ಸಚಿವ ಬಸವರಾಜ ಬೊಮ್ಮಾಯಿ 
ರಾಜ್ಯ

ಜಿಎಸ್'ಟಿ ಕುರಿತು ಸಚಿವ ಬಸವರಾಜ್ ಬೊಮ್ಮಾಯಿ ನೀಡಿದ್ದ ಸಲಹೆಗೆ ಕೇಂದ್ರ ಒಪ್ಪಿಗೆ

ಜಿಎಸ್'ಟಿ ದರ ಕಡಿತ ಕುರಿತು ರಾಜ್ಯದ ಜಿಎಸ್ಟಿ ಪ್ರತಿನಿಧಿ ಹಾಗೂ ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ಅವರು ನೀಡಿದ್ದ ಸಲಹೆಗಳಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ತಿಳಿದುಬಂದಿದೆ. 

ಬೆಂಗಳೂರು: ಜಿಎಸ್'ಟಿ ದರ ಕಡಿತ ಕುರಿತು ರಾಜ್ಯದ ಜಿಎಸ್ಟಿ ಪ್ರತಿನಿಧಿ ಹಾಗೂ ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ಅವರು ನೀಡಿದ್ದ ಸಲಹೆಗಳಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ತಿಳಿದುಬಂದಿದೆ. 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ 44ನೇ ಸರಕು ಮತ್ತು ಸೇವಾ ತೆರಿಗೆ ಪರಿಷತ್ತಿನ ಮಹತ್ವದ ಸಭೆ ಶನಿವಾರ ನಡೆಯಿತು. ಈ ಸಭೆಯಲ್ಲಿ ಗ್ರೂಪ್ ಆಫ್ ಮಿನಿಸ್ಟರ್ಸ್ ಸಲ್ಲಿಸಿದ ಕೋವಿಡ್ ಪರಿಹಾರ ಸಾಮಗ್ರಿಗಳ ಮೇಲಿನ ಜಿ ಎಸ್ ಟಿ ದರಗಳಲ್ಲಿನ‌‌ ರಿಯಾಯಿತಿ / ವಿನಾಯಿತಿ ಸಂಬಂಧಿಸಿದ ವರದಿಯ ಕುರಿತು ಚರ್ಚೆ ನಡೆಯಿತು.

ಗ್ರೂಪ್ ಆಫ್ ಮಿನಿಸ್ಟರ್ಸ್ ಕೆಲವು ಔಷಧಗಳ ಮೇಲಿನ ಜಿಎಸ್ ಟಿಯನ್ನು ಶೇಕಡ 5ರಿಂದ ಶೂನ್ಯಕ್ಕೆ, ರೆಮ್ ಡಿಸಿವಿರ್ ಮೇಲಿನ ಜಿಎಸ್ ಟಿಯನ್ನು ಶೇ. 12ರಿಂದ ಶೇ. 5 ಕ್ಕೆ, ಆಮ್ಲಜನಕ ಉತ್ಪಾದನಾ ಉಪಕರಣ ಹಾಗೂ ಕೋವಿಡ್ ಪರೀಕ್ಷಾ ಕೀಟ್ ಗಳ ಮೇಲಿನ ಶೇಕಡಾ 12ರ ಜಿಎಸ್ ಟಿ ದರವನ್ನು ಶೇ. 5ಕ್ಕೆ ಕಡಿಮೆ ಮಾಡುವುದಕ್ಕೆ ಶಿಫಾರಸ್ಸು ಮಾಡಿದ್ದು. ತಾಪಮಾನ ಪರೀಕ್ಷಾ ಉಪಕರಣ ಹಾಗೂ ಶವಾಗಾರ ಗಳಿಗಾಗಿ ಬಳಕೆ ಆಗುವ ಗ್ಯಾಸ್, ಎಲೆಕ್ಟ್ರಿಕ್ ಫರ್ನೇಸ್ ಗಳಿಗೆ ಸಂಬಂಧಿಸಿದಂತೆ ಜಿಎಸ್ ಟಿ ಯನ್ನು ಶೇ.18 ರಿಂದ 12ಕ್ಕೆ ಕಡಿತಗೊಳಿಸಲು ಶಿಫಾರಸು ಮಾಡಿದೆ. ಇದೇ ವೇಳೆ ಆ್ಯಂಬುಲೆನ್ಸ್ ಮೇಲೆ ಯಾವುದೇ ಕಡಿತವನ್ನು ಶಿಫಾರಸ್ಸು ಮಾಡಿಲ್ಲ.

ಜಿಎಸ್ಟಿ ಮಂಡಳಿ ಸಭೆಯಲ್ಲಿ ಬೆಂಗಳೂರಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದ ರಾಜ್ಯದ ಜಿಎಸ್ಟಿ ಪ್ರತಿನಿಧಿ ಹಾಗೂ ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ಮಿನಿಸ್ಟರ್ಸ್ ಶಿಫಾರಸುಗಳನ್ನು ಸ್ವಾಗತಿಸಿದರು. ಅದರ ಜೊತೆಗೆ ಇನ್ನಷ್ಟು ತೆರಿಗೆ ಕಡಿತಕ್ಕಾಗಿ ಕೇಂದ್ರ ಹಣಕಾಸು ಸಚಿವರಿಗೆ ಮನವಿ ಮಾಡಿದರು.

ತಾಪಮಾನ ಪರೀಕ್ಷಾ ಉಪಕರಣ, ಹಾಗೂ ಶವಾಗಾರಗಳಿಗಾಗಿ ಬಳಕೆಯಾಗುವ ಗ್ಯಾಸ್, ಎಲೆಕ್ಟ್ರಿಕ್ ಫರ್ನೆಸ್ ವಸ್ತುಗಳ ಮೇಲಿನ ತೆರಿಗೆಯನ್ನು ಶೇ. 18 ರಿಂದ 5 ಕ್ಕೆ ಮತ್ತು ಅಂಬುಲೆನ್ಸ್ ವಾಹನಗಳ ಮೇಲಿನ ತೆರಿಗೆಯನ್ನು ಶೇ. 28ರಿಂದ ಶೇಕಡ 12 ಕ್ಕೆ ಇಳಿಸುವಂತೆ ಮನವಿ ಮಾಡಿದರು. 

ಈ ವೇಳೆ ಬಸವರಾಜ ಬೊಮ್ಮಾಯಿ ಅವರ ಈ ಮನವಿಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಭೆಯಲ್ಲಿಯೇ ಅನುಮೋದನೆ ನೀಡಿದರು.

ಈ ರಿಯಾಯಿತಿಗಳನ್ನು ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಲು ಅವರು ಮಾಡಿಕೊಂಡ ಮನವಿಗೂ ಜಿಎಸ್ಟಿ ಮಂಡಳಿ ಒಪ್ಪಿಗೆ ನೀಡಿತು. ಇದಕ್ಕಾಗಿ ಸಚಿವ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಿಗೆ ಧನ್ಯವಾದ ಅರ್ಪಿಸಿದರು.

2022 ನಂತರದ ಜಿಎಸ್ಟಿ ಪರಿಹಾರಕ್ಕೆ ಸಂಬಂಧಿಸಿದ ವಿಷಯ ಕುರಿತು ಚರ್ಚಿಸಲು ಸಭೆ ಕರೆಯುವಂತೆ ಬೊಮ್ಮಾಯಿ ಅವರು ಕೋರಿದರು. ಇದಕ್ಕೆ ಸ್ಪಂದಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಶೀಘ್ರದಲ್ಲಿಯೇ ಸಭೆ ಕರೆಯಲು ಒಪ್ಪಿಕೊಂಡರು ಎಂದು ವರದಿಗಳಿಂದ ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT