ಸಾಂದರ್ಭಿಕ ಚಿತ್ರ 
ರಾಜ್ಯ

ಪೊಲೀಸರ ಹಲ್ಲೆಯಿಂದ ಗಾಯ: ಮಡಿಕೇರಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗ!

ಪೊಲೀಸರ ಹಲ್ಲೆಯಿಂದ ಆಂತರಿಕ ಅಂಗಾಂಗಳಿಗೆ ಹಾನಿಯಾಗಿದೆ ಎಂಬುದು ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರ ಮರಣೋತ್ತರ ಪರೀಕ್ಷೆಯಿಂದ ಬಹಿರಂಗವಾಗಿದೆ. ಕುಟುಂಬ ಸದಸ್ಯರು, ಮೂವರು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳೊಂದಿಗೆ ವರದಿಯನ್ನು ಸಿಐಡಿ ತಂಡಕ್ಕೆ ವರ್ಗಾವಣೆ ಮಾಡಲಾಗಿದೆ.

ಮಡಿಕೇರಿ: ಪೊಲೀಸರ ಹಲ್ಲೆಯಿಂದ ಆಂತರಿಕ ಅಂಗಾಂಗಳಿಗೆ ಹಾನಿಯಾಗಿದೆ ಎಂಬುದು ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರ ಮರಣೋತ್ತರ ಪರೀಕ್ಷೆಯಿಂದ ಬಹಿರಂಗವಾಗಿದೆ. ಕುಟುಂಬ ಸದಸ್ಯರು, ಮೂವರು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳೊಂದಿಗೆ ವರದಿಯನ್ನು ಸಿಐಡಿ ತಂಡಕ್ಕೆ ವರ್ಗಾವಣೆ ಮಾಡಲಾಗಿದೆ.

ವಿರಾಜಪೇಟೆಯ ರಾಯ್ ಡಿಸೋಜಾ (50) ಟೌನ್ ಠಾಣೆಯ ಪೊಲೀಸರ ಹಲ್ಲೆಯಿಂದ ಮೃತಪಟ್ಟ ದುರ್ದೈವಿ. ಮಡಿಕೇರಿ ಆಸ್ಪತ್ರೆಯಲ್ಲಿ ಶುಕ್ರವಾರ ಆತ ಮೃತಪಟ್ಟಿದ್ದು, ಇಂದು ಮರಣೋತ್ತರ ಪರೀಕ್ಷೆ ವರದಿ ಬಂದಿದೆ.

ಮೃತನ ಆಂತರಿಕ ಅಂಗಾಂಗಳು ಹಾನಿಯಾಗಿವೆ, ಕಣ್ಣು, ಎದೆ, ತೊಡೆ ಮತ್ತು ಕಾಲುಗಳಿಗೆ ಗಂಭೀರ ರೀತಿಯ ಮೂಗೇಟು ಗಳಾಗಿರುವುದಾಗಿ ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿರುವುದಾಗಿ ಮೂಲಗಳು ಖಚಿತಪಡಿಸಿವೆ. ಮಡಿಕೇರಿ ತಹಸೀಲ್ದಾರ್ ಮಹೇಶ್ ಸಮ್ಮುಖದಲ್ಲಿ ಇಬ್ಬರು ವೈದ್ಯರೊಂದಿಗೆ ಶನಿವಾರ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು.

ಮೃತನ ಕುಟುಂಬ ಸದಸ್ಯರು ಹಾಗೂ ಮೂವರು ಪ್ರತ್ಯೇಕ್ಷದರ್ಶಿಗಳ ಹೇಳಿಕೆಗಳೊಂದಿಗೆ ಮರಣೋತ್ತರ ಪರೀಕ್ಷೆ ವರದಿಯನ್ನು ಸಿಐಡಿಗೆ ಸಲ್ಲಿಸಲಾಗಿದೆ ಎಂದು ಮಹೇಶ್ ಖಚಿತಪಡಿಸಿದ್ದಾರೆ. ಮೃತನ ದೇಹದ ಮೇಲೆ ಗಂಭೀರ ರೀತಿಯ ಗಾಯಗಳು ಕಂಡುಬಂದಿರುವುದಾಗಿ ಮೂಲಗಳು ಬಹಿರಂಗಪಡಿಸಿದ್ದು, ಪೊಲೀಸರ ಹಲ್ಲೆಯೇ ಇದಕ್ಕೆ ಕಾರಣ ಎಂದು ಅನುಮಾನಿಸಲಾಗಿದೆ. 

ಕೈಯಲ್ಲಿ  ಲಾಂಗ್ ಹಿಡಿದು ಬೀದಿಗಳಲ್ಲಿ ಓಡಾಡುತ್ತಿದದ್ದು ಕಂಡುಬಂದ ನಂತರ  ಶುಕ್ರವಾರ ಮುಂಜಾನೆ ವಿರಾಜ್ ಪೇಟೆ ಪೊಲೀಸರು ರಾಯ್ ನನ್ನು ವಶಕ್ಕೆ ಪಡೆದುಕೊಂಡಿದ್ದರು. ಮಧ್ಯರಾತ್ರಿಯಲ್ಲಿ ಪೊಲೀಸರ ಮೇಲೆ ರಾಯ್ ದಾಳಿ ಮಾಡಿದ್ದ ಎಂದು ಕೂಡಾ ಹೇಳಲಾಗುತ್ತಿದೆ.

ಆದಾಗ್ಯೂ, ರಾಯ್ ಗೆ ವಿರಾಜ್ ಪೇಟೆ ಪೊಲೀಸ್ ಠಾಣೆಯಲ್ಲಿ ಹಿಗ್ಗಾಮುಗ್ಗಾ ಥಳಿಸಲಾಗಿದೆ,ಶುಕ್ರವಾರ ಆತ ಮೃತಪಟ್ಟಿದ್ದು, ನಂತರ ಕುಟುಂಬಕ್ಕೆ ಆತನನ್ನು ನೀಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT