ಸಂಗ್ರಹ ಚಿತ್ರ 
ರಾಜ್ಯ

ಖಾಸಗಿ ಶಾಲೆಗಳ ಶುಲ್ಕ ನಿಗದಿ: ಹೈಕೋರ್ಟ್​ನಿಂದ ಸರ್ಕಾರದ ಮಧ್ಯಂತರ ಅರ್ಜಿ ವಿಚಾರಣೆ ಮುಂದೂಡಿಕೆ

ಶಾಲಾ ಆಡಳಿತ ಮಂಡಳಿಗಳು ಪ್ರಸ್ತಾಪಿಸಿರುವ ಶಾಲಾ ಶುಲ್ಕವನ್ನು ನಿರ್ಧರಿಸಲು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಹೈ-ಪವರ್ ಕಮಿಟಿಯನ್ನು ರಚಿಸಲು ಅನುಮತಿ ಕೋರಿ ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.  

ಬೆಂಗಳೂರು: ಶಾಲಾ ಆಡಳಿತ ಮಂಡಳಿಗಳು ಪ್ರಸ್ತಾಪಿಸಿರುವ ಶಾಲಾ ಶುಲ್ಕವನ್ನು ನಿರ್ಧರಿಸಲು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಹೈ-ಪವರ್ ಕಮಿಟಿಯನ್ನು ರಚಿಸಲು ಅನುಮತಿ ಕೋರಿ ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.  

ಖಾಸಗಿ ಶಾಲೆಗಳಲ್ಲಿ ಶುಲ್ಕ ನಿಗದಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಿಚಾರಣೆ ನಡೆಸಿತು. ರಾಜ್ಯ ಸರ್ಕಾರದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಖಾಸಗಿ ಶಾಲೆಗಳು ಕೋರಿದವು. ಖಾಸಗಿ ಶಾಲೆಗಳ ಮನವಿ ಹಿನ್ನೆಲೆಯಲ್ಲಿ ಹೈಕೋರ್ಟ್​ ಅರ್ಜಿಯ ವಿಚಾರಣೆಯನ್ನು ಜೂನ್ 29ಕ್ಕೆ ಮುಂದೂಡಿದೆ.

ಖಾಸಗಿ ಶಾಲೆಗಳಿಗೆ ರಾಜ್ಯ ಸರ್ಕಾರವು ಈ ಬಾರಿ ಒಟ್ಟು ನಿಗದಿತ ಶುಲ್ಕದ ಪೈಕಿ ಶೇ 70ರಷ್ಟನ್ನು ಮಾತ್ರ ಪಡೆಯುವಂತೆ ಆದೇಶಿಸಿತ್ತು. ಶುಲ್ಕದಲ್ಲಿ ಶೇ 30ರಷ್ಟು ಮೊತ್ತವನ್ನು ವಿನಾಯ್ತಿ ನೀಡಬೇಕು ಎಂಬ ರಾಜ್ಯ ಸರ್ಕಾರದ ಆದೇಶವನ್ನು ಖಾಸಗಿ ಶಾಲೆಗಳ ಒಕ್ಕೂಟ ರಿಟ್ ಅರ್ಜಿ ಸಲ್ಲಿಸುವ ಮೂಲಕ ಪ್ರಶ್ನಿಸಿತ್ತು. ಶುಲ್ಕ ನಿಗದಿಯ ಬಗ್ಗೆ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸಲು ಈ ವೇಳೆ ಪ್ರಸ್ತಾಪ ಸಲ್ಲಿಕೆಯಾಗಿತ್ತು. ಈ ವಿಚಾರದಲ್ಲಿ ರಾಜ್ಯ ಸರ್ಕಾರವು ಮಧ್ಯಂತರ ಅರ್ಜಿ ಸಲ್ಲಿಸಿತ್ತು.

ಅರ್ಜಿಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಅಂಶಗಳ ಮೇಲೆ ಕೋವಿಡ್ ಮೊದಲ ಅಲೆಯ ಪ್ರಭಾವವನ್ನು ವಿವರಿಸಿದ ಸಾರ್ವಜನಿಕ ಶಿಕ್ಷಣ (ಪ್ರಾಥಮಿಕ ಶಿಕ್ಷಣ) ನಿರ್ದೇಶಕ ಎಂ.ಎಸ್.ಪ್ರಸನ್ನ ಕುಮಾರ್, ಪೋಷಕರು ಎದುರಿಸುತ್ತಿರುವ ಶುಲ್ಕ ಬಿಕ್ಕಟ್ಟನ್ನು ಪರಿಹರಿಸಲು ಸರ್ಕಾರ ಮುಂದೆ ಬಂದಿದೆ ಎಂದು ಹೇಳಿದ್ದಾರೆ. ಅಂತೆಯೇ ಕರ್ನಾಟಕ ಸರ್ಕಾರದ ಸೂಚನೆಯಂತೆ ಈ ವರ್ಷವೂ ಶಾಲಾ ಶುಲ್ಕದಲ್ಲಿ ಶೇ 30ರಷ್ಟು ರಿಯಾಯ್ತಿ ನೀಡಲು ಸಾಧ್ಯವಿಲ್ಲ ಎಂದು ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಈ ಹಿಂದೆ ಸ್ಪಷ್ಟಪಡಿಸಿದ್ದವು. ‘ನಮ್ಮ ಪರಿಸ್ಥಿತಿ ಅರ್ಥ ಮಾಡಿಕೊಂಡು ಈ ವರ್ಷವೂ ಶುಲ್ಕ ರಿಯಾಯ್ತಿ ನೀಡಬೇಕು’ ಎಂದು ಪೋಷಕರ ಒಕ್ಕೂಟಗಳು ಆಗ್ರಹಿಸಿದ್ದವು.

ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಈಚೆಗೆ ಮನವಿ ಸಲ್ಲಿಸಿದ್ದ ಪೋಷಕರ ಒಕ್ಕೂಟದ ಪ್ರತಿನಿಧಿಗಳು ಕಳೆದ ವರ್ಷವೂ ಕೆಲ ಶಾಲೆಗಳು ರಾಜ್ಯ ಸರ್ಕಾರದ ಸೂಚನೆ ಪಾಲಿಸಿರಲಿಲ್ಲ ಎಂದು ದೂರಿದ್ದವು. ಸರ್ಕಾರದ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದವು. ಖಾಸಗಿ ಶಾಲೆಗಳಿಗೆ ಇಂಥ ಸೂಚನೆ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ವಾದಿಸಿದ್ದವು.

ಎಲ್ಲಾ ಮಧ್ಯಸ್ಥಗಾರರನ್ನು ಸಮಾಲೋಚಿಸಿದ ನಂತರ ಸರ್ಕಾರ 2021 ರ ಜನವರಿ 29 ರಂದು ಆದೇಶ ಹೊರಡಿಸಿದ್ದು, ಇದರಲ್ಲಿ 2019-20ನೇ ಶೈಕ್ಷಣಿಕ ವರ್ಷಕ್ಕೆ ನಿಗದಿಪಡಿಸಿದ ಬೋಧನಾ ಶುಲ್ಕದ 70 ಪ್ರತಿಶತವನ್ನು 2020-21ರ ಶೈಕ್ಷಣಿಕ ವರ್ಷಕ್ಕೆ ಸಂಗ್ರಹಿಸಬೇಕು. ಇದಲ್ಲದೆ, ಪೋಷಕರು ಮತ್ತು ವ್ಯವಸ್ಥಾಪಕರ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕರ್ನಾಟಕ ಶಿಕ್ಷಣ ಕಾಯ್ದೆಯ ಸೆಕ್ಷನ್ 133 (2) ರೊಂದಿಗೆ ಸೆಕ್ಷನ್ 48 ರ ಅಡಿಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ, ಇದರಿಂದಾಗಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುವುದಿಲ್ಲ ಎಂದು ಹೇಳಿತ್ತು. ಆದರೆ, ಈ ಆದೇಶವನ್ನು ಭಾರತೀಯ ಶಾಲೆಗಳ ಸಂಘ ಮತ್ತು ಹಲವಾರು ವ್ಯವಸ್ಥಾಪಕರು  ಹೈಕೋರ್ಟ್ ನಲ್ಲಿ ಪ್ರಶ್ನಿಸಿದರು. 

ಏತನ್ಮಧ್ಯೆ, ಅರ್ಜಿದಾರರಿಗೆ ಈ ಮನವಿಗೆ ಆಕ್ಷೇಪಣೆ ಸಲ್ಲಿಸಲು ಅನುವು ಮಾಡಿಕೊಡಲು ನ್ಯಾಯಮೂರ್ತಿ ಸಚಿನ್ ಶಂಕರ್ ಮಗಡಮ್ ಅವರು ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದರು.

ಪೋಲಿಸ್ ನಿಲ್ದಾಣಗಳ ಸಮೀಪವಿರುವ ಫುಟ್‌ಪಾತ್‌ಗಳಲ್ಲಿನ ಕಾರ್ ಪಾರ್ಕಿಂಗ್ ತೆರವುಗೊಳಿಸಿ: ಹೈಕೋರ್ಟ್
ಇದೇ ವೇಳೆ ಮತ್ತೊಂದು ಪ್ರಕರಣದ ಪಿಐಎಲ್ ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಪೋಲಿಸ್ ನಿಲ್ದಾಣಗಳ ಸಮೀಪವಿರುವ ಫುಟ್‌ಪಾತ್‌ಗಳಲ್ಲಿನ ಕಾರ್ ಪಾರ್ಕಿಂಗ್ ತೆರವುಗೊಳಿಸುವಂತೆ ಸೂಚಿಸಿದೆ. ಪೊಲೀಸ್ ಠಾಣೆಗಳ ಸುತ್ತಲಿನ ಫುಟ್‌ಪಾತ್‌ಗಳು ಮತ್ತು ರಸ್ತೆಗಳು ವಾಹನ ನಿಲುಗಡೆಗೆ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT