ಸಂಗ್ರಹ ಚಿತ್ರ 
ರಾಜ್ಯ

ಕಾರ್ಯಪಡೆ ವರದಿ ಸಲ್ಲಿಸುವವರೆಗೆ ಕೋವಿಡ್ ಆರೈಕೆ ಕೇಂದ್ರ ಮುಚ್ಚಬೇಡಿ: ಬಿಬಿಎಂಪಿಗೆ 'ಹೈ' ಸೂಚನೆ

ಕೊರೋನಾ 3ನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ಕೊರೋನಾ 3ನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ ಕೈಗೊಳ್ಳುವ ಸಂಬಂಧ ವರದಿ ನೀಡಲು ರಚಿಸಿರುವ ಕಾರ್ಯಪಡೆ ವರದಿ ಸಲ್ಲಿಸುವವರೆಗೆ ಕೋವಿಡ್ ಆರೈಕೆ ಕೇಂದ್ರಗಳನ್ನು ಮುಚ್ಚಬಾರದು ಎಂದು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶಿಸಿದೆ. 

ಬೆಂಗಳೂರು: ಕೊರೋನಾ 3ನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ಕೊರೋನಾ 3ನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ ಕೈಗೊಳ್ಳುವ ಸಂಬಂಧ ವರದಿ ನೀಡಲು ರಚಿಸಿರುವ ಕಾರ್ಯಪಡೆ ವರದಿ ಸಲ್ಲಿಸುವವರೆಗೆ ಕೋವಿಡ್ ಆರೈಕೆ ಕೇಂದ್ರಗಳನ್ನು ಮುಚ್ಚಬಾರದು ಎಂದು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶಿಸಿದೆ. 

ಕೊರೋನಾ ನಿರ್ವಹಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಕುರಿತ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿತು. 

ಕೊರೋನಾ ಮೂರನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ ಕೈಗೊಳ್ಳುವ ಸಂಬಂಧ ವರದಿ ನೀಡಲು ರಚಿಸಿರುವ ಕಾರ್ಯಪಡೆ ವರದಿ ನೀಡಿ, ಅದರ ಮೇಲೆ ಸರ್ಕಾರ ನಿರ್ಧಾರ ಕೈಗೊಳ್ಳುವವರೆಗೆ ಯಾವುದೇ ಕೋವಿಡ್ ಆರೈಕೆ ಕೇಂದ್ರಗಳನ್ನು ಮುಚ್ಚಬಾರದು ಅಥವಾ ರದ್ದುಗೊಳಿಸಬಾರದು ಎಂದು ನ್ಯಾಯಾಲಯ ನಿರ್ದೇಶನ ನೀಡಿತು.

ಬಿಬಿಎಂಪಿ ವಕೀಲರು, ಯಾವುದೇ ಕೋವಿಡ್ ಆರೈಕೆ ಕೇಂದ್ರಗಳನ್ನು ಮುಚ್ಚಿಲ್ಲ್. ಮೂರನೇ ಅಲೆ ಎದುರಿಸಲು ಪಾಲಿಕೆ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ. ಇನ್ನೂ ನಗರದ 1,311 ಕೊಳೆಗೇರಿಗಳಲ್ಲಿ ಈ ವರೆಗೆ ಸುಮಾರು 10,91,692 ಮಂದಿಗೆ ಲಸಿಕೆ ಹಾಕಲಾಗಿದೆ. ಲಸಿಕೆ ಅಭಿಯಾನ ಮುಂದುವರಿದಿದೆ ಎಂದು ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT