ನಟ ಚೇತನ್ 
ರಾಜ್ಯ

ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿದ ನಟ ಚೇತನ್ ನನ್ನು ಅಮೆರಿಕಾಗೆ ಗಡಿಪಾರು ಮಾಡಿ: ವಿಎಚ್‌ಪಿ ಕಾರ್ಯಕರ್ತರ ಮನವಿ

ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕನ್ನಡ ನಟ ಚೇತನ್ ವಿರುದ್ಧ ಎರಡು ಎಫ್‌ಐಆರ್ ದಾಖಲಾದ ನಂತರ ಅಮೆರಿಕಾದ ನಾಗರಿಕತ್ವ ಹೊಂದಿರುವ ಚೇತನ್ ಅವರನ್ನು ಒತ್ತಾಯಪೂರ್ವಕ ಗಡಿಪಾರು ಮಾಡಬೇಕೆಂದು ವಿಎಚ್‌ಪಿ ಕಾರ್ಯಕರ್ತರೊಬ್ಬರು ಮನವಿ ಸಲ್ಲಿಸಿದ್ದಾರೆ.

ಬೆಂಗಳೂರು: ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕನ್ನಡ ನಟ ಚೇತನ್ ವಿರುದ್ಧ ಎರಡು ಎಫ್‌ಐಆರ್ ದಾಖಲಾದ ನಂತರ ಅಮೆರಿಕಾದ ನಾಗರಿಕತ್ವ ಹೊಂದಿರುವ ಚೇತನ್ ಅವರನ್ನು ಒತ್ತಾಯಪೂರ್ವಕ ಗಡೀಪಾರು ಮಾಡಬೇಕೆಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಕಾರ್ಯಕರ್ತರೊಬ್ಬರು ಬೆಂಗಳೂರಿನ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ (ಎಫ್‌ಆರ್‌ಆರ್‌ಒ) ಮನವಿ ಸಲ್ಲಿಸಿದ್ದಾರೆ.

ವಿಎಚ್‌ಪಿ ಕಾರ್ಯಕರ್ತ ಗಿರೀಶ್ ಭಾರದ್ವಾಜ್ ಅವರು ಶನಿವಾರ ಅರ್ಜಿಯನ್ನು ಸಲ್ಲಿಸಿದ್ದು, ಚೇತನ್ ಸಾಮಾಜಿಕ ಮಾಧ್ಯಮಗಳಲ್ಲಿ ಬ್ರಾಹ್ಮಣ ಸಮುದಾಯದ ವಿರುದ್ಧ ಕೆಟ್ಟ ಪದಪ್ರಯೋಗಗಳನ್ನು, ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.

"ಅವರು ಯುನೈಟೆಡ್ ಸ್ಟೇಟ್ಸ್ ನ ನಾಗರಿಕರಾಗಿದ್ದಾರೆ ಮತ್ತು ತಾತ್ಕಾಲಿಕವಾಗಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಅವರು ಕೋಮುಭಾವನೆಗಳನ್ನು ಮತ್ತು ಜಾತಿಗಳ ಸಂಘರ್ಷವನ್ನು ಉಂಟುಮಾಡುತ್ತಿದ್ದಾರೆ, ಇದರ ಪರಿಣಾಮವಾಗಿ ಬಹುತ್ವ ನೀತಿಯನ್ನು ಹೊಂದಿರುವ ಭಾರತದಲ್ಲಿ ಸಾಮಾಜಿಕ ಅಸಮಾನತೆ ಉಂಟಾಗುತ್ತದೆ.

"ಯು.ಎಸ್. ಪ್ರಜೆಯಾಗಿರುವ ಅವರು ಅಂತಹ ಹೇಳಿಕೆಗಳನ್ನು ನೀಡುವ ಮೂಲಕ ವಿದೇಶಿಯರ ಕಾಯ್ದೆಯನ್ನು ಉಲ್ಲಂಘಿಸುತ್ತಿದ್ದಾರೆ, ಇದನ್ನು ಎಫ್‌ಆರ್‌ಆರ್‌ಒ ಗಂಭೀರವಾಗಿ ಪರಿಗಣಿಸಬೇಕು. ನಿಮ್ಮ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ ಕಾರಣ ಅವರ ನಿವಾಸದ  ಪರವಾನಗಿಯನ್ನು ವಿದೇಶಿಯರ ಕಾಯ್ದೆಯಡಿ ರದ್ದುಪಡಿಸಬೇಕು ಮಾತ್ರವಲ್ಲದೆ  ಭಾರತೀಯ ಕಾನೂನುಗಳ ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರನ್ನು ತಕ್ಷಣ ತನ್ನ ದೇಶಕ್ಕೆ ಗಡೀಪಾರು ಮಾಡಲು ಅಗತ್ಯ ಆದೇಶಗಳನ್ನು ಸಹ ರವಾನಿಸಲು ನಾವು ನಿಮ್ಮ ಕಚೇರಿಗೆ ವಿನಂತಿಸುತ್ತೇವೆ" ಭಾರದ್ವಾಜ್ ಹೇಳಿದ್ದಾರೆ.

ಇತ್ತೀಚೆಗೆ, ನಟ ಬ್ರಾಹ್ಮಣವಾದವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಮನೋಭಾವವನ್ನು ನಿರಾಕರಿಸಿದೆ. ನಾವು ಬ್ರಾಹ್ಮಣ ಧರ್ಮವನ್ನು ಬೇರುಸಹಿತ ಕಿತ್ತುಹಾಕಬೇಕು ಅಂಬೇಡ್ಕರ್ . ''ಎಲ್ಲರೂ ಸಮಾನರಾಗಿ ಜನಿಸಿದಾಗ, ಬ್ರಾಹ್ಮಣರು ಮಾತ್ರ ಉನ್ನತರು ಮತ್ತು ಉಳಿದವರೆಲ್ಲರೂ ಕಡಿಮೆ ಎಂದು ಹೇಳುವುದುಸಂಪೂರ್ಣ ಅಸಂಬದ್ಧ. ಇದು ದೊಡ್ಡ ವಂಚನೆ'  ಎಂದು ಹೇಳಿದ್ದಾರೆ, ಇದಲ್ಲದೆ, ಬ್ರಾಹ್ಮಣ ಧರ್ಮವು ಬಸವ ಮತ್ತು ಬುದ್ಧನ ವಿಚಾರಗಳನ್ನು ಕೊಂದಿದೆ ಮತ್ತು ಬುದ್ಧ ಒಂದು ಹಂತದಲ್ಲಿ ಬ್ರಾಹ್ಮಣ ಧರ್ಮದ ವಿರುದ್ಧ ಹೋರಾಡಿದನು ಎಂದು ಅವರು ಹೇಳಿದ್ದಾರೆ.

ಚೇತನ್ ವಿರುದ್ಧ ಹಲಸೂರು ಗೇಟ್ ಮತ್ತು ಬಸವನಗುಡಿ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿದೆ. ಸಚಿವ ಶಿವರಾಮ್ ಹೆಬ್ಬಾರ್ ನಟನ ಬಂಧನಕ್ಕೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT