ಸೋಗಾನೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಯಡಿಯೂರಪ್ಪ 
ರಾಜ್ಯ

ಮುಂದಿನ ಜೂನ್ ಅಂತ್ಯದ ಒಳಗೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಮುಖ್ಯಮಂತ್ರಿ ಯಡಿಯೂರಪ್ಪ

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಅವರು ಶನಿವಾರ ಸೋಗಾನೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಬೆಂಗಳೂರು ವಿಮಾನ ನಿಲ್ದಾಣದ ಬಳಿಕ ಶಿವಮೊಗ್ಗದಲ್ಲಿಯೇ ಅಂತಹ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಹಣಕಾಸಿನ ಅಡಚಣೆ ನಡುವೆಯೂ ಅನುದಾನ ಬಿಡುಗಡೆಗೊಳಿಸಿ ತ್ವರಿತಗತಿಯಲ್ಲಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.

ವಿಮಾನ ನಿಲ್ದಾಣ ನಿರ್ಮಾಣದಿಂದ ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಗತಿ ನಿರೀಕ್ಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ಪ್ರಗತಿ ಸಾಧ್ಯವಾಗಲಿದೆ. ಹೆಚ್ಚಿನ ಕೈಗಾರಿಕೆಗಳು ಪ್ರಾರಂಭವಾಗಿ ಉದ್ಯೋಗವಕಾಶ ಸೃಷ್ಟಿಯಾಗಲಿದೆ ಎಂದರು.

ರನ್ ವೇ ಕಾಮಗಾರಿ, ಸಂಪರ್ಕ ರಸ್ತೆ, ಪೆರಿಮೀಟರ್ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾಂಪೌಡ್ ನಿರ್ಮಾಣ ಬಹುತೇಕ ಪೂರ್ಣಗೊಂಡಿದ್ದು, 15900 ಮೀಟರ್ ಪೈಕಿ 11500 ಮೀಟರ್ ಕಾಂಪೌಡ್ ನಿರ್ಮಾಣ ಪೂರ್ಣಗೊಳಿಸಲಾಗಿದೆ ಎಂದರು.

ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ವಿಮಾನ ನಿಲ್ದಾಣ ಕಟ್ಟಡದ ವಿನ್ಯಾಸ ಅನಾವರಣ ಮಾಡಿದರು. ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಅಶೋಕ ನಾಯ್ಕ್, ಅರಗ ಜ್ನಾನೇಂದ್ರ, ರುದ್ರೇಗೌಡ, ಆರ್ಯವೈಶ್ಯ ನಿಗಮ ಅಧ್ಯಕ್ಷ  ಡಿ.ಎಸ್.ಅರುಣ್, ಮೇಯರ್ ಸುನಿತಾ ಅಣ್ಣಪ್ಪ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT