ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್ ನಿಂದ ಕುಟುಂಬ ಸದಸ್ಯರನ್ನು ಕಳೆದುಕೊಂಡವರ ನೆರವಿಗೆ ನಿಲ್ಲಿ: ಬಿಜೆಪಿ ಶಾಸಕರು, ಸಚಿವರ ತಂಡ ರಚನೆ

ಕೊರೋನಾ ಸಾಂಕ್ರಾಮಿಕ ರೋಗದಿಂದ ಕುಟುಂಬ ಸದಸ್ಯರನ್ನು ಕಳೆದುಕೊಂಡವರ ನೆರವು ನೀಡಲು ಹಾಗೂ ಸಾಂತ್ವನ ಹೇಳಲು ನಿರ್ಧರಿಸುವ ರಾಜ್ಯ ಬಿಜೆಪಿ, ಇದಕ್ಕಾಗಿ ಶಾಸಕರು ಹಾಗೂ ಸಚಿವರನ್ನೊಳಗೊಂಡ ತಂಡವೊಂದನ್ನು ರಚನೆ ಮಾಡಿದೆ. 

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗದಿಂದ ಕುಟುಂಬ ಸದಸ್ಯರನ್ನು ಕಳೆದುಕೊಂಡವರ ನೆರವು ನೀಡಲು ಹಾಗೂ ಸಾಂತ್ವನ ಹೇಳಲು ನಿರ್ಧರಿಸುವ ರಾಜ್ಯ ಬಿಜೆಪಿ, ಇದಕ್ಕಾಗಿ ಶಾಸಕರು ಹಾಗೂ ಸಚಿವರನ್ನೊಳಗೊಂಡ ತಂಡವೊಂದನ್ನು ರಚನೆ ಮಾಡಿದೆ. 

ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರನ್ನೊಳಗೊಂಡ ತಂಡವನ್ನು ರಾಜ್ಯ ಬಿಜೆಪಿ ರಚನೆ ಮಾಡಿದೆ. 

ಇದರ ಆರಂಭವೆಂಬಂತೆ ಸಚಿವ ಆರ್.ಅಶೋಕ್ ಅವರು ಕೋವಿಡ್ ನಿಂದ ಮೃತಪಟ್ಟ ಜೆಡಿಎಸ್ ಕಾರ್ಯಕರ್ತರೊಬ್ಬರ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. 

ಪದ್ಮನಾಭನಗರದಲ್ಲಿರುವ ಜೆಡಿಎಸ್ ಕಾರ್ಯಕರ್ತನ ನಿವಾಸಕ್ಕೆ ಆರ್.ಅಶೋಕ್ ಅವರು ಬೇಟಿ ನೀಡಿ, ಸಾಂತ್ವನ ಹೇಳಿದರು. 

ಬಳಿಕ ಮಾತನಾಡಿದ ಅವರು, ಕೊರೋನಾದಿಂದ ಮೃತಪಟ್ಟ ಪ್ರತೀಯೊಬ್ಬರ ಮನೆಗಳಿಗೂ ಪಕ್ಷಭೇದ ಮರೆತು ಭೇಟಿ ನೀಡುತ್ತೇವೆ. ರಾಜಕೀಯ ಪಕ್ಷವೆಂಬುದನ್ನು ಮರೆತು ಮಾನವೀಯತೆಯ ಆಧಾರದ ಮೇಲೆ ಪ್ರತೀಯೊಬ್ಬರ ಮನೆಗೂ ಭೇಟಿ ನೀಡುತ್ತೇವೆ. ಈ ಮೂಲಕ ಮೃತರ ಕುಟುಂಬಸ್ಥರಲ್ಲಿ ಆತ್ಮವಿಶ್ವಾಸ ತುಂಬುವ ಪ್ರಯತ್ನ ಮಾಡಲಾಗುತ್ತದೆ. ಅಲ್ಲದೆ, ನಿಮ್ಮ ಜೊತೆಗೆ ನಾವಿದ್ದೇವೆ ಎಂಬ ಧೈರ್ಯವನ್ನೂ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. 

ನಾವೂ ಅವರ ಕುಟುಂಬ ಸದಸ್ಯರೇ ಎಂಬ ಸಂದೇಶವನ್ನು ಈ ಮೂಲಕ ನೀಡುತ್ತೇವೆ. ಸಂಕಷ್ಟ ಸಂದರ್ಭದಲ್ಲಿ ಅವರೊಂದಿಗೆ ನಿಲ್ಲುತ್ತೇವೆ. ಇದು ಪಕ್ಷದ ನಿರ್ಧಾರ, ಈಗಾಗಲೇ ತಂಡ ಪದ್ಮನಾಭವಗರಕ್ಕೆ ಭೇಟಿ ನೀಡಿದ್ದು, ಮುಂದಿನ 15 ದಿನಗಳಲ್ಲಿ ಬ್ಯಾಟರಾಯನಪುರ ಹಾಗೂ ಕೆ.ಆರ್.ಪುರಂಗೂ ಭೇಟಿ ನೀಡಲಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT