ಸಾಂದರ್ಭಿಕ ಚಿತ್ರ 
ರಾಜ್ಯ

ಗ್ರೇಡ್ ಸುಧಾರಿಸಿಕೊಳ್ಳಲು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ: ಶಿಕ್ಷಣ ಇಲಾಖೆ

ಈ ವರ್ಷ ದ್ವಿತೀಯ ಪಿಯುಸಿಗೆ ತೇರ್ಗಡೆ ಹೊಂದುತ್ತಿರುವ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ತಮ್ಮ ಗ್ರೇಡ್ ಗಳನ್ನು ಸುಧಾರಿಸಿಕೊಳ್ಳಲು ಮೌಲ್ಯಮಾಪನವನ್ನು ಆಯ್ಕೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಅವಕಾಶ ಕೊಟ್ಟಿದೆ.

ಬೆಂಗಳೂರು: ಈ ವರ್ಷ ದ್ವಿತೀಯ ಪಿಯುಸಿಗೆ ತೇರ್ಗಡೆ ಹೊಂದುತ್ತಿರುವ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ತಮ್ಮ ಗ್ರೇಡ್ ಗಳನ್ನು ಸುಧಾರಿಸಿಕೊಳ್ಳಲು ಮೌಲ್ಯಮಾಪನವನ್ನು ಆಯ್ಕೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಅವಕಾಶ ಕೊಟ್ಟಿದೆ.

ಈ ವರ್ಷ ಕೊರೋನಾ ಕಾರಣದಿಂದ ಪ್ರಥಮ ಪಿಯುಸಿ ಪರೀಕ್ಷೆ ರದ್ದು ಮಾಡಿರುವ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಅವರ ಕನಿಷ್ಠ ಅಂಕಗಳ ಜೊತೆಗೆ ತೆರೆದ ಪುಸ್ತಕ ಪರೀಕ್ಷಾ ವ್ಯವಸ್ಥೆಯಡಿ ಅಂಕಗಳನ್ನು ನೀಡುತ್ತದೆ. ಇಲಾಖೆ ಈಗಾಗಲೇ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಿದೆ.

ಪದವಿಪೂರ್ವ ಶಿಕ್ಷಣ ಇಲಾಖೆಯ ವೆಬ್ ಸೈಟ್ ನಲ್ಲಿ ಮಾದರಿ ಪ್ರಶ್ನೆಪತ್ರಿಕೆಯ ಕೊಂಡಿಯನ್ನು ನೀಡಲಾಗಿದೆ. ಶೈಕ್ಷಣಿಕ ವರ್ಷದ ಕೋರ್ಸ್ ವರ್ಕ್ ನಿಂದಲೇ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎಂದು ಇಲಾಖೆಯ ನಿರ್ದೇಶಕ ಸ್ನೇಹಲ್ ಆರ್ ಹೇಳುತ್ತಾರೆ.

ವಿದ್ಯಾರ್ಥಿಗಳು ಎರಡು ಪ್ರಶ್ನೆಪತ್ರಿಕೆಗಳನ್ನು ಬರೆಯಬೇಕು. ಒಂದು ಜೂನ್ 10ರಿಂದ 20ರೊಳಗೆ 10 ದಿನಗಳ ಕಾಲಾವಕಾಶವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ನಂತರ 5 ದಿನಗಳ ಅಂತರದ ನಂತರ ಜೂನ್ 26ರ ಹೊತ್ತಿಗೆ ಎರಡನೇ ಪ್ರಶ್ನೆಪತ್ರಿಕೆಯ ಸೆಟ್ ಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT