ಬಾಂಧವ್ಯ ಹಾಗೂ ಆಕೆಯ ತಂದೆ ರಾಜಣ್ಣ 
ರಾಜ್ಯ

ಅಪ್ಪಂದಿರ ದಿನವೇ ಮಂಡ್ಯದಲ್ಲಿ ದುರಂತ: ಮಗಳ ಆತ್ಮಹತ್ಯೆಯಿಂದ ನೊಂದ ತಂದೆಗೆ ಹೃದಯಾಘಾತ

ವಿಶ್ವ ಅಪ್ಪಂದಿರ ದಿನವೇ ಮಂಡ್ಯದಲ್ಲಿ ಯಾರೂ  ಬಯಸದ ದುರಂತವೊಂದು ನಡೆದುಹೋಗಿದೆ. ಒಳ್ಳೆಯ ಕಾಲೇಜಿಗೆ ಸೇರಿಸಿಲ್ಲ ಎಂದು ಬೇಸರಗೊಂಡ ಮಗಳು ನೇಣಿಗೆ ಶರಣಾಗಿದ್ದನ್ನು ನೋಡಿದ ತಂದೆ ಮನನೊಂದಿದ್ದು ಅವರಿಗೂ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.

ಮಂಡ್ಯ: ವಿಶ್ವ ಅಪ್ಪಂದಿರ ದಿನವೇ ಮಂಡ್ಯದಲ್ಲಿ ಯಾರೂ  ಬಯಸದ ದುರಂತವೊಂದು ನಡೆದುಹೋಗಿದೆ. ಒಳ್ಳೆಯ ಕಾಲೇಜಿಗೆ ಸೇರಿಸಿಲ್ಲ ಎಂದು ಬೇಸರಗೊಂಡ ಮಗಳು ನೇಣಿಗೆ ಶರಣಾಗಿದ್ದನ್ನು ನೋಡಿದ ತಂದೆ ಮನನೊಂದಿದ್ದು ಅವರಿಗೂ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ತಳಗವಾದಿ ಗ್ರಾ,ಮದಲ್ಲಿ ಸಂಭವಿಸಿದ ಘಟನೆಯಲ್ಲಿ ಬಾಂಧವ್ಯ (17) ನೇಣಿಗೆ ಶರಣಾಗಿದ್ದರೆ ಆಕೆಯ ತಂದೆ ರಾಜಣ್ಣ  (65) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಬಾಂಧವ್ಯ ತಾನು ಕಾಲೇಜಿಗೆ ಸೇರುವ ವಿಚಾರದಲ್ಲಿ ತಂದೆ ಜತೆ ಜಗಳವಾಡಿದ್ದಾಳೆ. ಆ ನಂತರ ಭಾನುವಾರ ಬೆಳಗಿನ ಜಾವ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ಈ ದೃಶ್ಯ ನೋಡಿದ ರಾಜಣ್ಣನವರಿಗೆ ಹೃದಯಾಘಾತವಾಗಿದೆ.

ಮಗಳ ಅಂತಿಮ ಸಂಸ್ಕಾರದ ವೇಳೆ ರಾಜಣ್ಣನವರಿಗೆ ಹೃದಯಾಘಾತವಾಗಿದೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಚಿಕ್ಕ ವಿಷಯಕ್ಕೆ ಒಂದೇ ದಿನ ಎರಡು ಜೀವ ಬಲಿಯಾಗಿದೆ. ಘಟನೆ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT