ಸಂಗ್ರಹ ಚಿತ್ರ 
ರಾಜ್ಯ

ಮಂಗಳೂರು: ಇಲಿ ಪಾಷಾಣ ಸೇವಿಸಿದ ಮಾಜಿ ಸೈನಿಕನ ಎರಡೂವರೆ ವರ್ಷದ ಪುತ್ರಿ ಮೃತ್ಯು

ಆಘಾತಕಾರಿ ಘಟನೆಯೊಂದರಲ್ಲಿ ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ ಆಕಸ್ಮಿಕವಾಗಿ ಇಲಿ ಪಾಷಾಣ ಸೇವಿಸಿದ  ಎರಡೂವರೆ ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.

ಮಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ ಆಕಸ್ಮಿಕವಾಗಿ ಇಲಿ ಪಾಷಾಣ ಸೇವಿಸಿದ  ಎರಡೂವರೆ ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.

ಶನಿವಾರ ಈ ಘಟನೆ ನಡೆದಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬಜತ್ತೂರು ಗ್ರಾಮದ ಕೆಮ್ಮಾರು ಮೂಲದ ಮಾಜಿ ಸೈನಿಕ ಶೈಜು ಅವರ ಪುತ್ರಿ ಹೀಗೆ ಇಲಿ ಪಾಷಾಣ ಸೇವಿಸಿ ಮೃತಪಟ್ಟಿದ್ದಾಳೆ.

ತನ್ನ ಮಗಳು ಪೇಸ್ಟ್ ತಿನ್ನುವುದನ್ನು ಕಂಡ ಶೈಜು ಅವರಿಗೆ ಅದು ಇಲಿ ಪಾಷಾಣ ಎಂದು ತಡವಾಗಿ ಅರಿವಾಗಿದೆ. ಇಲಿ ಪಾಷಾಣ ತಿಂದ ಬಾಲಕಿ ವಾಂತಿ ಮಾಡಲು ಪ್ರಾರಂಭಿಸಿದ್ದಾಳೆ. ಅವಳನ್ನು  ಉಪ್ಪಿನಂಗಡಿಯ ಆಸ್ಪತ್ರೆಗೆ ಮತ್ತು ನಂತರ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆ ನಂತರ ಹೆಚ್ಚಿನ ಚಿಕಿತ್ಸೆಗಾಗಿ  ಮಗುವನ್ನು ಮಂಗಳೂರಿಗೆ ಸ್ಥಳಾಂತರಿಸುವಂತೆ ವೈದ್ಯರು ಕುಟುಂಬಕ್ಕೆ ಸಲಹೆ ನೀಡಿದರು.

ಆದರೆ ಅಷ್ಟರಲ್ಲೇ ಮಗುವಿನ ಸ್ಥಿತಿ ಹದಗೆಟ್ಟಿತು ಮತ್ತು ಮಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಆಕೆ ಮೃತಪಟ್ಟಿದ್ದಾಳೆ ಎಂದು ಹೇಳಿದ್ದಾರೆ.

ಘಟನೆ ಸಂಬಂಧ ಉಪ್ಪಿನಂಗಡಿ ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT