ಎನ್ ಆರ್ ರಮೇಶ್ 
ರಾಜ್ಯ

ಶಾಸಕ ಜಮೀರ್ ಅಹ್ಮದ್ ಕ್ಷೇತ್ರದಲ್ಲಿ ರಕ್ಷಣೆ ಇಲ್ಲ; ರೇಖಾ ಕದಿರೇಶ್ ಹತ್ಯೆ ರಾಜಕೀಯ ಪ್ರೇರಿತ: ಎನ್.ಆರ್. ರಮೇಶ್ 

ಬಿಜೆಪಿಯ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣ ಸಂಪೂರ್ಣವಾಗಿ ರಾಜಕೀಯ ಪ್ರೇರಿತ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಆರೋಪಿಸಿದ್ದಾರೆ.

ಬೆಂಗಳೂರು: ಬಿಜೆಪಿಯ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣ ಸಂಪೂರ್ಣವಾಗಿ ರಾಜಕೀಯ ಪ್ರೇರಿತ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಆರೋಪಿಸಿದ್ದಾರೆ.

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಕ್ಷೇತ್ರದಲ್ಲಿ ಸುರಕ್ಷತೆಯಿಲ್ಲ, ಅವರ ಬೆಂಬಲಿಗರೇ ಮಾಡಿರುವ ಕೊಲೆಯಿದು ಎಂದು ರಮೇಶ್ ಆರೋಪಿಸಿದ್ದಾರೆ.

ಇನ್ನು ಐದಾರು ತಿಂಗಳಲ್ಲಿ ಪಾಲಿಕೆ ಚುನಾವಣೆ ನಡೆಯಲಿದೆ. ಪಕ್ಷದ ಅಭ್ಯರ್ಥಿ ಎಂದು ರೇಖಾ ಕದಿರೇಶ್ ಅವರನ್ನೇ ಘೋಷಿಸಲಾಗಿತ್ತು. ಮುಂದಿನ ಚುನಾವಣೆಯಲ್ಲಿ ರೇಖಾ ಅವರೇ ಪುನರಾಯ್ಕೆ ಆಗುತ್ತಾರೆ, ಅದು ಆಗಬಾರದು ಎಂದು  ರಾಜಕೀಯ ದುರುದ್ದೇಶದಿಂದ ಅವರ ಜೊತೆ ಗುರುತಿಸಿಕೊಂಡಿದ್ದವರೇ, ರೇಖಾ ಅವರ ಜೊತೆ ಒಡನಾಟ ಇಟ್ಟುಕೊಂಡಿದ್ದವರಿಗೇ ಆಮಿಷವೊಡ್ಡಿ ಕೊಲೆ ಮಾಡಿಸಲಾಗಿದೆ ಎಂದು ಆರೋಪಿಸಿದರು.

ಇಂತಹ ಬೆಳವಣಿಗೆ ರಾಜಕೀಯದಲ್ಲಿ ಒಳ್ಳೆಯದಲ್ಲಿ, ಜಮೀರ್ ಅಹ್ಮದ್ ಅವರು ಕಾನೂನಿನ ಚೌಕಟ್ಟಿಗೆ, ಸಂವಿಧಾನಕ್ಕೆ ಬೆಲೆ ಕೊಡಬೇಕು, ಈ ರೀತಿ ತಮ್ಮ ಹಿಂಬಾಲಕರ ಮೂಲಕ ಸಮಾಜದಲ್ಲಿ ಕುಕೃತ್ಯಗಳನ್ನು ಮಾಡುವುದು ಸರಿಯಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT