ಸಂಗ್ರಹ ಚಿತ್ರ 
ರಾಜ್ಯ

ರೈಲ್ವೇ ಹಳಿಗಳಿಂದ ತಾಮ್ರ ಕದಿಯುತ್ತಿದ್ದ ಕಳ್ಳರ ಬಂಧನ

ನೈಋತ್ಯ ರೈಲ್ವೆ ವಲಯದ ರೈಲ್ವೆ ಹಳಿಗಳಲ್ಲಿ ಓವರ್ಹೆಡ್ ವಿದ್ಯುತ್ ತಂತಿಗಳಿಂದ ತಾಮ್ರವನ್ನು ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್ಪಿ) ರೆಡ್ ಹ್ಯಾಂಡ್ ಆಗಿ ಬುಧವಾರ ಬಂಧಿಸಿದ್ದಾರೆ,

ಬೆಂಗಳೂರು: ನೈಋತ್ಯ ರೈಲ್ವೆ ವಲಯದ ರೈಲ್ವೆ ಹಳಿಗಳಲ್ಲಿ ಓವರ್ಹೆಡ್ ವಿದ್ಯುತ್ ತಂತಿಗಳಿಂದ ತಾಮ್ರವನ್ನು ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್ಪಿ) ರೆಡ್ ಹ್ಯಾಂಡ್ ಆಗಿ ಬುಧವಾರ ಬಂಧಿಸಿದ್ದಾರೆ,

ಬಂಧಿತ ಇಬ್ಬರು ಇದೇ ಹಗರಣದಲ್ಲಿ ತೊಡಗಿದ್ದ 6 ಮಂದಿಯ ಗ್ಯಾಂಗ್ ನ ಸದಸ್ಯರಾಗಿದ್ದು,  ಕಳೆದ ಒಂದು ವಾರದಲ್ಲಿ ಸುಮಾರು 4 ಲಕ್ಷ ರೂ.ಗಳ ಮೌಲ್ಯದ 400 ಮೀಟರ್ ತಾಮ್ರದ ತಂತಿಯನ್ನು ಕದ್ದಿದ್ದಾರೆ. ಹೊಸಪೇಟೆ ಮತ್ತು ಗದಗ ನಡುವಿನ ಮಾರ್ಗದಲ್ಲಿ ಬರುವ ಆನೆಗೆರೆ ಮತ್ತು  ಹಲ್ಕೋಟಿ ರೈಲ್ವೆ ನಿಲ್ದಾಣಗಳ ನಡುವಿನ ಹಳಿಗಳಲ್ಲಿ ಕಳ್ಳತನ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಜಿಆರ್‌ಪಿ ವಿಜಯಪುರ ಸರ್ಕಲ್ ಇನ್ಸ್‌ಪೆಕ್ಟರ್ ಡಿ ಬಿ ಪಾಟೀಲ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಬಂಧಿತ ರವಿ ಪಾರ್ಸಪ್ಪ ಮತ್ತು ಅಪ್ರಾಪ್ತ ಬಾಲಕ (ಹೆಸರು ತಿಳಿಸಿಲ್ಲ) ಬುಧವಾರ ಮುಂಜಾನೆ ಬೈಕ್‌ನಲ್ಲಿ ತಿರುಗಾಡುತ್ತಿರುವುದು ಕಂಡುಬಂದಿದೆ. ಈ ವೇಳೆ ಅಲ್ಲಿ ಗಸ್ತು ನಡೆಸುತ್ತಿದ್ದ ನಮ್ಮ  ಕಾನ್‌ಸ್ಟೆಬಲ್‌ಗಳು ಇವರನ್ನು ಗಮನಿಸಿದ್ದಾರೆ. ಇವರ ಚಲನವಲನ ಶಂಕಾಸ್ಪದವಾಗಿತ್ತು. ಹೀಗಾಗಿ ಇವರನ್ನು ಹಿಡಿದು ವಿಚಾರಿಸಿದಾಗ ಕಳ್ಳತನ ವಿಚಾರ ಬೆಳಕಿಗೆ ಬಂದಿದೆ. ಅಲ್ಲದೆ ಇವರ ಬಳಿ ವೈರ್ ಗಳನ್ನು ಕತ್ತರಿಸಲು ಬಳಸುವ ಸಲಕರಣೆಗಳ ಚೀಲ ಕೂಡ ಪತ್ತೆಯಾಗಿದೆ ಎಂದು  ಹೇಳಿದ್ದಾರೆ.

ಕೂಡಲೇ ಅವರನ್ನು ಬಂಧಿಸಿದ್ದು, ಅವರ ತಂಡ ಕದ್ದ ಮಾಲು ಇಟ್ಟಿದ್ದ ಜಾಗಕ್ಕೆ ಕರೆದೊಯ್ದಿದ್ದಾರೆ. ಈ ವೇಳೆ ಸುಮಾರು 200 ಮೀಟರ್ ಕದ್ದ ವೈರ್ ಗಳು ಕೂಡ ಪತ್ತೆಯಾಗಿದೆ. ಇವರಿಬ್ಬರ ವಿರುದ್ಧ ಐಪಿಸಿ ಸೆಕ್ಷನ್ 379 ರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು. ಅಂತೆಯೇ ಇವರ ಗ್ಯಾಂಗ್ ನ  ಇತರೆ ಸದಸ್ಯರಾದ ನಾಗೇಶ್, ಸಿಧು, ಅರ್ಜುನ್ ಮತ್ತು ಇನ್ನೊಬ್ಬ ರವಿ ಎಂಬುವವರು ಪರಾರಿಯಾಗಿದ್ದಾರೆ. ಅವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ಕೂಡ ಆರಂಭಿಸಲಾಗಿದೆ ಎಂದು ಅವರು ತಿಳಿಸಿದರು, 

ರೈಲ್ವೆ ಹಳಿಗಳ ಬಳಿ ಇರುವ ವಿದ್ಯುತ್ ಕಂಬಗಳಲ್ಲಿನ ವೈರ್ ಗಳನ್ನು ತಂತಿಗಳಿಂದ ತಮಗೆ ಸಾಧ್ಯವಾದಷ್ಟು ಕತ್ತರಿಸಿ ತೆಗೆಯುವುದು ಈ  ಗ್ಯಾಂಗ್‌ನ ಕಾರ್ಯವಿಧಾನವಾಗಿದೆ. ಈ ರೀತಿ ಕತ್ತರಿಸಿ ತೆಗೆದ ಒಂದು ಮೀಟರ್ ತಾಮ್ರದ ತಂತಿಗೆ ಮಾರುಕಟ್ಟೆಯಲ್ಲಿ ಕನಿಷ್ಠ 1,000 ರೂ ಬೆಲೆ ಇದೆ  ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT