ಕೆಂಪೇಗೌಡ ಬಸ್ ನಿಲ್ದಾಣ 
ರಾಜ್ಯ

ಬೆಡ್'ಗೂ ಕ್ಯೂ ಸಿಸ್ಟಮ್: ವಿನೂತನ ವ್ಯವಸ್ಥೆಗೆ ಸಚಿವ ಅರವಿಂದ ಲಿಂಬಾವಳಿ ಚಾಲನೆ

ಕೊರೋನಾ ರೋಗಿಗಳನ್ನು ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲು ಬಿಬಿಎಂಪಿಯಿಂದಲೇ ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲಾಗಿದೆ. ಬೆಡ್ ಬ್ಲಾಕ್ ಮಾಡುವ ದಂಧೆಗೆ ಇದರಿಂದ ಕಡಿವಾಣ ಬೀಳಲಿದೆ ಎಂದು ಸಚಿವ ಅರವಿಂದ ಲಿಂಬಾವಳಿಯವರು ಹೇಳಿದ್ದಾರೆ. 

ಬೆಂಗಳೂರು: ಕೊರೋನಾ ರೋಗಿಗಳನ್ನು ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲು ಬಿಬಿಎಂಪಿಯಿಂದಲೇ ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲಾಗಿದೆ. ಬೆಡ್ ಬ್ಲಾಕ್ ಮಾಡುವ ದಂಧೆಗೆ ಇದರಿಂದ ಕಡಿವಾಣ ಬೀಳಲಿದೆ ಎಂದು ಸಚಿವ ಅರವಿಂದ ಲಿಂಬಾವಳಿಯವರು ಹೇಳಿದ್ದಾರೆ. 

ಮಾಗಡಿ ರಸ್ತೆಯ ಆರೋಗ್ಯ ಸೌಧದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಹೊಸ ವ್ಯವಸ್ಥೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಮೊದಲಿಗೆ ಈ ವ್ಯವಸ್ಥೆಯನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸುತ್ತಿದ್ದು, ನಂತರ ರಾಜ್ಯಾದಾದ್ಯಂತ ಇದೇ ಪದ್ಧತೆ ಅನುಸರಿಸಲಾಗುವುದು. ದೇಶದ ಬೇರೆ ಯಾವ ಭಾಗದಲ್ಲಿಯೂ ಇಂತಹ ವ್ಯವಸ್ಥೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಈ ಹೊಸ ಪದ್ಧತಿ 3ನೇ ಅಲೆಗೆ ಅತ್ಯಂತ ಸಹಕಾರಿಯಾಗಲಿದೆ. ಟ್ರಯಾಜಿಂಗ್ ಕ್ಯೂ ಮತ್ತು ಟ್ಯಯಾಜಿಂಗ್ ಆದ ನಂತರದ ಬೆಡ್ ಕ್ಯೂ ಸಿಸ್ಟಮ್ ಇದರಲ್ಲಿದೆ. ಸಾರ್ವಜನಿಕರಿಗೆ ಈ ಮಾಹಿತಿ ಪ್ರತಿ ದಿನವೂ ವೆಬ್ ಸೈಟ್ ನಲ್ಲಿ ಸಿಗಲಿದೆ. ಪರಿಸ್ಥಿತಿ ಗಂಭೀರವಾಗಿರುವ ರೋಗಿಗಳಿಗೆ ಸೆಂಟರ್ ಬೆಡ್ ಸಿಸ್ಟಮ್ ನಿಂದ ಬೆಡ್ ನೀಡಲು ಅವಕಾಶವಿದೆ. ಪಾರದರ್ಶಕ ಮತ್ತು ಪರಿಣಾಕಾರಿಯಾಗಿ ನಿರ್ವಹಣೆ ಮಾಡಬಹುದು ಎಂದು ಮಾಹಿತಿ ನೀಡಿದ್ದಾರೆ. 

ಕ್ಯೂಯಿಂಗ್ ವ್ಯವಸ್ಥೆಯಿಂದ ಆಸ್ಪತ್ರೆ ಪ್ರವೇಶ ಪಡೆಯಲು ಬಯಸುವ ಎಲ್ಲಾ ರೋಗಿಗಳು ಟ್ರಯಾಜ್ ವಿವರಗಳನ್ನು ಎಲೆಕ್ಟ್ರಾನಿಕ್ ಪದ್ಧತಿ ಮೂಲಕ ದಾಖಲಿಸಲಾಗುತ್ತದೆ. ಕ್ಲಿನಿಕಲ್ ಪರಿಸ್ಥಿತಿಗಳ ಆಧಾರದ ಮೇಲೆ ಸೋಂಕಿತರಿಗೆ ಆಸ್ಪತ್ರೆ/ಸಿಸಿಸಿ ಹಾಸಿಗೆಯನ್ನು ಶಿಫಾರಸು ಮಾಡಲಾಗುವುದು. ರೋಗಿಗಳಿಗೆ ನಿರ್ದಿಷ್ಟ ಹಾಸಿಗೆ ಮತ್ತು ವಲಯದ ಪ್ರಕಾರ ಕ್ಯೂ ಸಂಖ್ಯೆಯನ್ನು ನಿಗದಿ ಮಾಡಲಾಗುತ್ತದೆ. ಚಿಕಿತ್ಸೆಯ ಸಮಯದ ಆಧಾರದ ಮೇಲೆ ಕ್ಯೂ ಸಂಖ್ಯೆಯನ್ನು ಸ್ವಯಂಚಾಲಿತವಾಗಿ ನಿಯೋಜಿಸಲಾಗುವುದು ಎಂದು ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT