ಕೋವಿಡ್-19 ಸಾವು (ಸಂಗ್ರಹ ಚಿತ್ರ) 
ರಾಜ್ಯ

ರಾಜ್ಯ ಸರ್ಕಾರ ಕೋವಿಡ್-19 ಮೃತರ ಸಂಖ್ಯೆಯನ್ನು ತಿರುಚುತ್ತಿದೆ; ಎನ್ ಡಿಎಂ ಕಾಯ್ದೆ ಪ್ರಕಾರ ಪರಿಹಾರ ನೀಡಲಿ: ಕಾಂಗ್ರೆಸ್

ರಾಜ್ಯ ಸರ್ಕಾರ ಕೋವಿಡ್-19 ಮೃತರ ಸಂಖ್ಯೆಯನ್ನು ತಿರುಚುತ್ತಿದೆ ಎಂದು ಆರೋಪ ಮಾಡಿರುವ ಪ್ರತಿಪಕ್ಷ ಕಾಂಗ್ರೆಸ್, ಸಂತ್ರಸ್ತರ ಕುಟುಂಬಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ಕಾಯ್ದೆಯ ಪ್ರಕಾರ ಪರಿಹಾರ ನೀಡಬೇಕೆಂದು ಆಗ್ರಹಿಸಿದೆ. 

ಬೆಂಗಳೂರು: ರಾಜ್ಯ ಸರ್ಕಾರ ಕೋವಿಡ್-19 ಮೃತರ ಸಂಖ್ಯೆಯನ್ನು ತಿರುಚುತ್ತಿದೆ ಎಂದು ಆರೋಪ ಮಾಡಿರುವ ಪ್ರತಿಪಕ್ಷ ಕಾಂಗ್ರೆಸ್, ಸಂತ್ರಸ್ತರ ಕುಟುಂಬಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ಕಾಯ್ದೆಯ ಪ್ರಕಾರ ಪರಿಹಾರ ನೀಡಬೇಕೆಂದು ಆಗ್ರಹಿಸಿದೆ. 

ರಾಷ್ಟ್ರೀಯ ವಿಪತ್ತು ನಿರ್ವಹಣೆ ಕಾಯ್ದೆಯ ಪ್ರಕಾರ ಮೃತರ ಕುಟುಂಬ ಸದಸ್ಯರಿಗೆ ಸರ್ಕಾರದಿಂದ 4 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಆದರೆ ಸರ್ಕಾರ ಒಂದು ಲಕ್ಷ ಮಾತ್ರ ಪರಿಹಾರ ಘೋಷಣೆ ಮಾಡಿದೆ ಎಂದು ಕಾಂಗ್ರೆಸ್ ಹೇಳಿದೆ. 

ಕಾಂಗ್ರೆಸ್ ಪಕ್ಷದ ಮಹಾರಾಷ್ಟ್ರ ಉಸ್ತುವಾರಿ, ಮಾಜಿ ಸಚಿವ ಹೆಚ್. ಕೆ ಪಾಟೀಲ್ ಜೂ.16 ರಂದು ಈ ಸಂಬಂಧ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು, ಜೂನ್ 14 ರಂದು ರಾಜ್ಯದಲ್ಲಿ 33,033 ಮಂದಿ ಕೋವಿಡ್-19 ನಿಂದ ಮೃತಪಟ್ಟಿದ್ದಾರೆ ಎಂದು ಸರ್ಕಾರದ ದಾಖಲೆಗಳು ಹೇಳುತ್ತಿವೆ.

ಆದರೆ ಜನವರಿ 1, 2021 ರಿಂದ ಜೂನ್ 13 ರ ಅವಧಿಯಲ್ಲಿ ರಾಜ್ಯದಲ್ಲಿ 3,27,985 ಮಂದಿ ಕೋವಿಡ್-19 ನಿಂದ ಸಾವನ್ನಪ್ಪಿದ್ದಾರೆ. ಆದರೆ 3.28 ಲಕ್ಷ ಹಾಗೂ 33,033 ರ ನಡುವೆ ಇರುವ ಅಂತರ ಪ್ರಶ್ನೆ ಮೂಡಿಸುತ್ತಿದೆ. ಈ ಆಧಾರದಲ್ಲಿ ಸ್ವಾಭಾವಿಕವಾಗಿ ಮೃತಪಟ್ಟಿರುವವರ ಸಂಖ್ಯೆ ಎಷ್ಟು? ಎಂದು ಪಾಟೀಲ್ ಪ್ರಶ್ನಿಸಿದ್ದಾರೆ. 

2020 ರಲ್ಲಿ ಮೃತಪಟ್ಟವರ ವರದಿಗಳನ್ನು ಸರ್ಕಾರ ಸಾರ್ವಜನಿಕವಾಗಿ ಪ್ರಕಟಿಸಿಲ್ಲ. 2018-19 ರ ಅಂಕಿ-ಅಂಶಗಳ ಪ್ರಕಾರ ಜನವರಿಯಿಂದ ಜೂನ್ ವರೆಗೂ 88,000 ಸಾವುಗಳು ಸಂಭವಿಸಿವೆ ಎಂದು ಹೆಚ್ ಕೆ ಪಾಟೀಲ್ 

ಅಂದಾಜಿನ ಪ್ರಕಾರ ತೆಗೆದುಕೊಂಡರೂ 2021 ರಲ್ಲಿ 1.10 ಲಕ್ಷ ಸಾವು ಸಂಭವಿಸಬೇಕಿತ್ತು ಆದರೆ 3.28 ಲಕ್ಷ ಸಾವು ಊಹೆಗೂ ಮೀರಿದ್ದು ಎಂದು ಪಾಟೀಲ್ ಆರೋಪಿಸಿದ್ದಾರೆ.

ಈ ಪೈಕಿ 1.10 ಲಕ್ಷ ಸಾವುಗಳನ್ನು ಹೊರತುಪಡಿಸಿದರೂ ಒಟ್ಟಾರೆ ಸಾವಿನ ಸಂಖ್ಯೆ 2.18 ಲಕ್ಷವಾಗಿರುತ್ತದೆ. ಇದು ಅತ್ಯಂತ ಹೆಚ್ಚಿನ ಅಂಕಿ-ಸಂಖ್ಯೆಯಾಗಿದೆ. 2.25 ಲಕ್ಷ ಸಾವುಗಳ ಸಂಖ್ಯೆಯನ್ನು ತಿರುಚಲಾಗಿದೆ, ಇದು ಅಮಾನವೀಯ ಎಂದು ಪಾಟೀಲ್ ಹೇಳಿದ್ದಾರೆ.

ಸರ್ಕಾರ ಮಾಸಿಕವಾಗಿ ಪ್ರಕಟಿಸುತ್ತಿದ್ದ ಮೃತರ ವರದಿಯನ್ನು ನಿಲ್ಲಿಸಿದೆ. ಹಾಗೂ 2019-20 ಹಾಗೂ 2020-21 ರ ಅವಧಿಯಲ್ಲಿ ವೈದ್ಯಕೀಯವಾಗಿ ಪ್ರಮಾಣೀಕರಿಸಲಾದ ಸಾವುಗಳ ಕಾರಣದ ವರದಿಯನ್ನು ನಿಲ್ಲಿಸಿದೆ ಎಂದು ಪಾಟೀಲ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT