ಸಂಗ್ರಹ ಚಿತ್ರ 
ರಾಜ್ಯ

ಕಾರ್ಯಪಡೆ ವರದಿ ಸಲ್ಲಿಸುವವರೆಗೆ ಕೋವಿಡ್ ಆರೈಕೆ ಕೇಂದ್ರ ಮುಚ್ಚಬೇಡಿ: ಬಿಬಿಎಂಪಿಗೆ 'ಹೈ' ಸೂಚನೆ

ಕೊರೋನಾ 3ನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ಕೊರೋನಾ 3ನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ ಕೈಗೊಳ್ಳುವ ಸಂಬಂಧ ವರದಿ ನೀಡಲು ರಚಿಸಿರುವ ಕಾರ್ಯಪಡೆ ವರದಿ ಸಲ್ಲಿಸುವವರೆಗೆ ಕೋವಿಡ್ ಆರೈಕೆ ಕೇಂದ್ರಗಳನ್ನು ಮುಚ್ಚಬಾರದು ಎಂದು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶಿಸಿದೆ. 

ಬೆಂಗಳೂರು: ಕೊರೋನಾ 3ನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ಕೊರೋನಾ 3ನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ ಕೈಗೊಳ್ಳುವ ಸಂಬಂಧ ವರದಿ ನೀಡಲು ರಚಿಸಿರುವ ಕಾರ್ಯಪಡೆ ವರದಿ ಸಲ್ಲಿಸುವವರೆಗೆ ಕೋವಿಡ್ ಆರೈಕೆ ಕೇಂದ್ರಗಳನ್ನು ಮುಚ್ಚಬಾರದು ಎಂದು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶಿಸಿದೆ. 

ಕೊರೋನಾ ನಿರ್ವಹಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಕುರಿತ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿತು. 

ಕೊರೋನಾ ಮೂರನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ ಕೈಗೊಳ್ಳುವ ಸಂಬಂಧ ವರದಿ ನೀಡಲು ರಚಿಸಿರುವ ಕಾರ್ಯಪಡೆ ವರದಿ ನೀಡಿ, ಅದರ ಮೇಲೆ ಸರ್ಕಾರ ನಿರ್ಧಾರ ಕೈಗೊಳ್ಳುವವರೆಗೆ ಯಾವುದೇ ಕೋವಿಡ್ ಆರೈಕೆ ಕೇಂದ್ರಗಳನ್ನು ಮುಚ್ಚಬಾರದು ಅಥವಾ ರದ್ದುಗೊಳಿಸಬಾರದು ಎಂದು ನ್ಯಾಯಾಲಯ ನಿರ್ದೇಶನ ನೀಡಿತು.

ಬಿಬಿಎಂಪಿ ವಕೀಲರು, ಯಾವುದೇ ಕೋವಿಡ್ ಆರೈಕೆ ಕೇಂದ್ರಗಳನ್ನು ಮುಚ್ಚಿಲ್ಲ್. ಮೂರನೇ ಅಲೆ ಎದುರಿಸಲು ಪಾಲಿಕೆ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ. ಇನ್ನೂ ನಗರದ 1,311 ಕೊಳೆಗೇರಿಗಳಲ್ಲಿ ಈ ವರೆಗೆ ಸುಮಾರು 10,91,692 ಮಂದಿಗೆ ಲಸಿಕೆ ಹಾಕಲಾಗಿದೆ. ಲಸಿಕೆ ಅಭಿಯಾನ ಮುಂದುವರಿದಿದೆ ಎಂದು ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT