ಸಾಂದರ್ಭಿಕ ಚಿತ್ರ 
ರಾಜ್ಯ

ಪೊಲೀಸರ ಹಲ್ಲೆಯಿಂದ ಗಾಯ: ಮಡಿಕೇರಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗ!

ಪೊಲೀಸರ ಹಲ್ಲೆಯಿಂದ ಆಂತರಿಕ ಅಂಗಾಂಗಳಿಗೆ ಹಾನಿಯಾಗಿದೆ ಎಂಬುದು ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರ ಮರಣೋತ್ತರ ಪರೀಕ್ಷೆಯಿಂದ ಬಹಿರಂಗವಾಗಿದೆ. ಕುಟುಂಬ ಸದಸ್ಯರು, ಮೂವರು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳೊಂದಿಗೆ ವರದಿಯನ್ನು ಸಿಐಡಿ ತಂಡಕ್ಕೆ ವರ್ಗಾವಣೆ ಮಾಡಲಾಗಿದೆ.

ಮಡಿಕೇರಿ: ಪೊಲೀಸರ ಹಲ್ಲೆಯಿಂದ ಆಂತರಿಕ ಅಂಗಾಂಗಳಿಗೆ ಹಾನಿಯಾಗಿದೆ ಎಂಬುದು ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರ ಮರಣೋತ್ತರ ಪರೀಕ್ಷೆಯಿಂದ ಬಹಿರಂಗವಾಗಿದೆ. ಕುಟುಂಬ ಸದಸ್ಯರು, ಮೂವರು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳೊಂದಿಗೆ ವರದಿಯನ್ನು ಸಿಐಡಿ ತಂಡಕ್ಕೆ ವರ್ಗಾವಣೆ ಮಾಡಲಾಗಿದೆ.

ವಿರಾಜಪೇಟೆಯ ರಾಯ್ ಡಿಸೋಜಾ (50) ಟೌನ್ ಠಾಣೆಯ ಪೊಲೀಸರ ಹಲ್ಲೆಯಿಂದ ಮೃತಪಟ್ಟ ದುರ್ದೈವಿ. ಮಡಿಕೇರಿ ಆಸ್ಪತ್ರೆಯಲ್ಲಿ ಶುಕ್ರವಾರ ಆತ ಮೃತಪಟ್ಟಿದ್ದು, ಇಂದು ಮರಣೋತ್ತರ ಪರೀಕ್ಷೆ ವರದಿ ಬಂದಿದೆ.

ಮೃತನ ಆಂತರಿಕ ಅಂಗಾಂಗಳು ಹಾನಿಯಾಗಿವೆ, ಕಣ್ಣು, ಎದೆ, ತೊಡೆ ಮತ್ತು ಕಾಲುಗಳಿಗೆ ಗಂಭೀರ ರೀತಿಯ ಮೂಗೇಟು ಗಳಾಗಿರುವುದಾಗಿ ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿರುವುದಾಗಿ ಮೂಲಗಳು ಖಚಿತಪಡಿಸಿವೆ. ಮಡಿಕೇರಿ ತಹಸೀಲ್ದಾರ್ ಮಹೇಶ್ ಸಮ್ಮುಖದಲ್ಲಿ ಇಬ್ಬರು ವೈದ್ಯರೊಂದಿಗೆ ಶನಿವಾರ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು.

ಮೃತನ ಕುಟುಂಬ ಸದಸ್ಯರು ಹಾಗೂ ಮೂವರು ಪ್ರತ್ಯೇಕ್ಷದರ್ಶಿಗಳ ಹೇಳಿಕೆಗಳೊಂದಿಗೆ ಮರಣೋತ್ತರ ಪರೀಕ್ಷೆ ವರದಿಯನ್ನು ಸಿಐಡಿಗೆ ಸಲ್ಲಿಸಲಾಗಿದೆ ಎಂದು ಮಹೇಶ್ ಖಚಿತಪಡಿಸಿದ್ದಾರೆ. ಮೃತನ ದೇಹದ ಮೇಲೆ ಗಂಭೀರ ರೀತಿಯ ಗಾಯಗಳು ಕಂಡುಬಂದಿರುವುದಾಗಿ ಮೂಲಗಳು ಬಹಿರಂಗಪಡಿಸಿದ್ದು, ಪೊಲೀಸರ ಹಲ್ಲೆಯೇ ಇದಕ್ಕೆ ಕಾರಣ ಎಂದು ಅನುಮಾನಿಸಲಾಗಿದೆ. 

ಕೈಯಲ್ಲಿ  ಲಾಂಗ್ ಹಿಡಿದು ಬೀದಿಗಳಲ್ಲಿ ಓಡಾಡುತ್ತಿದದ್ದು ಕಂಡುಬಂದ ನಂತರ  ಶುಕ್ರವಾರ ಮುಂಜಾನೆ ವಿರಾಜ್ ಪೇಟೆ ಪೊಲೀಸರು ರಾಯ್ ನನ್ನು ವಶಕ್ಕೆ ಪಡೆದುಕೊಂಡಿದ್ದರು. ಮಧ್ಯರಾತ್ರಿಯಲ್ಲಿ ಪೊಲೀಸರ ಮೇಲೆ ರಾಯ್ ದಾಳಿ ಮಾಡಿದ್ದ ಎಂದು ಕೂಡಾ ಹೇಳಲಾಗುತ್ತಿದೆ.

ಆದಾಗ್ಯೂ, ರಾಯ್ ಗೆ ವಿರಾಜ್ ಪೇಟೆ ಪೊಲೀಸ್ ಠಾಣೆಯಲ್ಲಿ ಹಿಗ್ಗಾಮುಗ್ಗಾ ಥಳಿಸಲಾಗಿದೆ,ಶುಕ್ರವಾರ ಆತ ಮೃತಪಟ್ಟಿದ್ದು, ನಂತರ ಕುಟುಂಬಕ್ಕೆ ಆತನನ್ನು ನೀಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

SCROLL FOR NEXT