ಸಾಂದರ್ಬಿಕ ಚಿತ್ರ 
ರಾಜ್ಯ

ಲಾಕ್ ಡೌನ್ ನಿರ್ಬಂಧ ಸಡಿಲಿಕೆ: ಅತ್ತಿಬೆಲೆ ಗಡಿಯಲ್ಲಿ ರ್ಯಾಂಡಮ್ ಕೋವಿಡ್ ಟೆಸ್ಟ್ ಗೆ ವ್ಯವಸ್ಥೆ!

ಜೂನ್ 14 ರ ನಂತರ ಲಾಕ್ ಡೌನ್ ನಿರ್ಬಂಧ ಸಡಿಲಿಕೆಯ ನಂತರ ತಮಿಳುನಾಡಿನ ಅತ್ತಿಬೆಲೆಯ ಗಡಿಯಲ್ಲಿ ರ್ಯಾಂಡಮ್ ಕೋವಿಡ್ ಟೆಸ್ಟ್ ನಡೆಸಲು ನಿರ್ಧರಿಸಲಾಗಿದೆ.

ಬೆಂಗಳೂರು: ಜೂನ್ 14 ರ ನಂತರ ಲಾಕ್ ಡೌನ್ ನಿರ್ಬಂಧ ಸಡಿಲಿಕೆಯ ನಂತರ ತಮಿಳುನಾಡಿನ ಅತ್ತಿಬೆಲೆಯ ಗಡಿಯಲ್ಲಿ ರ್ಯಾಂಡಮ್ ಕೋವಿಡ್ ಟೆಸ್ಟ್ ನಡೆಸಲು ನಿರ್ಧರಿಸಲಾಗಿದೆ.

ಲಾಕ್ ಡೌನ್ ಸಡಿಲಿಕೆ ನಂತರ ತಮಿಳುನಾಡಿನಿಂದ ಎಲೆಕ್ಟ್ರಾನಿಕ್ ಸಿಟಿ, ಜಿಗಣಿ, ಬೊಮ್ಮಸಂದ್ರ ಹಾಗೂ ಪೀಣ್ಯ ಮತ್ತು ಬೆಂಗಳೂರು ನಗರ ಜಿಲ್ಲೆಯ ಕೈಗಾರಿಕಾ ಪ್ರದೇಶಗಳು ಮತ್ತು ಕಂಪನಿಗಳಲ್ಲಿ ಕೆಲಸ ಮಾಡಲು ಕಾರ್ಮಿಕರು ಬರಲು ಆರಂಭಿಸುತ್ತಾರೆ. 

ತಮಿಳುನಾಡಿನಿಂದ ಆಗಮಿಸುವವರಿಗೆ ಸಾಮೂಹಿಕ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ನಡೆಸಲಾಗುವುದು ಎಂದು ಜೆ ಮಂಜುನಾಥ್ ತಿಳಿಸಿದ್ದಾರೆ.

ಕೇರಳ ಮತ್ತು ಮಹಾರಾಷ್ಟ್ರದಿಂದ ಪ್ರವೇಶಿಸುವ ಜನರ ಮೇಲೆ ನಾವು ಕಣ್ಗಾವಲು ನಡೆಸಿದ್ದು, ಪರೀಕ್ಷೆಗಾಗಿ ಮೊದಲಿನಿಂದಲೂ ನಾವು ಪೂರ್ಣ ಪ್ರಮಾಣದ ಸಿದ್ಧತೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.

ಕೈಗಾರಿಕಾ ಪ್ರದೇಶಗಳು ಮತ್ತು ಕಂಪನಿಗಳಲ್ಲೂ ಸಾಮೂಹಿಕ ಪರೀಕ್ಷೆ ನಡೆಸಲಾಗುವುದು. ಕಾರ್ಮಿಕರು ವಾಸಿಸುವ ಸ್ಥಳಗಳಲ್ಲೂ ಸಹ ಆರ್ ಎ ಟಿ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Modi ma*****ch**: ರಾಹುಲ್ ಗಾಂಧಿ Voter Adhikar Yatra ವೇದಿಕೆಯಲ್ಲಿ ಅಶ್ಲೀಲ ನಿಂದನೆ, BJP ಕೆಂಡಾಮಂಡಲ!

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

SCROLL FOR NEXT