ನಾರಾಯಣ ಗೌಡ 
ರಾಜ್ಯ

ಜಕ್ಕೂರ್ ಏರೋಡ್ರಮ್ ಬಳಸುತ್ತಿರುವ ಕಂಪನಿಗಳಿಂದ ಬಾಡಿಗೆ ಸಂಗ್ರಹ ಮಾಡಿ: ಅಧಿಕಾರಿಗಳಿಗೆ ಸಚಿವ ನಾರಾಯಣ ಗೌಡ ಸೂಚನೆ

ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಆವರಣದಲ್ಲಿ ವಿವಿಧ ಕಂಪನಿಗಳಿಂದ ಬಾಡಿಗೆ ಹಣ ವಸೂಲಿಯಾಗದಿರುವುದಕ್ಕೆ ಅಧಿಕಾರಿಗಳ ವಿರುದ್ಧ ಯುವ ಸಬಲೀಕರಣ ಗರಂ ಆಗಿದ್ದು, ಮತ್ತಷ್ಟು ವಿಳಂಬವಾದರೆ ಅಧಿಕಾರಿಗಳ ವಿರುದ್ಧವೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. 

ಬೆಂಗಳೂರು: ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಆವರಣದಲ್ಲಿ ವಿವಿಧ ಕಂಪನಿಗಳಿಂದ ಬಾಡಿಗೆ ಹಣ ವಸೂಲಿಯಾಗದಿರುವುದಕ್ಕೆ ಅಧಿಕಾರಿಗಳ ವಿರುದ್ಧ ಯುವ ಸಬಲೀಕರಣ ಗರಂ ಆಗಿದ್ದು, ಮತ್ತಷ್ಟು ವಿಳಂಬವಾದರೆ ಅಧಿಕಾರಿಗಳ ವಿರುದ್ಧವೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. 

ಶುಕ್ರವಾರ ನಗರದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಆವರಣದಲ್ಲಿ ವಿವಿಧ ಕಂಪೆನಿಗಳಿಂದ ಇನ್ನೂ ಯಾಕೆ ಬಾಡಿಗೆ ಹಣ ವಸೂಲಿ ಮಾಡಿಲ್ಲ. ಮೂರು ತಿಂಗಳ ಹಿಂದೆಯೇ ಈ ಬಗ್ಗೆ ಸೂಚನೆ ನೀಡಲಾಗಿತ್ತು. ಆದಾಗ್ಯೂ ಹಣ ಪಾವತಿಯಾಗಿಲ್ಲ. ದಿವ್ಯ ನಿರ್ಲಕ್ಷ್ಯ ಈ ವಿಳಂಬಕ್ಕೆ ಕಾರಣ. ತಕ್ಷಣ ಹಣ ವಸೂಲಿಯಾಗಬೇಕು. ಅಗತ್ಯವಿದ್ದಲ್ಲಿ ಕಾನೂನಾತ್ಮಕವಾಗಿ ನೋಟಿಸ್ ನೀಡಿ. ಇನ್ನೂ ವಿಳಂಬವಾದರೆ ನಿಮ್ಮ ಮೇಲೆಯೇ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. 

ಜಕ್ಕೂರು ಏರೋಡ್ರಮ್‍ನಲ್ಲಿ ವಿಮಾನ ಹಾರಾಟಕ್ಕೆ ಹಾಗೂ ನಿಲ್ದಾಣಕ್ಕೆ ಸ್ಥಳ ನೀಡಲಾಗಿದೆ. ಮೂರು ತಿಂಗಳ ಹಿಂದೆ ಸಭೆ ನಡೆಸಿ, ಬಾಕಿ ಇರುವ ಬಾಡಿಗೆ ವಸೂಲಾಗಬೇಕು ಹಾಗೂ ದರ ಪರಿಷ್ಕರಣೆ ಮಾಡಿ ಮಾಹಿತಿ ನೀಡುವಂತೆ ಸಚಿವರು ಸೂಚಿಸಿದ್ದರು. ಆದರೆ ಈ ವರೆಗೆ ಯಾವುದೇ ರೀತಿಯ ಕ್ರಮ ಜರುಗಿಸದೆ ಇದ್ದ ಕಾರಣ ಸಚಿವ ಡಾ. ನಾರಾಯಣಗೌಡ ಅವರು ಅಧಿಕಾರಿಗಳ ವಿರುದ್ಧ ಗರಂ ಆದರು.

ಒಂದೂವರೆ ಕೋಟಿ ರೂ. ಬಾಡಿಗೆ ಹಣ ಬಾಕಿ ಇದ್ದಾಗಲೇ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿತ್ತು. ಈಗ ಅದು ಸುಮಾರು 5 ಕೋಟಿ ರೂ. ಗೆ ತಲುಪಿದೆ. ಆದಾಗ್ಯೂ ನೋಟಿಸ್ ನೋಡಿ ಬಾಕಿ ಹಣ ಪಾವತಿಸಿಕೊಳ್ಳುವ ಕೆಲಸ ಮಾಡಿಲ್ಲ. ಬಾಡಿಗೆ ಹಣ ನೀಡದ ಕಂಪೆನಿಗಳ ವಾಣಿಜ್ಯ ಕಾರ್ಯನಿರ್ವಹಣೆಯನ್ನು ತಕ್ಷಣ ಸ್ಥಗಿತಗೊಳಿಸಿ ಕ್ರಮ ತೆಗೆದುಕೊಳ್ಳಿ. ಲಕ್ಷಾಂತರ ರೂಪಾಯಿ ಬಾಡಿಗೆ ಬರಬೇಕಾದ ಜಾಗದಲ್ಲಿ ಇನ್ನೂ ನೂರಾರು ರೂಪಾಯಿ ದರ ಇದೆ. ದರ ಪರಿಷ್ಕರಣೆ ಮಾಡುವಂತೆ ಸೂಚಿಸಿದ್ದರೂ, ವರದಿ ನೀಡಿಲ್ಲ. ತಕ್ಷಣ ಕ್ರಮ ಜರುಗಿಸಿ ವರದಿ ನೀಡದಿದ್ದರೆ ನಿಮ್ಮ ಮೇಲೆಯೇ ಮೊದಲು ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಸಚಿವ ಡಾ. ನಾರಾಯಣಗೌಡ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT