ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್ ಎಫೆಕ್ಟ್: ಚುನಾವಣೆಗಳನ್ನು 6 ತಿಂಗಳ ಕಾಲ ಮುಂದೂಡಿ ರಾಜ್ಯ ಸರ್ಕಾರ ಆದೇಶ

ಕೊರೋನಾ ಕಾರಣದಿಂದಾಗಿ ರಾಜ್ಯದಲ್ಲಿ ನಡೆಯಬೇಕಿದ್ದ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ, ಉಪ ಚುನಾವಣೆ ಹಾಗೂ ಅಧ್ಯಕ್ಷರು, ಉಪಾಧ್ಯಕ್ಷರ ಸ್ಥಾನಗಳ ಚುನಾವಣೆಯನ್ನು ಮುಂದೂಡಲಾಗಿದೆ.

ಬೆಂಗಳೂರು: ಕೊರೋನಾ ಕಾರಣದಿಂದಾಗಿ ರಾಜ್ಯದಲ್ಲಿ ನಡೆಯಬೇಕಿದ್ದ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ, ಉಪ ಚುನಾವಣೆ ಹಾಗೂ ಅಧ್ಯಕ್ಷರು, ಉಪಾಧ್ಯಕ್ಷರ ಸ್ಥಾನಗಳ ಚುನಾವಣೆಯನ್ನು ಮುಂದೂಡಲಾಗಿದೆ. ಚುನಾವಣೆಗಳನ್ನು 6 ತಿಂಗಳ ಕಾಲ ಮುಂದೂಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರಿಗೆ, ಯೋಜನಾ ನಿರ್ದೇಶಕರಿಗೆ ಪತ್ರ ಬರೆದಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕ ಆರೋಗ್ಯದ ಹಿತದೃಷ್ಠಿಯಿಂದ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ ಚುನಾವಣೆ ನಡೆಸುವುದು ಬಾಕಿ ಇದ್ದಲ್ಲಿ, ಚುನಾವಣೆಯನ್ನು ಕೂಡಲೇ ಮುಂದೂಡುವಂತೆ ನಿರ್ದೇಶನ ನೀಡಲಾಗಿದೆ.

ಸಚಿವ ಸಂಪುಟ ನಿರ್ಣಯದ ಹಿನ್ನಲೆಯಲ್ಲಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳು ಹಾಗೂ ಮಹಾನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆ, ಉಪ ಚುನಾವಣೆ ಹಾಗೂ ಸದರಿ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಚುನಾವಣೆಗಳನ್ನು  ಮುಂದೂಡಲಾಗಿದೆ. ದಿನಾಂಕ 26-04-2021ರಿಂದ ಮುಂದಿನ 6 ತಿಂಗಳ ಅವಧಿಗೆ ಮುಂದೂಡುವ ಬಗ್ಗೆ ಸಚಿವ ಸಂಪುಟವು ತೀರ್ಮಾನಿಸಿದ್ದು, ಅದರಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಕಾರ, ಪಂಚಾಯತ್ ಚುನಾವಣೆಗೆ 3.5 ಕೋಟಿ ಅರ್ಹ ಮತದಾರರಿದ್ದಾರೆ. ಬಿಬಿಎಂಪಿ ಆಡಿತಾಧಿಕಾರಿ ನೇಮಕವಾಗಿ   ತಿಂಗಳುಗಳ ನಂತರ, ಸರ್ಕಾರವು ಇನ್ನೂ ಡಿಲಿಮಿಟೇಶನ್ ಕೆಲಸವನ್ನು ಪೂರ್ಣಗೊಳಿಸದ ಕಾರಣ ಕೌನ್ಸಿಲ್ ಚುನಾವಣೆಗಳು ಕೂಡ ನಡೆಯುವುದಿಲ್ಲ, ಮೇ ಮತ್ತು ಜೂನ್ ತಿಂಗಳಿನಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ನಡೆಸಲು ಸರ್ಕಾರ ನಿರ್ಧರಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ: RCB ಗೆ 18 ರನ್ ಗಳ ಭರ್ಜರಿ ಗೆಲುವು!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

SCROLL FOR NEXT