ರಾಜ್ಯ

ಪೊಲೀಸ್ ಗೌರವಗಳೊಂದಿಗೆ ನಟ ಸಂಚಾರಿ ವಿಜಯ್ ಅಂತ್ಯಕ್ರಿಯೆ: ಸಿಎಂ ಬಿಎಸ್ ಯಡಿಯೂರಪ್ಪ

Srinivasamurthy VN

ಬೆಂಗಳೂರು: 'ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು, 'ಸಂಚಾರಿ ವಿಜಯ್ ಅವರು ರಂಗಭೂಮಿ, ಸಿನೆಮಾ ರಂಗಗಳೆರಡರಲ್ಲೂ ತಮ್ಮ ಮನೋಜ್ಞ ಅಭಿನಯದ ಮೂಲಕ ಗಮನ ಸೆಳೆದಿದ್ದರು. ಅವರ ಅಕಾಲಿಕ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ  ನಷ್ಟವುಂಟಾಗಿದೆ. ಭಗವಂತನು ಮೃತರ ಆತ್ಮಕ್ಕೆ ಶಾಂತಿಯನ್ನು ನೀಡಲಿ, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಅಂತೆಯೇ 'ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನಡೆಸಲಾಗುವುದು. ಅವರ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿರುವ ಕುಟುಂಬದವರಿಗೆ ಕೃತಜ್ಞತೆಗಳ ಜೊತೆಗೆ ಸಂತಾಪ ಸೂಚಿಸುತ್ತಾ, ಪ್ರತಿಭಾವಂತ  ಕಲಾವಿದ ಸಂಚಾರಿ ವಿಜಯ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

SCROLL FOR NEXT