವರ ಪತ್ನಿ ಮಂಜುಳಾ ವಿಜಯ್ ಕುಮಾರ್ ಅವರು, ಜನರಿಗೆ ಅಗತ್ಯ ವಸ್ತುಗಳು, ತರಕಾರಿ ಹಾಗೂ ಕೋಳಿ ವಿತರಿಸಿದ್ದಾರೆ. 

ಬೆಂಗಳೂರು: ರಾಜಾಜಿನಗರದ ಶಿವಗರದಲ್ಲಿ ಕೊರೋನಾ ನಿಯಮಗಳನ್ನು ಗಾಳಿಗೆ ತೂರಿದ ಕಾಂಗ್ರೆಸ್ ನಾಯಕ ವಿಜಯ್ ಕುಮಾರ್ ಹಾಗೂ ಅವರ ಪತ್ನಿ ಮಂಜುಳಾ ವಿಜಯ್ ಕುಮಾರ್ ಅವರು, ಜನರಿಗೆ ಅಗತ್ಯ ವಸ್ತುಗಳು, ತರಕಾರಿ ಹಾಗೂ ಕೋಳಿ ವಿತರಿಸಿದ್ದಾರೆ. 

ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರ ಮಾರ್ಗಸೂಚಿಯಂತೆ ನಾವು ಕೆಲಸ ಮಾಡುತ್ತಿದ್ದೇವೆ. ಕಳೆದ ಒಂದೂವರೆ ತಿಂಗಳಿನಿಂದ ಬಡವರಿಗೆ ಉಪಹಾರ, ಮಧ್ಯಾಹ್ನದ ಊಟ ನೀಡಲಾಗುತ್ತಿದೆ. ಅಗತ್ಯ ಇರುವವರಿಗೆ 15-18 ಕೆಜಿ ತರಕಾರಿಗಳನ್ನು ವಿತರಿಸಲಾಗಿದೆ. ಪ್ಯಾಕೇಜ್ ನಲ್ಲಿ ಕೋಳಿಯನ್ನು ಸೇರ್ಪಡೆಗೊಳಿಸಿರಲಿಲ್ಲ. ಆದರೆ, ಕೋಳಿ ಫಾರ್ಮ್ ನಡೆಸುತ್ತಿದ್ದ ಕೆಲ ಯುವಕರು ಆರ್ಥಿಕ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಸಹಾಯ ಮಾಡುವ ಸಲುವಾಗಿ 1.2 ಟನ್ ಕೋಳಿಗಳನ್ನು ಖರೀದಿ ಮಾಡಿದ್ದೆವು. ಇದರಲ್ಲಿ 600 ಕೋಳಿಗಳನ್ನು ವಿತರಣೆ ಮಾಡಲಾಗಿದೆ ಎಂದು ವಿಜಯ್ ಕುಮಾರ್ ಅವರು ಹೇಳಿದ್ದಾರೆ. 

ಕೋಳಿ ವಿತರಣೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಹೆಚ್ಚಿನ ಜನರು ಸೇರುವಂತಾಗಿತ್ತು ಎಂದು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಹೇಳಿದ್ದಾರೆ. 

ಜನರು ಮಾಸ್ಕ್ ಗಳನ್ನು ಧರಿಸಿದ್ದರು. ಕೋಳಿ ವಿತರಿಸುತ್ತಿರುವ ಕುರಿತು ನಾವು ಜನರು ಜನರಿಗೆ ಯಾವುದೇ ಮಾಹಿತಿಗಳನ್ನೂ ನೀಡಿರಲಿಲ್ಲ ಎಂದು ವಿಜಯ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!