ಲಾಕ್ ಡೌನ್ ಸಮಯದಲ್ಲಿ ಬೆಂಗಳೂರು ಪೊಲೀಸರು ವಾಹನ ತಪಾಸಣೆ ಮಾಡುತ್ತಿರುವುದು 
ರಾಜ್ಯ

ಜೂನ್ 14ರಿಂದ ಮೊದಲ ಹಂತದ ಅನ್ ಲಾಕ್: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ; ಏನಿರುತ್ತೆ? ಏನಿರಲ್ಲ?

ಕೊರೋನಾ ಎರಡನೇ ಅಲೆಯಿಂದಾಗಿ ತತ್ತರಿಸಿದ್ದ ಕರ್ನಾಟಕದಲ್ಲಿ ಲಾಕ್ ಡೌನ್ ಘೋಷಿಸಲಾಗಿತ್ತು. ಇದೀಗ ಒಂದೂವರೆ ತಿಂಗಳ ಬಳಿಕ ಕೆಲ ನಿರ್ಬಂಧಗಳೊಂದಿಗೆ ಅನ್ ಲಾಕ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು ಇದಕ್ಕಾಗಿ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಬೆಂಗಳೂರು: ಕೊರೋನಾ ಎರಡನೇ ಅಲೆಯಿಂದಾಗಿ ತತ್ತರಿಸಿದ್ದ ಕರ್ನಾಟಕದಲ್ಲಿ ಲಾಕ್ ಡೌನ್ ಘೋಷಿಸಲಾಗಿತ್ತು. ಇದೀಗ ಒಂದೂವರೆ ತಿಂಗಳ ಬಳಿಕ ಕೆಲ ನಿರ್ಬಂಧಗಳೊಂದಿಗೆ ಅನ್ ಲಾಕ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು ಇದಕ್ಕಾಗಿ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. 

ಜು. 14ರಿಂದ 21ರವರೆಗೆ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿದ್ದು ದೈನಂದಿನ ಹಾಗೂ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಿದೆ. ಇನ್ನು ಪರಿಸ್ಥಿತಿ ನೋಡಿಕೊಂಡು ಹಂತ ಹಂತವಾಗಿ ಅನ್ ಲಾಕ್ ಮಾಡಲಾಗುತ್ತದೆ. ಪ್ರತಿ ದಿನ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5ಗಂಟೆಯವರೆಗೆ ರಾತ್ರಿ ಕರ್ಫ್ಯೂ ಇರಲಿದೆ.

ಸೋಂಕು ಇಳಿಮುಖವಾಗದ 11 ಜಿಲ್ಲೆಗಳಲ್ಲಿ ನಿರ್ಬಂಧ ಮಾರ್ಗಸೂಚಿಗಳು ಯಥಾಸ್ಥಿತಿಯಲ್ಲಿ ಮುಂದುವರಿಯಲಿವೆ. ಅದರಂತೆ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಾಮರಾಜನಗರ, ಮೈಸೂರು, ಹಾಸನ, ದಕ್ಷಿಣ ಕನ್ನಡ,  ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ  ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇರಲ್ಲ. ಯಥಾಸ್ಥಿತಿ ಮುಂದುವರಿಯಲಿದೆ ಎಂದರು. ಕೆಲ ಜಿಲ್ಲೆಗಳಲ್ಲಿ ಇನ್ನು ಪಾಸಿಟಿವಿಟಿ ದರ ಶೇಕಡ 5ಕ್ಕಿಂತ ಜಾಸ್ತಿ ಇರುವುದರಿಂದ ಸದ್ಯಕ್ಕೆ ಅಂತಾರಾಜ್ಯ ಬಸ್ ಸಂಚಾರಕ್ಕೆ ಅವಕಾಶವಿಲ್ಲ. 

ನಿಷೇಧಾಜ್ಞೆ ನಿಯಮಗಳು
* ವಾರಾಂತ್ಯಗಳಲ್ಲಿ ಕಠಿಣ ಕರ್ಫ್ಯೂ ಇರುವುದರಿಂದ ಅಗತ್ಯ ಓಡಾಟಕ್ಕೆ ಬ್ರೇಕ್.
* ಅನಾರೋಗ್ಯ ಪೀಡಿತ ರೋಗಿಗಳ ತುರ್ತು ಸಂಚಾರಕ್ಕೆ ಅವಕಾಶ.
* ಮೆಡಿಕಲ್ ಸಿಬ್ಬಂದಿಗೆ ಅವಕಾಶ
* ಸರಕು ಸಾಗಣೆ ಮತ್ತು ಆನ್ ಲೈನ್ ಸೇವೆಗಳಿಗೆ ಅವಕಾಶ
* ಅಂತರ್ಜಾಲ, ಟೆಲಿಕಾಂ ಸೇವೆ ಸಿಬ್ಬಂದಿ ಓಡಾಟಕ್ಕೆ ಅವಕಾಶ
* ರಾತ್ರಿಪಾಳಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಐಡಿ ಕಾರ್ಡ್ ಇಟ್ಟುಕೊಂಡು ಸಂಚಾರಕ್ಕೆ ಅವಕಾಶ.
* ವಿಮಾನ ಮತ್ತು ರೈಲು ಸಂಚಾರಕ್ಕೆ ಅವಕಾಶ. ಟಿಕೆಟ್ ತೋರಿಸಿ ಪ್ರಯಾಣಿಸಬಹುದು.

19 ಜಿಲ್ಲೆಯಗಳಲ್ಲಿ ಮೊದಲ ಹಂತದ ಸಡಿಲಿಕೆ
* ಆಹಾರ, ಹಣ್ಣು ತರಕಾರಿ, ಮಾಂಸ, ಮೀನು, ಡೈರಿ ಪ್ರಾಡೆಕ್ಟ್, ದಿನಸಿ ಅಂಗಡಿಗಳು ಬೆಳಗ್ಗೆ 6ರಿಂದ 2 ಗಂಟೆಯವರೆಗೆ ತೆರೆಯಲು ಅವಕಾಶ
* ಸ್ಟೀಲ್, ಸಿಮೆಂಟ್ ಅಂಗಡಿ ತೆರೆಯಲು 6ರಿಂದ 2 ಗಂಟೆಯವರೆಗೆ ಅವಕಾಶ
* ಎಲ್ಲಾ ಕಾರ್ಖಾನೆಗಳು ಶೇ. 50ರಷ್ಟು ಸಿಬ್ಬಂದಿ ಕೆಲಸಕ್ಕೆ ಅವಕಾಶ
* ಗಾರ್ಮೆಂಟ್ಸ್ ಗಳಲ್ಲಿ ಶೇ. 30ರಷ್ಟು ಸಿಬ್ಬಂದಿಗೆ ಅವಕಾಶ
* ಬೆಳಗ್ಗೆ 5 ರಿಂದ 10 ಗಂಟೆಯವರೆಗೆ ವಾಯುವಿಹಾರಕ್ಕಾಗಿ ಪಾಕ್ ಗಳ ಓಪನ್ ಗೆ ಅವಕಾಶ
* ಆಟೋ, ಟ್ಯಾಕ್ಸಿಯಲ್ಲಿ ಇಬ್ಬರ ಪ್ರಯಾಣಕ್ಕೆ ಮಾತ್ರ ಅವಕಾಶ
* ಆರೋಗ್ಯ ಕಾರ್ಯಕರ್ತರಿಗೆ ಕೌಶಲ್ಯ ತರಬೇತಿ ನೀಡಲು ಅವಕಾಶ
* ಬೆಳಗ್ಗೆ 6ರಿಂದ 2 ಗಂಟೆಯವರೆಗೆ ಕನ್ನಡಕದ ಅಂಗಡಿ ತೆರೆಯಲು ಅವಕಾಶ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT