ಆರೋಗ್ಯ ಸಚಿವ ಡಾ. ಕೆ. ಸುಧಾಕರ್ 
ರಾಜ್ಯ

ಶಾಲೆಗಳನ್ನು ಆರಂಭಿಸಲು ಸರ್ಕಾರ ತರಾತುರಿಯಲ್ಲಿಲ್ಲ: ಡಾ. ಕೆ.ಸುಧಾಕರ್

ರಾಜ್ಯದಲ್ಲಿ ಶಾಲೆಗಳು ಮತ್ತು ಕಾಲೇಜ್ ಗಳನ್ನು ಪ್ರಾರಂಭಿಸಲು ಯಾವುದೇ ಆತುರ ಇಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳು ಮತ್ತು ಕಾಲೇಜ್ ಗಳನ್ನು ಪ್ರಾರಂಭಿಸಲು ಯಾವುದೇ ಆತುರ ಇಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಶಾಲಾ- ಕಾಲೇಜುಗಳನ್ನು ಹಂತ- ಹಂತವಾಗಿ ತೆರೆಯಲು ಡಾ. ದೇವಿ ಪ್ರಸಾದ್ ನೇತೃತ್ವದ ಸಮಿತಿ ಸಲಹೆಗೆ ಪ್ರತಿಕ್ರಿಯಿಸಿದ ಡಾ. ಕೆ. ಸುಧಾಕರ್,  ಶಾಲೆಗಳನ್ನು ಪ್ರಾರಂಭಿಸುವುದು ಬಹಳ ಸೂಕ್ಷ್ಮ ವಿಷಯ ಮತ್ತು ಸಾಕಷ್ಟು ಚಿಂತನೆಯ ನಂತರವೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.

ನಾವು ಸಮಿತಿಯ ಶಿಫಾರಸುಗಳನ್ನು ಚರ್ಚಿಸುತ್ತಿದ್ದೇವೆ. ಪ್ರತಿ ಕೋನವನ್ನು ಚರ್ಚಿಸಿದ ನಂತರವೇ ನಿರ್ಧಾರಕ್ಕೆ ಬರುತ್ತೇವೆ. ಸರ್ಕಾರ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ಮತ್ತು ಗಮನವನ್ನು ಹೊಂದಿದೆ ಎಂದು ಅವರು ವಿವರಿಸಿದರು.

ಇದಲ್ಲದೆ, ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿಯು ಕೋವಿಡ್-19 ಸಾಂಕ್ರಾಮಿಕ ಮತ್ತು ಮುನ್ನೆಚ್ಚರಿಕೆ ಕ್ರಮಗಳು ಹಾಗೂ 3ನೇ ತರಂಗವನ್ನು ಹೇಗೆ ನಿಯಂತ್ರಿಸುವುದು ಎಂಬ ಬಗ್ಗೆ ವರದಿಯನ್ನು ಸಲ್ಲಿಸಲಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT