ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ಇಳಿಮುಖ: ತೆಲಂಗಾಣ, ಆಂಧ್ರಪ್ರದೇಶಕ್ಕೆ ಕೆಎಸ್ಆರ್'ಟಿಸಿಯಿಂದ ಬಸ್ ಸೇವೆ ಆರಂಭ

ಕರ್ನಾಟಕದ ಕೆಲವೊಂದು ಜಿಲ್ಲೆಗಳು ಈಗಾಗಲೇ ಅನ್​ಲಾಕ್​ ಆಗಿದ್ದು, ಜನಜೀವನ ಈ ಹಿಂದಿನಂತೆ ಪುನಾರಂಭಗೊಳ್ಳುತ್ತಿದೆ. ಇದರ ಮಧ್ಯೆಯೇ ಕರ್ನಾಟಕ ಸರ್ಕಾರ ಅಂತಾರಾಜ್ಯ ಸಾರಿಗೆ ಮತ್ತೆ ಪುನಾರಂಭ ಮಾಡಲು ಮುಂದಾಗಿದ್ದು, ಅದರ ಪ್ರಥಮ ಹೆಜ್ಜೆಯಾಗಿ ಪಕ್ಕದ ರಾಜ್ಯಗಳಾದ ತೆಲಂಗಾಣ, ಆಂಧ್ರಪ್ರದೇಶಕ್ಕೆ ಬಸ್​ ಸೇವೆ ಮರು ಆರಂಭ ಮಾಡಿದೆ.

ಬೆಂಗಳೂರು: ಕರ್ನಾಟಕದ ಕೆಲವೊಂದು ಜಿಲ್ಲೆಗಳು ಈಗಾಗಲೇ ಅನ್​ಲಾಕ್​ ಆಗಿದ್ದು, ಜನಜೀವನ ಈ ಹಿಂದಿನಂತೆ ಪುನಾರಂಭಗೊಳ್ಳುತ್ತಿದೆ. ಇದರ ಮಧ್ಯೆಯೇ ಕರ್ನಾಟಕ ಸರ್ಕಾರ ಅಂತಾರಾಜ್ಯ ಸಾರಿಗೆ ಮತ್ತೆ ಪುನಾರಂಭ ಮಾಡಲು ಮುಂದಾಗಿದ್ದು, ಅದರ ಪ್ರಥಮ ಹೆಜ್ಜೆಯಾಗಿ ಪಕ್ಕದ ರಾಜ್ಯಗಳಾದ ತೆಲಂಗಾಣ, ಆಂಧ್ರಪ್ರದೇಶಕ್ಕೆ ಬಸ್​ ಸೇವೆ ಮರು ಆರಂಭ ಮಾಡಿದೆ. 

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆ ಈ ಮಹತ್ವದ ನಿರ್ಧಾರ ಹೊರಡಿಸಿದ್ದು, ಆಂಧ್ರಪ್ರದೇಶ ಹಾಗೂ ತೆಲಂಗಾಣಕ್ಕೆ ಕೋವಿಡ್ ಮಾರ್ಗಸೂಚಿ ನಿಯಮದೊಂದಿಗೆ ಬಸ್​ ಸೇವೆ ನಾಳೆಯಿಂದ ಆರಂಭಗೊಳ್ಳಿಸುತ್ತಿದೆ. ಬಸ್​ನಲ್ಲಿ ಶೇ 50ರಷ್ಟು ಆಸನ ಭರ್ತಿಗೆ ಸೂಚನೆ ನೀಡಲಾಗಿದೆ. ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ಮಾತ್ರ ಸೇವೆ ಲಭ್ಯವಿರಲಿದೆ. ಬಸ್​ನಲ್ಲಿ ಪ್ರಯಾಣ ಮಾಡುವವರು ಕೋವಿಡ್​ ನಿಯಮ ಪಾಲನೆ ಮಾಡುವುದು ಕಡ್ಡಾಯವಾಗಿದೆ.

ತೆಲಂಗಾಣದಲ್ಲಿ ಈಗಾಗಲೇ ಕೋವಿಡ್ ಲಾಕ್​ಡೌನ್ ಸಂಪೂರ್ಣವಾಗಿ ತೆರವು ಮಾಡಲಾಗಿದ್ದು, ಎಲ್ಲಾ ಸೇವೆಗಳು ಆರಂಭಗೊಂಡಿವೆ. ಜತೆಗೆ ಅಂತಾರಾಜ್ಯ ಬಸ್​ ಸೇವೆಗೂ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಇಂದಿನಿಂದ ಸಂಚಾರ ಸೇವೆ ಪುನಾರಂಭವಾಗಿದೆ. 

ತೆಲಂಗಾಣದಿಂದ ಆಂಧ್ರಕ್ಕೆ ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಬಸ್ ಸೇವೆ ಇರಲಿದೆ. ಇತ್ತ ಕರ್ನಾಟಕಕ್ಕೂ ಬಸ್​​ ಸೇವೆ ಆರಂಭಗೊಂಡಿದ್ದು, ಕರ್ನಾಟಕ ಕೋವಿಡ್ ನಿಯಮದ ಅನುಸಾರವಾಗಿ ಬೆಂಗಳೂರು ನಗರ ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಇಂದಿನಿಂದಲೇ ಟಿಎಸ್​ಆರ್​ಟಿಸಿ ಬಸ್ ಸಂಚಾರ ಪುನಾರಂಭವಾಗಿದೆ. ಬೆಳಗ್ಗೆ 5 ಗಂಟೆಯಿಂದ ಸಂಜೆ 7ರ ವರೆಗೆ ಬಸ್​ಗಳು ಸಂಚರಿಸಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT