ನಗರದಲ್ಲಿ ಸಂಚಾರ ದಟ್ಟಣೆ 
ರಾಜ್ಯ

ಅನ್'ಲಾಕ್ ಇದ್ದರೂ ನಗರದಲ್ಲಿ ನಿಷೇಧಾಜ್ಞೆ ಮುಂದುವರಿಕೆ!

ರಾಜ್ಯದಲ್ಲಿ ಸರ್ಕಾರ ಲಾಕ್ಡೌನ್ ನಿಯಮಗಳನ್ನು ಸಡಿಲಿಕೆ ಮಾಡಿದ್ದರೂ ಕೂಡ ಬೆಂಗಳೂರು ನಗರದಲ್ಲಿ ಜೂನ್ 12 ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಮುಂದುವರೆಯಲಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಹೇಳಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಲಾಕ್ಡೌನ್ ನಿಯಮಗಳನ್ನು ಸಡಿಲಿಕೆ ಮಾಡಿದ್ದರೂ ಕೂಡ ಬೆಂಗಳೂರು ನಗರದಲ್ಲಿ ಜೂನ್ 12 ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಮುಂದುವರೆಯಲಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಹೇಳಿದ್ದಾರೆ. 

ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮೌಖಿಕ ಆದೇಶ ನೀಡಿದ್ದು, ಆದೇಶದಂತೆ ನಗರದಲ್ಲಿ ಒಂದೆಡೆ 4ಕ್ಕಿಂತಲೂ ಹೆಚ್ಚು ಜನರು ಸೇರುವಂತಿಲ್ಲ ಎಂದು ತಿಳಿಸಲಾಗಿದೆ. ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಿಗೆ ತೆರಳುವವರಿಗೆ ವಿನಾಯಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ. 

ಬೆಂಗಳೂರಿನಲ್ಲಿ ಸೋಂಕು ಇಳಿಕೆಯಾಗುತ್ತಿದೆ. ಆದರೂ ನಾವು ಸಾಕಷ್ಟು ಎಚ್ಚರಿಕೆಗಳಿಂದ ಇರಬೇಕಿದೆ. ಸೋಂಕು ಹರಡದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ತಿಳಿಸಲಾಗಿದೆ. 

ಆದೇಶ ಹಿನ್ನೆಲೆಯಲ್ಲಿ ಈಗಾಗಲೇ ಫೀಲ್ಡ್ ಗಿಳಿದಿರುವ ಪೊಲೀಸರು ಅನಗತ್ಯ ಓಡಾಡ ಮಾಡುತ್ತಿರುವ ವಾಹನಗಳನ್ನು ಸೀಜ್ ಮಾಡುತ್ತಿದ್ದಾರೆ. ಮೆಜೆಸ್ಟಿಕ್ ನಲ್ಲಿ ವಾಹನಗಳನ್ನು ತೀವ್ರ ತಪಾಸಣೆ ನಡೆಸಲಾಗುತ್ತಿದೆ.

ಆದೇಶದ ಸೂಚನೆಗಳೂ ಇಂತಿವೆ...

  • ಸಂಜೆ 7 ರಿಂದ ಬೆಳಿಗ್ಗೆ 5 ರ ವರೆಗೆ ನೈಟ್ ಕರ್ಫ್ಯೂ ಜಾರಿ
  • ರೋಗಿಗಳನ್ನ ಕರೆದೊಯ್ಯುವಾಗ ಸಂಬಂಧಪಟ್ಟವರಿಗೆ ಮಾತ್ರ ಅವಕಾಶ
  • ಯಾವುದೇ ಕಂಪನಿ ಹಾಗೂ ಕೈಗಾರಿಕಾ ಉದ್ಯೋಗಿಗಳು ಪಾಸ್ ಹೊಂದಿರಬೇಕು 
  • ಟೆಲಿಕಾಂ ಹಾಗೂ ಇಂಟರ್ನೆಟ್ ಸರ್ವೀಸಸ್ ವರ್ಕರ್ಸ್ ತಮ್ಮ ಐಡಿಕಾರ್ಡ್ ಗಳನ್ನ ಹೊಂದಿರಲೇ ಬೇಕು
  • ಮೆಡಿಕಲ್ ಎಮರ್ಜೆನ್ಸಿ ಹಾಗೂ ಅಗತ್ಯ ಸರಬರಾಜು ವಾಹನಗಳಿಗೆ ಅವಕಾಶ
  • ಅಗತ್ಯ ಸರಕು ಸಾಗಾಟ ವಾಹನಗಳಿಗೆ ಅವಕಾಶ
  • ವಿಮಾನ ನಿಲ್ದಾಣ, ರೈಲ್ವೆ ಸೇರಿದಂತೆ ಓಡಾಟಕ್ಕೆ ಸೂಕ್ತ ಮಾಹಿತಿ‌ ಒದಗಿಸಬೇಕು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

India- US Relationship: ನಿಮ್ಮ ಭಾವನೆಗಳನ್ನು ಆಳವಾಗಿ ಗೌರವಿಸುತ್ತೇನೆ-ಬೆಂಬಲಿಸುತ್ತೇನೆ: ಸದಾಕಾಲ ಸ್ನೇಹಿತನಾಗಿರುತ್ತೇನೆಂದ ಟ್ರಂಪ್'ಗೆ ಮೋದಿ ಉತ್ತರ

'Khalistani ಉಗ್ರ ಸಂಘಟನೆಗಳಿಗೆ ಹಣಕಾಸು ನೆರವು': ಕೊನೆಗೂ ಸತ್ಯ ಒಪ್ಪಿಕೊಂಡ Canada

7 ಬಾರಿ ಸಂಚಾರಿ ನಿಯಮ ಉಲ್ಲಂಘನೆ: ಕೊನೆಗೂ ದಂಡ ಪಾವತಿಸಿದ ಸಿಎಂ Siddaramaiah, ಎಷ್ಟು ಗೊತ್ತಾ?

jersey Sponsorship: ಟೀಂ ಇಂಡಿಯಾಗೆ ಜೆರ್ಸಿ ಸ್ಪಾನ್ಸರ್‌ ಶಿಪ್ ದರ ಹೆಚ್ಚಿಸಿದ BCCI; ದ್ವಿಪಕ್ಷೀಯ, ICC ಪಂದ್ಯಗಳಿಗೆ ರೇಟು ಎಷ್ಟು ಗೊತ್ತಾ?

ಮೋದಿ ಉತ್ತಮ-ಅದ್ಭುತ ಪ್ರಧಾನಿ, ಅವರೊಂದಿಗೆ ಎಂದಿಗೂ ಸ್ನೇಹಿತರಾಗಿರುತ್ತೇನೆ, ಭಾರತ-ಅಮೆರಿಕಾ ನಡುವೆ ವಿಶೇಷ ಬಾಂಧವ್ಯವಿದೆ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

SCROLL FOR NEXT