ಕೋವಿಡ್-19 ಸಾವು (ಸಂಗ್ರಹ ಚಿತ್ರ) 
ರಾಜ್ಯ

ರಾಜ್ಯ ಸರ್ಕಾರ ಕೋವಿಡ್-19 ಮೃತರ ಸಂಖ್ಯೆಯನ್ನು ತಿರುಚುತ್ತಿದೆ; ಎನ್ ಡಿಎಂ ಕಾಯ್ದೆ ಪ್ರಕಾರ ಪರಿಹಾರ ನೀಡಲಿ: ಕಾಂಗ್ರೆಸ್

ರಾಜ್ಯ ಸರ್ಕಾರ ಕೋವಿಡ್-19 ಮೃತರ ಸಂಖ್ಯೆಯನ್ನು ತಿರುಚುತ್ತಿದೆ ಎಂದು ಆರೋಪ ಮಾಡಿರುವ ಪ್ರತಿಪಕ್ಷ ಕಾಂಗ್ರೆಸ್, ಸಂತ್ರಸ್ತರ ಕುಟುಂಬಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ಕಾಯ್ದೆಯ ಪ್ರಕಾರ ಪರಿಹಾರ ನೀಡಬೇಕೆಂದು ಆಗ್ರಹಿಸಿದೆ. 

ಬೆಂಗಳೂರು: ರಾಜ್ಯ ಸರ್ಕಾರ ಕೋವಿಡ್-19 ಮೃತರ ಸಂಖ್ಯೆಯನ್ನು ತಿರುಚುತ್ತಿದೆ ಎಂದು ಆರೋಪ ಮಾಡಿರುವ ಪ್ರತಿಪಕ್ಷ ಕಾಂಗ್ರೆಸ್, ಸಂತ್ರಸ್ತರ ಕುಟುಂಬಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ಕಾಯ್ದೆಯ ಪ್ರಕಾರ ಪರಿಹಾರ ನೀಡಬೇಕೆಂದು ಆಗ್ರಹಿಸಿದೆ. 

ರಾಷ್ಟ್ರೀಯ ವಿಪತ್ತು ನಿರ್ವಹಣೆ ಕಾಯ್ದೆಯ ಪ್ರಕಾರ ಮೃತರ ಕುಟುಂಬ ಸದಸ್ಯರಿಗೆ ಸರ್ಕಾರದಿಂದ 4 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಆದರೆ ಸರ್ಕಾರ ಒಂದು ಲಕ್ಷ ಮಾತ್ರ ಪರಿಹಾರ ಘೋಷಣೆ ಮಾಡಿದೆ ಎಂದು ಕಾಂಗ್ರೆಸ್ ಹೇಳಿದೆ. 

ಕಾಂಗ್ರೆಸ್ ಪಕ್ಷದ ಮಹಾರಾಷ್ಟ್ರ ಉಸ್ತುವಾರಿ, ಮಾಜಿ ಸಚಿವ ಹೆಚ್. ಕೆ ಪಾಟೀಲ್ ಜೂ.16 ರಂದು ಈ ಸಂಬಂಧ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು, ಜೂನ್ 14 ರಂದು ರಾಜ್ಯದಲ್ಲಿ 33,033 ಮಂದಿ ಕೋವಿಡ್-19 ನಿಂದ ಮೃತಪಟ್ಟಿದ್ದಾರೆ ಎಂದು ಸರ್ಕಾರದ ದಾಖಲೆಗಳು ಹೇಳುತ್ತಿವೆ.

ಆದರೆ ಜನವರಿ 1, 2021 ರಿಂದ ಜೂನ್ 13 ರ ಅವಧಿಯಲ್ಲಿ ರಾಜ್ಯದಲ್ಲಿ 3,27,985 ಮಂದಿ ಕೋವಿಡ್-19 ನಿಂದ ಸಾವನ್ನಪ್ಪಿದ್ದಾರೆ. ಆದರೆ 3.28 ಲಕ್ಷ ಹಾಗೂ 33,033 ರ ನಡುವೆ ಇರುವ ಅಂತರ ಪ್ರಶ್ನೆ ಮೂಡಿಸುತ್ತಿದೆ. ಈ ಆಧಾರದಲ್ಲಿ ಸ್ವಾಭಾವಿಕವಾಗಿ ಮೃತಪಟ್ಟಿರುವವರ ಸಂಖ್ಯೆ ಎಷ್ಟು? ಎಂದು ಪಾಟೀಲ್ ಪ್ರಶ್ನಿಸಿದ್ದಾರೆ. 

2020 ರಲ್ಲಿ ಮೃತಪಟ್ಟವರ ವರದಿಗಳನ್ನು ಸರ್ಕಾರ ಸಾರ್ವಜನಿಕವಾಗಿ ಪ್ರಕಟಿಸಿಲ್ಲ. 2018-19 ರ ಅಂಕಿ-ಅಂಶಗಳ ಪ್ರಕಾರ ಜನವರಿಯಿಂದ ಜೂನ್ ವರೆಗೂ 88,000 ಸಾವುಗಳು ಸಂಭವಿಸಿವೆ ಎಂದು ಹೆಚ್ ಕೆ ಪಾಟೀಲ್ 

ಅಂದಾಜಿನ ಪ್ರಕಾರ ತೆಗೆದುಕೊಂಡರೂ 2021 ರಲ್ಲಿ 1.10 ಲಕ್ಷ ಸಾವು ಸಂಭವಿಸಬೇಕಿತ್ತು ಆದರೆ 3.28 ಲಕ್ಷ ಸಾವು ಊಹೆಗೂ ಮೀರಿದ್ದು ಎಂದು ಪಾಟೀಲ್ ಆರೋಪಿಸಿದ್ದಾರೆ.

ಈ ಪೈಕಿ 1.10 ಲಕ್ಷ ಸಾವುಗಳನ್ನು ಹೊರತುಪಡಿಸಿದರೂ ಒಟ್ಟಾರೆ ಸಾವಿನ ಸಂಖ್ಯೆ 2.18 ಲಕ್ಷವಾಗಿರುತ್ತದೆ. ಇದು ಅತ್ಯಂತ ಹೆಚ್ಚಿನ ಅಂಕಿ-ಸಂಖ್ಯೆಯಾಗಿದೆ. 2.25 ಲಕ್ಷ ಸಾವುಗಳ ಸಂಖ್ಯೆಯನ್ನು ತಿರುಚಲಾಗಿದೆ, ಇದು ಅಮಾನವೀಯ ಎಂದು ಪಾಟೀಲ್ ಹೇಳಿದ್ದಾರೆ.

ಸರ್ಕಾರ ಮಾಸಿಕವಾಗಿ ಪ್ರಕಟಿಸುತ್ತಿದ್ದ ಮೃತರ ವರದಿಯನ್ನು ನಿಲ್ಲಿಸಿದೆ. ಹಾಗೂ 2019-20 ಹಾಗೂ 2020-21 ರ ಅವಧಿಯಲ್ಲಿ ವೈದ್ಯಕೀಯವಾಗಿ ಪ್ರಮಾಣೀಕರಿಸಲಾದ ಸಾವುಗಳ ಕಾರಣದ ವರದಿಯನ್ನು ನಿಲ್ಲಿಸಿದೆ ಎಂದು ಪಾಟೀಲ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ