ಸಂತೋಷ್ ಹೆಗ್ಡೆ 
ರಾಜ್ಯ

ಸೈಬರ್ ವಂಚಕರ ವಿರುದ್ಧ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ದೂರು ದಾಖಲು!

ಕ್ರೆಡಿಟ್ ಕಾರ್ಡ್​ನಲ್ಲಿ ಗಳಿಸಿಕೊಂಡಿರುವ ಪಾಯಿಂಟ್ ಮುಕ್ತಾಯವಾಗಲಿದೆ ಎಂದು ಕರೆ ಮಾಡಿ ವಂಚಿಸಲು ಯತ್ನಿಸಿದ್ದಾರೆ

ಬೆಂಗಳೂರು: ಕ್ರೆಡಿಟ್ ಕಾರ್ಡ್​ನಲ್ಲಿ ಗಳಿಸಿಕೊಂಡಿರುವ ಪಾಯಿಂಟ್ ಮುಕ್ತಾಯವಾಗಲಿದೆ ಎಂದು ಕರೆ ಮಾಡಿ ವಂಚಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಸೈಬರ್ ಖದೀಮರ ವಿರುದ್ಧ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ನಗರ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಜೂ. 14ರಂದು ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿದ ಮಹಿಳೆಯೊಬ್ಬಳು, ಸಿಟಿ ಬ್ಯಾಂಕ್ ಮಾಸ್ಟರ್ ಕ್ರೆಡಿಟ್ ಕಾರ್ಡ್​ನಲ್ಲಿ ಗಳಿಸಿಕೊಂಡಿರುವ ಪಾಯಿಂಟ್ ಮುಕ್ತಾಯವಾಗಲಿದೆ ಎಂದು ತಿಳಿಸಿದ್ದಾಳೆ. ಇದರಿಂದ ಸಂಶಯಗೊಂಡ ಸಂತೋಷ್ ಹೆಗ್ಡೆ ಅವರು ತಕ್ಷಣವೇ ಕರೆ ಸ್ಥಗಿತಗೊಳಿಸಿದ್ದಾರೆ. ನಂತರ ಓಟಿಪಿ ಕಳುಹಿಸುವಂತೆ ಮೇಸೆಜ್ ಮಾಡಿದ್ದಾಳೆ. ಮೋಸ ಮಾಡುವ ದುರುದ್ದೇಶದಿಂದ ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿ ವಂಚಿಸಲು ಪ್ರಯತ್ನಿಸಿದ್ದಾಳೆ ಎಂದು ದೂರಿನಲ್ಲಿ ಸಂತೋಷ್ ಹೆಗ್ಡೆ ಉಲ್ಲೇಖಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸೆಂಟ್ರಲ್ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT