ರಾಜ್ಯ

ಕಲಬುರಗಿ: ರಾತ್ರಿ ಸ್ನೇಹಿತರೊಂದಿಗೆ ತೆರಳಿದ್ದ ಯುವಕ ಬೆಳಗ್ಗೆ ಶವವಾಗಿ ಪತ್ತೆ 

Vishwanath S

ಕಲಬುರಗಿ: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಆಟೋ ಚಾಲಕನನ್ನು ಭೀಕರವಾಗಿ ಕೊಲೆಮಾಡಿರುವ ಘಟನೆ ನಗರದ ಜಾಫರಬಾದ್ ಬಡಾವಣೆಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ಸಂತೋಷ್ ಗುತ್ತೇದಾರ್ (35) ಕೊಲೆಯಾದ ಆಟೋ ಚಾಲಕ. ನಿನ್ನೆ ತಡರಾತ್ರಿ ನಾಲ್ವರು ಸ್ನೇಹಿತರೊಂದಿಗೆ ಆಟೋದಲ್ಲಿ ಸಂತೋಷ್ ಹೊರ ಹೋಗಿದ್ದನು. 

ಈ  ವೇಳೆ ಕಂಠಪೂರ್ತಿ ಕುಡಿಸಿ ಕೊಲೆ ಮಾಡಿದ ದುಷ್ಕರ್ಮಿಗಳು ನಸುಕಿನ ಜಾವ ಮನೆ ಬಳಿ ಶವ ತಂದು ಬಿಸಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸದ್ಯ ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

SCROLL FOR NEXT