ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್-19 ಹಿನ್ನೆಲೆಯಲ್ಲಿ ಆನ್ ಲೈನ್ ಶಿಕ್ಷಣ: ಕರ್ನಾಟಕದ 4 ವಿಶ್ವವಿದ್ಯಾಲಯಗಳಿಗೆ ಯುಜಿಸಿ ಅನುಮತಿ 

ಕರ್ನಾಟಕದಲ್ಲಿ 4 ವಿಶ್ವವಿದ್ಯಾಲಯಗಳಿಗೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕೋತ್ತರ ಮತ್ತು ಪದವಿಗಳಿಗೆ ಆನ್ ಲೈನ್ ನಲ್ಲಿ ತರಗತಿ ನಡೆಸಲು ಯುಜಿಸಿ ಅನುಮತಿ ನೀಡಿದೆ.

ಶಿವಮೊಗ್ಗ: ಕರ್ನಾಟಕದಲ್ಲಿ 4 ವಿಶ್ವವಿದ್ಯಾಲಯಗಳಿಗೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕೋತ್ತರ ಮತ್ತು ಪದವಿಗಳಿಗೆ ಆನ್ ಲೈನ್ ನಲ್ಲಿ ತರಗತಿ ನಡೆಸಲು ಯುಜಿಸಿ ಅನುಮತಿ ನೀಡಿದೆ.

ಕುವೆಂಪು ವಿಶ್ವ ವಿದ್ಯಾಲಯ, ಮೈಸೂರು ವಿಶ್ವ ವಿದ್ಯಾಲಯ ಆನ್ ಲೈನ್ ನಲ್ಲಿ ವಿದ್ಯಾರ್ಥಿಗಳಿಗೆ 12 ವಿವಿಧ ಕೋರ್ಸ್ ಗಳನ್ನು ನೀಡಿದರೆ ಜೈನ್ ಮತ್ತು ಯೆಣೆಪೊಯ ವಿಶ್ವ ವಿದ್ಯಾಲಯಗಳು 10 ಕೋರ್ಸ್ ಗಳನ್ನು ಆನ್ ಲೈನ್ ನಲ್ಲಿ ನೀಡಲಿವೆ.

ಈ ಸಂಬಂಧ ಜೂನ್ 11ರಂದು ಪತ್ರ ಬಿಡುಗಡೆ ಮಾಡಿರುವ ಯುಜಿಸಿ, ಯುಜಿಸಿಯ ನಿಯಮದಡಿ ನಾಲ್ಕು ವಿಶ್ವವಿದ್ಯಾಲಯಗಳಿಗೆ ಪೂರ್ಣ ಪ್ರಮಾಣದಲ್ಲಿ ಆನ್ ಲೈನ್ ನಲ್ಲಿ ಶಿಕ್ಷಣ ನೀಡಲು ಅನುಮತಿ ನೀಡಲಾಗುತ್ತಿದೆ ಎಂದಿದೆ.

ಕೋವಿಡ್ -19ನ ಪ್ರಭಾವವು ಶಿಕ್ಷಣ ತಜ್ಞರನ್ನು ಹಲವು ಆಯಾಮಗಳಲ್ಲಿ ಯೋಚಿಸಲು ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಸಾಧ್ಯತೆಗಳೊಂದಿಗೆ ಹೊರಬರಲು ಅವಕಾಶ ನೀಡುತ್ತಿದೆ.ಪ್ರಸ್ತುತ, ಶಿಕ್ಷಣವು ಆನ್‌ಲೈನ್ ಶಿಕ್ಷಣದ ವಿಧಾನವಾಗಿ ಬದಲಾಗುತ್ತಿದೆ. ಈಗ, ಉನ್ನತ ಶಿಕ್ಷಣಕ್ಕಾಗಿ ಹಾತೊರೆಯುವವರ ಮನೆ ಬಾಗಿಲಿಗೆ ಆನ್‌ಲೈನ್ ಕೋರ್ಸ್‌ಗಳನ್ನು ನೀಡಲು ಯುಜಿಸಿ ನಮಗೆ ಅನುಮತಿ ನೀಡಿದೆ. ಆನ್‌ಲೈನ್ ಶಿಕ್ಷಣವನ್ನು ಪ್ರಾರಂಭಿಸಿದ ದೇಶದ 38 ವಿಶ್ವವಿದ್ಯಾಲಯಗಳಲ್ಲಿ ಕುವೆಂಪು ವಿಶ್ವವಿದ್ಯಾಲಯವೂ ಒಂದು ಮತ್ತು ಇದು ನಮಗೆ ಹೆಮ್ಮೆಯ ಕ್ಷಣವಾಗಿದೆ ಎಂದು ವಿಶ್ವ ವಿದ್ಯಾಲಯದ ಉಪ ಕುಲಪತಿ ಬಿ ಪಿ ವೀರಭದ್ರಪ್ಪ ತಿಳಿಸಿದ್ದಾರೆ.

ಈ ಹಿಂದೆ ತಿದ್ದುಪಡಿ ಕೆಎಸ್‌ಒಯುಗೆ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣವನ್ನು ನೀಡಲು ಅನುಮತಿ ನೀಡಿದಾಗ ಕುವೆಂಪು ವಿಶ್ವವಿದ್ಯಾಲಯಕ್ಕೆ ಹಿನ್ನಡೆಯಾಗಿತ್ತು. ಈಗ ಯುಜಿಸಿ ಮುಕ್ತ-ದೂರಶಿಕ್ಷಣ ಮತ್ತು ಆನ್‌ಲೈನ್ ವಿಧಾನಗಳ ಮೂಲಕ ಕೋರ್ಸ್‌ಗಳನ್ನು ನೀಡಲು ವಿಶ್ವವಿದ್ಯಾಲಯಕ್ಕೆ ಅನುಮತಿ ನೀಡಿದೆ ಎಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಎಸ್ ಎಸ್ ಪಾಟೀಲ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಧಾನಸಭೆಯಲ್ಲಿ ದ್ವೇಷ ಭಾಷಣ ಪ್ರತಿಬಂಧಕ ಮಸೂದೆ ಮಂಡನೆ; 1 ಲಕ್ಷ ರೂ ದಂಡ; 10 ವರ್ಷ ಶಿಕ್ಷೆ!

EVMs ಅಲ್ಲವೇ ಅಲ್ಲ, ಪ್ರಧಾನಿ ಮೋದಿ ಇದನ್ನೇ 'ಹ್ಯಾಕ್' ಮಾಡಿದ್ದಾರೆ! ಲೋಕಸಭೆಯಲ್ಲಿ ಕಂಗನಾ

ಸಮಾಧಿಯಲ್ಲೂ ನೆಮ್ಮದಿ ಇಲ್ಲ: Devil ರಿಲೀಸ್‌ಗೂ ಮುನ್ನ ದಿನ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸಗೊಳಿಸಿದ ಕಿಡಿಗೇಡಿಗಳು!

ಗೋವಿಂದಾ... ಗೋವಿಂದ..: TTDಗೆ 10 ವರ್ಷ ಕೋಟ್ಯಾಂತರ ರೂ. ಪಂಗನಾಮ; "ರೇಷ್ಮೆ" ಹಗರಣದಿಂದ ಭಾರಿ ನಷ್ಟ, ಅವಮಾನ!

ಶಾಲೆಗಳಲ್ಲಿ 'ವಂದೇ ಮಾತರಂ' ಹಾಡುವುದನ್ನು ಕಡ್ಡಾಯಗೊಳಿಸಬೇಕು: ಸುಧಾ ಮೂರ್ತಿ ಸರ್ಕಾರಕ್ಕೆ ಒತ್ತಾಯ

SCROLL FOR NEXT