ಸಂಚಾರಿ ವಿಜಯ್, ಡಿಸಿಎಂ ಅಶ್ವಥ್ ನಾರಾಯಣ 
ರಾಜ್ಯ

ಸಂಚಾರಿ ವಿಜಯ್ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುವೆ: ಡಿಸಿಎಂ ಅಶ್ವಥ ನಾರಾಯಣ

ಬೈಕ್ ಅಪಘಾತದಲ್ಲಿ ಮೆದುಳಿಗೆ ತೀವ್ರ ಸ್ವರೂಪದ ಗಾಯಗಳಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ತಾವು ಭರಿಸುವುದಾಗಿ ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ್ ನಾರಾಯಣ ಹೇಳಿದ್ದಾರೆ.

ಬೆಂಗಳೂರು: ಬೈಕ್ ಅಪಘಾತದಲ್ಲಿ ಮೆದುಳಿಗೆ ತೀವ್ರ ಸ್ವರೂಪದ ಗಾಯಗಳಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ತಾವು ಭರಿಸುವುದಾಗಿ ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ್ ನಾರಾಯಣ ಹೇಳಿದ್ದಾರೆ.

ಸದ್ಯ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ನ್ಯೂರೋ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರಿಯುತ್ತಿದ್ದು, ಉಸಿರಾಟವನ್ನೂ ನಿಲ್ಲಿಸಿದ್ದಾರೆ, ಮೆದುಳು ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ, ಸಂಪೂರ್ಣವಾಗಿ ಜೀವ ರಕ್ಷಕದ ನೆರವಿನಲ್ಲಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಈ ಮಧ್ಯೆ ಅವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ತಮ್ಮ ಫೌಂಡೇಶನ್ ಮೂಲಕವೇ ಭರಿಸಲಾಗುವುದು, ಅವರ ಕುಟುಂಬಸ್ಥರು, ಸಂಬಂಧಿಕರು, ಸ್ನೇಹಿತರಿಂದ ಯಾರಿಂದರೂ ಹಣ ಪಡೆದುಕೊಳ್ಳುವುದು ಬೇಡ ಎಂದು ಉಪ ಮುಖ್ಯಮಂತ್ರಿ ಅಶ್ವಥ ನಾರಾಯಣ ಆಸ್ಪತ್ರೆಯ ಆಡಳಿತ ವರ್ಗಕ್ಕೆ ಕೇಳಿಕೊಂಡಿದ್ದಾರೆ.

ಇಂದು ಬೆಳಗ್ಗೆ ಅಪೊಲೋ ಆಸ್ಪತ್ರೆಗೆ ಭೇಟಿ ನೀಡಿದ ಅಶ್ವಥ ನಾರಾಯಣ ನಟನ ದೇಹ ಸ್ಥಿತಿ, ಚಿಕಿತ್ಸೆ ಬಗ್ಗೆ ವಿವರ ಪಡೆದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿ, ವಿಜಯ್ ಅವರ ಚಿಕಿತ್ಸಾ ವೆಚ್ಚವನ್ನು ನಮ್ಮ ಫೌಂಡೇಶನ್ ಮೂಲಕವೇ ಭರಿಸುತ್ತೇವೆ, ಅವರು ಚೇತರಿಕೆ ಕಂಡು ಮೊದಲಿನಂತಾಗಲಿ ಎಂದು ಆಶಿಸುತ್ತೇನೆ ಎಂದರು. 

ಉಪ ಮುಖ್ಯಮಂತ್ರಿಗಳ ಸಹಾಯಕ್ಕೆ ಸಂಚಾರಿ ವಿಜಯ್ ಕುಟುಂಬಸ್ಥರು ಧನ್ಯವಾದ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT