ಸುರೇಶ್ ಕುಮಾರ್ 
ರಾಜ್ಯ

ಶಿಕ್ಷಣ ವ್ಯವಸ್ಥೆ ಪುನರುಜ್ಜೀವನಗೊಳಿಸಲು ತಜ್ಞರ ಸಮಿತಿ: ಸಚಿವ ಸುರೇಶ್ ಕುಮಾರ್

ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಿಕೊಳ್ಳಲು  ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಲು ಶಿಕ್ಷಣ ಇಲಾಖೆಯು ತಜ್ಞರ ಸಮಿತಿಯೊಂದನ್ನು ರಚಿಸಿದೆ ಎಂದು ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. 

ಬೆಂಗಳೂರು: ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಿಕೊಳ್ಳಲು  ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಲು ಶಿಕ್ಷಣ ಇಲಾಖೆಯು ತಜ್ಞರ ಸಮಿತಿಯೊಂದನ್ನು ರಚಿಸಿದೆ ಎಂದು ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. 

ಈ ಕುರಿತು ಮಾತನಾಡಿಸುವ ಅವರು, ಕೇವಲ ತರಗತಿಗಳು ಮತ್ತು ಪರೀಕ್ಷೆಗಳತ್ತ ಗಮನ ಹರಿಸುವುದಷ್ಟೇ ಅಲ್ಲದೆ, ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಲು ಸಮಗ್ರ ಚಿಂತನೆಯ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ. 

ಈ ಕುರಿತು ಇಲಾಖೆಯು ಸಮಿತಿಯೊಂದನ್ನು ರಚನೆ ಮಾಡಿದ್ದು, ಸಮಿತಿಯು ಉತ್ತಮ ಕಲಿಕೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಅಂಶಗಳನ್ನೂ ಗಮನಿಸಲಿದೆ. ಇದು ಗ್ರಾಮೀಣ ಪ್ರದೇಶಗಳಲ್ಲಿ ತಾಂತ್ರಿಕ ಸಾಧನಗಳ ಬಳಕೆ ಮತ್ತು ವಿದ್ಯಾರ್ಥಿಗಳ ನಿರಂತರ ಮೌಲ್ಯಮಾಪನವನ್ನೂ ಒಳಗೊಂಡಿರುತ್ತದೆ. ಸಮಿತಿಯಲ್ಲಿ ನಿಮ್ಹಾನ್ಸ್‌ನ ತಜ್ಞರು, ಮಕ್ಕಳ ತಜ್ಞರು, ವೈದ್ಯರು ಮತ್ತು ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳಿದ್ದಾರೆಂದು ಮಾಹಿತಿ ನೀಡಿದ್ದಾರೆ.

ಸಮಿತಿಯು ಭವಿಷ್ಯದ ಶಿಕ್ಷಣ ಕುರಿತೂ ಗಮನ ಹರಿಸಲಿದ್ದಾರೆ. ಪ್ರಕ್ರಿಯೆಗಳು ಈಗಷ್ಟೇ ಆರಂಭವಾಗಿದೆ. ಈಗಾಗಲೆ ಕೆಲ ಸಭೆಗಳೂ ನಡೆದಿವೆ ಎಂದು ತಿಳಿಸಿದ್ದಾರೆ. 

ಇದೇ ವೇಳೆ ಎಸ್ಎಸ್ಎಲ್'ಸಿ ಪರೀಕ್ಷೆ ನಡೆಸುವ ನಿರ್ಧಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ಸಂದರ್ಭದಲ್ಲಿ ಮಕ್ಕಳಲ್ಲಿ ಭೀತಿಯುಂಟು ಮಾಡುವ ಬದಲು ಆತ್ಯವಿಶ್ವಾಸ ತುಂಬುವ ಅವಶ್ಯಕತೆಯಿದೆ ಮತ್ತು ಭೀತಿ ಉಂಟುಮಾಡುವುದಲ್ಲ. ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವ ಅವಶ್ಯಕತೆಯಿದೆ ಮತ್ತು ಈ ಬಗ್ಗೆ ಮಕ್ಕಳಿಗೂ ಅರಿವು ಮೂಡಿಸಬೇಕಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT