ರೋಹಿಣಿ ಸಿಂಧೂರಿ 
ರಾಜ್ಯ

ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ: ಅನುಮತಿ ಇಲ್ಲದೇ ಈಜುಕೊಳ ನಿರ್ಮಾಣ; ತನಿಖಾ ವರದಿ

ಮೈಸೂರು ಜಿಲ್ಲಾಧಿಕಾರಿ ಆಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಈಜುಕೊಳ ನಿರ್ಮಿಸಿಕೊಂಡಿದ್ದ ವಿಚಾರ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ ತಂದೊಡ್ಡಿದೆ.

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಆಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಈಜುಕೊಳ ನಿರ್ಮಿಸಿಕೊಂಡಿದ್ದ ವಿಚಾರ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ ತಂದೊಡ್ಡಿದೆ.

ಜಿಲ್ಲಾಧಿಕಾರಿ ನಿವಾಸ ‘ಜಲಸನ್ನಿಧಿ’ಯಲ್ಲಿ ಈಜುಕೊಳ ನಿರ್ಮಾಣ ಮಾಡಲು ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮತಿಯನ್ನೇ ಪಡೆದಿಲ್ಲ ಎಂದು ಪ್ರಾದೇಶಿಕ ಆಯುಕ್ತರ ತನಿಖಾ ವರದಿ ಹೇಳಿದೆ. 

ಸ್ವಿಮ್ಮಿಂಗ್​ ಪೂಲ್​ ನಿರ್ಮಾಣ ಸಂಬಂಧ ಪ್ರಾದೇಶಿಕ ಆಯುಕ್ತರು ರಾಜ್ಯ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ್ದಾರೆ. ಈಜುಕೊಳ ನಿರ್ಮಾಣಕ್ಕೆ 32 ಲಕ್ಷ ರೂಪಾಯಿ ವೆಚ್ಚವಾಗಿದೆ. ಇದಕ್ಕೆ ತಾಂತ್ರಿಕ ವರ್ಗದಿಂದ ,ಲೋಕೋಪಯೋಗಿ ಇಲಾಖೆಯಿಂದ ಅನುಮತಿಯನ್ನೇ ಪಡೆದಿಲ್ಲ. ಆಡಳಿತಾತ್ಮಕ ಮಂಜೂರಾತಿಯನ್ನು ಪಡೆದಿಲ್ಲ ಎಂದು ವರದಿ ನೀಡಿರುವುದು ರೋಹಿಣಿ ಸಿಂಧೂರಿಗೆ ತೀವ್ರ ಹಿನ್ನಡೆಯಾಗಿದೆ.

ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್‌ ಅವರು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸಲ್ಲಿಸಿರುವ ವರದಿಯು ಮಾಧ್ಯಮಗಳಿಗೆ ಸೋರಿಕೆಯಾಗಿದ್ದು, ಪ್ರಮುಖವಾಗಿ 6 ನ್ಯೂನತೆಗಳು ತನಿಖೆ ವೇಳೆ ಕಂಡುಬಂದಿರುವುದಾಗಿ ತಿಳಿಸಿದೆ.

ನಗರಾಭಿವೃದ್ಧಿ ಇಲಾಖೆಯು 2020ರ ಏ. 21ರಂದು ಹೊರಡಿಸಿದ ಅಧಿಸೂಚನೆಯಂತೆ ಪಾರಂಪರಿಕ ಕಟ್ಟಡ ಗಳ ಸಂರಕ್ಷಣೆ, ನವೀಕರಣ ಕೆಲಸ ಮಾಡಬೇಕಾದರೆ ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮೋದನೆ ಪಡೆಯಬೇಕು. ಆದರೆ, ಈಜುಕೊಳ ನಿರ್ಮಾಣಕ್ಕೆ ಅನುಮೋದನೆ ಪಡೆದಿಲ್ಲ ಎಂದಿದೆ.

ಮನೆಯಲ್ಲಿ ಈಜುಕೊಳ ನಿರ್ಮಿಸಿಕೊಂಡಿರುವುದರಿಂದ ಯಾವುದೇ ಸಾರ್ವಜನಿಕರಿಗೆ ಉಪಯೋಗಿಸಲು ಸಾಧ್ಯವಿರುವುದಿಲ್ಲ. ಈಜುಕೊಳ ನಿರ್ಮಾಣ ಸಾರ್ವಜನಿಕ ಹಿತಾಸಕ್ತಿ ಹೊಂದಿರುವುದಿಲ್ಲ. ಹೀಗಾಗಿ ಈಜುಕೊಳ ನಿರ್ಮಾಣವೇ ಅಕ್ರಮ, ಕಾನೂನಿಗೆ ವಿರುದ್ದವಾಗಿ ನಿರ್ಮಿಸಲಾಗಿದೆ. ರೋಹಿಣಿ ಸಿಂಧೂರಿ ಅಧಿಕಾರ ದುರ್ಬಳಕೆ ಮಾಡಿಕೊಂಡು ನಿರ್ಮಿಸಿರುವುದಾಗಿ ಪ್ರಾದೇಶಿಕ ಆಯುಕ್ತರು ವರದಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT