ಸಚಿವ ಸುರೇಶ್ ಕುಮಾರ್ 
ರಾಜ್ಯ

ರಾಜ್ಯದಲ್ಲಿ 2 ತಿಂಗಳು ಪ್ರತಿ ವಿದ್ಯಾರ್ಥಿಗೂ ಕೆನೆಭರಿತ ಹಾಲಿನ ಪುಡಿ ವಿತರಣೆ!

ಪ್ರಸಕ್ತ ಸಾಲಿನ ಜೂನ್‌ ಮತ್ತು ಜುಲೈ ತಿಂಗಳಲ್ಲಿ (ಎರಡು ತಿಂಗಳು) ಪ್ರತಿ ಶಾಲಾ ವಿದ್ಯಾರ್ಥಿಗೆ ಆಹಾರಧಾನ್ಯದ ಜೊತೆಗೆ ತಲಾ ಅರ್ಧ ಕಿಲೋ ಕೆನೆಭರಿತ ಹಾಲಿನ ಪುಡಿ ವಿತರಿಸಲು ಶಿಕ್ಷಣ ಇಲಾಖೆಯು 163.71 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿದೆ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. 

ಬೆಂಗಳೂರು: ಪ್ರಸಕ್ತ ಸಾಲಿನ ಜೂನ್‌ ಮತ್ತು ಜುಲೈ ತಿಂಗಳಲ್ಲಿ (ಎರಡು ತಿಂಗಳು) ಪ್ರತಿ ಶಾಲಾ ವಿದ್ಯಾರ್ಥಿಗೆ ಆಹಾರಧಾನ್ಯದ ಜೊತೆಗೆ ತಲಾ ಅರ್ಧ ಕಿಲೋ ಕೆನೆಭರಿತ ಹಾಲಿನ ಪುಡಿ ವಿತರಿಸಲು ಶಿಕ್ಷಣ ಇಲಾಖೆಯು 163.71 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿದೆ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. 

ಶಾಲೆಗಳು ಭೌತಿಕವಾಗಿ ನಡೆಯದೇ ಇದ್ದರೂ ಮಧ್ಯಾಹ್ನ ಉಪಹಾರದ ಆಹಾರ ಧಾನ್ಯಗಳು, ಅಡುಗೆ ಎಣ್ಣೆ ಸೇರಿದಂತೆ ಪೂರಕ ಸಾಮಗ್ರಿಗಳನ್ನು ನಿರಂತರವಾಗಿ ತಲುಪಿಸುವ ವ್ಯವಸ್ಥೆ ಮಾಡುತ್ತಿದ್ದೇವೆ. ಇಂತಹ ಸಂಕಷ್ಟದ ಸಮಯದಲ್ಲಿ ನಮ್ಮ ಸರಕಾರಿ ಶಾಲಾ ಮಕ್ಕಳಿಗೆ ಪೌಷ್ಟಿಕಾಂಶದ ಆಹಾರ ದೊರಕಬೇಕು ಎನ್ನುವ ಸದುದ್ದೇಶದಿಂದ ಈಗ ಜೂನ್ ಹಾಗೂ ಜುಲೈ ತಿಂಗಳುಗಳಿಗೆ ಸಂಬಂಧಿಸಿದಂತೆ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ಅರ್ಧ ಕಿಲೋಗ್ರಾಂ ಕೆನೆಭರಿತ ಹಾಲಿನ ಪುಡಿಯನ್ನು ಒದಗಿಸಲು ಆಲೋಚಿಸಿದ್ದೇವೆ. ಆ ಮೂಲಕ ನಮ್ಮ ವಿದ್ಯಾರ್ಥಿಗಳ ಆರೋಗ್ಯಕ್ಕೆ ಪರಿಪೂರ್ಣ ಬೆಂಬಲವನ್ನು ದೊರಕಿಸುವ, ಅವರ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉದ್ದೇಶ ಸರಕಾರದ್ದಾಗಿದೆ ಎಂದು ಹೇಳಿದ್ದಾರೆ.

ಸರ್ಕಾರ ಈ ನಿರ್ಧಾರವು ನಮ್ಮ ಮಕ್ಕಳ ಪೌಷ್ಟಿಕತೆಗೆ ಪೂರಕವಾಗುವುದಷ್ಟೇ ಅಲ್ಲ, ಸಂಕಷ್ಟದಲ್ಲಿರುವ ಗ್ರಾಮೀಣ ಹಾಲು ಉತ್ಪಾದಕರ, ರೈತರ ಆರ್ಥಿಕ ಮಟ್ಟ ಸುಧಾರಿಸಲು ನೆರವಾಗಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಈ ಹಾಲಿನ ಪುಡಿಯ ಪ್ಯಾಕೆಟ್ ವಿತರಣಾ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಿರ್ವಹಿಸುವ ಜವಾಬ್ದಾರಿ ನಿಗದಿ ಪಡಿಸಲಾಗಿದೆ. ತಮ್ಮ ಇಲಾಖೆಯು ಸಲ್ಲಿಸಿದ ಪ್ರಸ್ತಾವನೆಗೆ ಅತಿ ಶೀಘ್ರದಲ್ಲಿ ಅನುಮೋದನೆ ನೀಡಿದ ಮುಖ್ಯಮಂತ್ರಿಗೆ ಧನ್ಯವಾದಗಳು ಎಂದು ಸುರೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT