ತಿಪಟೂರಿನಲ್ಲಿ ರುದ್ರಮುನಿಸ್ವಾಮಿಗಳ ಪತ್ರಿಕಾಗೋಷ್ಠಿ 
ರಾಜ್ಯ

ಸಿಎಂ ಸ್ಥಾನದಿಂದ ಬಿಎಸ್ ವೈ ಕೆಳಗಿಳಿಸುವ ಹುನ್ನಾರ ಮಾಡಿದರೆ ಸಹಿಸುವುದಿಲ್ಲ: ವೀರಶೈವ ಶ್ರೀಗಳ ಎಚ್ಚರಿಕೆ

ಮುಖ್ಯಮಂತ್ರಿ ಯಡಿಯೂರಪ್ಪನವರ ಗೌರವಕ್ಕೆ ಧಕ್ಕೆ ಉಂಟು ಮಾಡುವ ರೀತಿ ಅನಾವಶ್ಯಕವಾಗಿ ಹೇಳಿಕೆ ನೀಡಿ ಅವರ ಮನಸ್ಸಿಗೆ ನೋವುಂಟು ಮಾಡುವಂತೆ ನಡೆದುಕೊಳ್ಳುತ್ತಿರುವುದು ಸಹಿಸಲಾಗದು.

ತುಮಕೂರು: ಮುಖ್ಯಮಂತ್ರಿ ಯಡಿಯೂರಪ್ಪನವರ ಗೌರವಕ್ಕೆ ಧಕ್ಕೆ ಉಂಟು ಮಾಡುವ ರೀತಿ ಅನಾವಶ್ಯಕವಾಗಿ ಹೇಳಿಕೆ ನೀಡಿ ಅವರ ಮನಸ್ಸಿಗೆ ನೋವುಂಟು ಮಾಡುವಂತೆ ನಡೆದುಕೊಳ್ಳುತ್ತಿರುವುದು ವೀರಶೈವ ಲಿಂಗಾಯತ ಸಮಾಜಕ್ಕೆ ಮಾಡುವ ಅವಮಾನ ಎಂದು ತಿಪಟೂರಿನ ಷಡಕ್ಷರ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಿಪಟೂರಿನಲ್ಲಿ ಸಭೆ ಸೇರಿದ್ದ 10 ವಿವಿಧ ಮಠಗಳ ಮಠಾಧೀಶರು ತುರ್ತು ಪ್ರತಿಕಾಗೋಷ್ಠಿ ನಡೆಸಿ, ಯಡಿಯೂರಪ್ಪನವರು ಅಧಿಕಾರವನ್ನು ಪೂರ್ಣಗೊಳಿಸಲು ಎಲ್ಲರೂ ಬೆಂಬಲ ನೀಡಬೇಕು. ಸಿಎಂ ಸ್ಥಾನದಿಂದ ಬಿಎಸ್​ವೈ ಅವರನ್ನು ಕೆಳಗಿಳಿಸುವ ಹುನ್ನಾರವನ್ನು ಯಾವುದೇ ಕಾರಣಕ್ಕೂ ವೀರಶೈವ ಲಿಂಗಾಯತ ಸಮಾಜ ಸಹಿಸುವುದಿಲ್ಲ. ಕುತಂತ್ರ ನಡೆದಲ್ಲಿ
ಸ್ವಾಮೀಜಿಗಳ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಯಡಿಯೂರಪ್ಪ ಅವರು ಎಲ್ಲಾ ಸಮುದಾಯದ ಪ್ರಶ್ನಾತೀತ ನಾಯಕರಾಗಿದ್ದಾರೆ, ಸಿಎಂ ಆಗಿ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ, ಅವರು ತಮ್ಮ ಅಧಿಕಾರವಧಿಯನ್ನು ಸಂಪೂರ್ಣಗೊಳಿಸಲು ಬಿಜೆಪಿ ಹೈಕಮಾಂಡ್ ಅವಕಾಶ ಮಾಡಿಕೊಡಬೇಕೆಂದು ಸ್ವಾಮೀಜಿಗಳು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT