ರಾಜ ಭವನ 
ರಾಜ್ಯ

ರಾಜ ಭವನದಲ್ಲಿ ಉದ್ಯಾನವನ ನಿರ್ವಹಣೆಗೆ 3 ವರ್ಷಗಳಲ್ಲಿ ಮಾಡಿರುವ ಖರ್ಚು ಬರೋಬ್ಬರಿ 3.2 ಕೋಟಿ ರೂ!

ಮೂರು ವರ್ಷಗಳಲ್ಲಿ (2014ರಿಂದ 2017ರವರೆಗೆ) ರಾಜ ಭವನದ ಉದ್ಯಾನವನವನ್ನು ನಿರ್ವಹಿಸಲು ಬರೋಬ್ಬರಿ 3.27 ಕೋಟಿ ರೂ. ಹಣ ಖರ್ಚು ಮಾಡಲಾಗಿದೆ ಎಂದು ಆರ್ ಟಿಐ ನಿಂದ ಬಹಿರಂಗವಾಗಿದೆ.

ಬೆಳಗಾವಿ: ಮೂರು ವರ್ಷಗಳಲ್ಲಿ ವಿಧಾನ ಸೌಧದ ಪಕ್ಕದಲ್ಲಿರುವ ರಾಜ ಭವನದಲ್ಲಿ ಉದ್ಯಾನವನದ ಅಲಂಕಾರಕ್ಕೆ ಹೂವುಗಳಿಗೆ 4.80 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಇನ್ನು ಮೂರು ವರ್ಷಗಳಲ್ಲಿ(2014ರಿಂದ 2017ರವರೆಗೆ) ರಾಜ ಭವನದ ಉದ್ಯಾನವನವನ್ನು ನಿರ್ವಹಿಸಲು ಬರೋಬ್ಬರಿ 3.27 ಕೋಟಿ ರೂಪಾಯಿ ಸಾರ್ವಜನಿಕ ಹಣವನ್ನು ಬಳಕೆ ಮಾಡಲಾಗಿದೆ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಬಹಿರಂಗವಾಗಿದೆ.

ಮೂರು ವರ್ಷಗಳ ಅವಧಿಯಲ್ಲಿ ರಾಜ ಭವನ ತೋಟದಲ್ಲಿ ಕೆಲಸ ಮಾಡುವ ದಿನನಿತ್ಯದ ಕಾರ್ಮಿಕರಿಗೆ ಸುಮಾರು 11.59 ಲಕ್ಷ ರೂ, ಪರಿಕಲ್ಪನೆ, ಮಾಸ್ಟರ್ ಪ್ಲ್ಯಾನ್ ಮತ್ತು ಉದ್ಯಾನದ ಅಭಿವೃದ್ಧಿಗೆ 2.95 ಕೋಟಿ ರೂ, ತರಕಾರಿಗಳ ಬೀಜಗಳಿಗೆ 15 ಲಕ್ಷ ರೂ, ರಸಗೊಬ್ಬರಗಳು, ಕೆಂಪು ಮಣ್ಣು, ಬ್ರಷ್ ಕಟ್ಟರ್ ಮತ್ತು ಪವರ್ ಟಿಲ್ಲರ್‌ಗೆ ಇಂಧನದ ಮೇಲೆ 52,000 ರೂ ಮತ್ತು ರಾಜಭವನದ ಗವರ್ನರ್ ನಿವಾಸದಲ್ಲಿ, ಡೈನಿಂಗ್ ಹಾಲ್, ಮುಖ್ಯ ಕಚೇರಿ, ವಿಐಪಿ ಲಾಂಜ್ ಮೊದಲಾದ ಕಡೆಗಳಲ್ಲಿ ಹೂವುಗಳ ಅಲಂಕಾರಕ್ಕೆ 4.80 ಲಕ್ಷ ರೂಪಾಯಿ ಸೇರಿ ಸುಮಾರು 3.27 ಕೋಟಿ ರೂಪಾಯಿ ಖರ್ಚಾಗಿದೆ.

ಆರ್ ಟಿಐಯಡಿ ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ ಭೀಮಪ್ಪ ಗಡದ್ ರಾಜ್ಯ ಸರ್ಕಾರದ ಖಜಾನೆಯಿಂದ ಇಷ್ಟೊಂದು ಹಣವನ್ನು ಉದ್ಯಾನವನದ ಅಭಿವೃದ್ಧಿಗೆ ಖರ್ಚು ಮಾಡುವುದಕ್ಕೆ ಆಘಾತ ವ್ಯಕ್ತಪಡಿಸಿದ್ದಾರೆ. ಕೇವಲ ಹೂವುಗಳ ಮಡಕೆ ಅಲಂಕಾರಕ್ಕೆ 5 ಲಕ್ಷದಷ್ಟು ಹಣ ಖರ್ಚು ಮಾಡುವುದನ್ನು ನೋಡಿ ಇನ್ನೂ ಆಘಾತವಾಯಿತು ಎನ್ನುತ್ತಾರೆ.

2014ರಲ್ಲಿ ವಜುಭಾಯಿ ವಾಲಾ ಅವರು ರಾಜ್ಯಪಾಲರಾದ ನಂತರ ಸಾರ್ವಜನಿಕರಿಗೆ ಭೇಟಿಗೆ ಅವಕಾಶ ನೀಡದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಗಡದ್, ರಾಜ್ಯಪಾಲರು ಜನರ ಸಂಕಷ್ಟಗಳಿಗೆ ಯಾವ ಮಟ್ಟದಲ್ಲಿ ಎಷ್ಟು ಸ್ಪಂದಿಸಿದ್ದಾರೆ ಎಂದು ಕೇಳಿದ್ದಾರೆ. ಇನ್ನು ರಾಜ ಭವನದಲ್ಲಿ ಕೆಲಸ ಮಾಡುವ ಅಧಿಕಾರಿಗಳ ಕಾರ್ಯವೈಖರಿಯನ್ನು ಪ್ರಶ್ನಿಸಿರುವ ಅವರು, ಅಲ್ಲಿನ ಅಧಿಕಾರಿಗಳು ಜನಸ್ನೇಹಿಯಾಗಿಲ್ಲ ಎಂದು ಆರೋಪಿಸುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT