ಜಂಟಿ ಸುದ್ದಿಗೋಷ್ಠಿಯಲ್ಲಿ ಸಂಸದ ತೇಜಶ್ವಿ ಸೂರ್ಯ, ಡಿಸಿಎಂ ಅಶ್ವಥ್ ನಾರಾಯಣ್ 
ರಾಜ್ಯ

'ಕಲಾನಿಧಿ' ಆನ್ಲೈನ್ ಸೀರೀಸ್ ಮೂಲಕ ಕೋವಿಡ್‌ನಿಂದ ಸಂಕಷ್ಟದಲ್ಲಿರುವ ಕಲಾವಿದರಿಗೆ ದೇಣಿಗೆ ಸಂಗ್ರಹ

ಕೋವಿಡ್‌ನಿಂದ ಸಂಕಷ್ಟದಲ್ಲಿರುವ ಕಲಾವಿದರಿಗೆ "ಕಲಾನಿಧಿ" ಮೂಲಕ ಸರ್ಕಾರ ಸಹಕರಿಸಲು ಮುಂದಾಗಿದ್ದು, ಇದಕ್ಕಾಗಿ ಆನ್ಲೈನ್ ಸೀರಿಸ್ ಮೂಲಕ ದೇಣಿಗೆ ಸಂಗ್ರಹ ಮಾಡಲಾಗುವುದು ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ಬೆಂಗಳೂರು: ಕೋವಿಡ್‌ನಿಂದ ಸಂಕಷ್ಟದಲ್ಲಿರುವ ಕಲಾವಿದರಿಗೆ "ಕಲಾನಿಧಿ" ಮೂಲಕ ಸರ್ಕಾರ ಸಹಕರಿಸಲು ಮುಂದಾಗಿದ್ದು, ಇದಕ್ಕಾಗಿ ಆನ್ಲೈನ್ ಸೀರಿಸ್ ಮೂಲಕ ದೇಣಿಗೆ ಸಂಗ್ರಹ ಮಾಡಲಾಗುವುದು ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿಂದು ನಡೆದ ಜಂಟಿಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೇಜಸ್ವಿ ಸೂರ್ಯ, ಕಳೆದ ಒಂದೂವರೆ ವರ್ಷದಿಂದ ಕಾಲವಿದರು ಕೋವಿಡ್‌ನಿಂದ‌ ಸಂಕಷ್ಟದಲ್ಲಿದ್ದಾರೆ. ಕಷ್ಟದಲ್ಲಿರುವವರ ಸಹಾಯಕ್ಕೆ ನಾವು ನಿರ್ಧರಿಸಿದ್ದೇವೆ. ಹೀಗಾಗಿ ನಿಧಿ ಸಂಗ್ರಹಕ್ಕೆ ಮುಂದಾಗಿದ್ದೇವೆ. ಕಲಾವಿದರಿಗೆ ಸಹಾಯ ಹಸ್ತ ನೀಡುವ  ಉದ್ದೇಶದಿಂದ "ಕಲಾನಿಧಿ" ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಈ ನಿಟ್ಟಿನಲ್ಲೇ ಕಲಾನಿಧಿ ಎಂಬ ಆನ್ಲೈನ್ ಸಿರೀಸ್ ತರುತ್ತಿದ್ದೇವೆ. ಇದಕ್ಕೆ ಜನರು ಸಹಾಯವನ್ನು ಮಾಡಬಹುದು. ಇದರಿಂದ ಬರುವ ಹಣವನ್ನು ಕಲಾವಿದರಿಗೆ ಹಂಚಲಾಗುತ್ತದೆ ಎಂದರು.

ಶುಕ್ರವಾರ, ಶನಿವಾರ, ಭಾನುವಾರ ಸೇರಿದಂತೆ ಮೂರು ದಿನ ಸಂಗೀತ ಕಾರ್ಯಕ್ರಮ ಸೋಶಿಯಲ್ ಮಿಡಿಯಾ ಮೂಲಕ ನಡೆಯಲಿದೆ. ರಾಜ್ಯ, ದೇಶದ ಕಲಾವಿದರು ಇದರಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸೋನು ನಿಗಂ ಕೂಡ ಭಾಗಿಯಾಗುತ್ತಾರೆ. ಬೆಂಗಳೂರಿಗೆ ಬಂದು ಕಲಾನಿಧಿಗೆ ಹಾಡಿದ್ದಾರೆ.  ಹರಿಹರನ್, ಶಂಕರ್ ಮಹಾದೇವನ್ ಎಲ್ಲರೂ ಹಾಡಿದ್ದಾರೆ. ಮೊಬೈಲ್ ಮೂಲಕವೇ ಸಂಗೀತವನ್ನು ಆಸ್ವಾದಿಸಬಹುದು. ಅಗತ್ಯವಾದ ಸಹಾಯವನ್ನು ಮಾಡಬಹುದು ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.

ಡಿಸಿಎಂ ಅಶ್ವಥ್ ನಾರಾಯಣ್ ಮಾತನಾಡಿ, ಕಲಾನಿಧಿ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಇದು ನಾಳೆ, ನಾಡಿದ್ದು, ಆಚೆನಾಡಿದ್ದು ಪ್ರಸಾರವಾಗಲಿದೆ. ಕಲಾವಿದರ ನೆರವಿಗಾಗಿ ಇದನ್ನು ರೂಪಿಸಲಾಗಿದೆ. ಇದಕ್ಕೆ ನಾಡಿನ ಜನರ ಸಹಕಾರ ಬೇಕಿದೆ. ಕಲಾವಿದರ ನೆರವಿಗೆ ಸಹಾಯ ಹಸ್ತ ಚಾಚಬೇಕಿದೆ ಈ ಮೂಲಕ  ಕಲಾವಿದರಿಗೆ ಗೌರವ ಸಲ್ಲಿಸೋಣ. ಸಂಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗೋಣ. ಅವರ ಅಕೌಂಟಿಗೆ ನೇರವಾಗಿ ಹಣ ಸಂದಾಯವಾಗಲಿದೆ. ಎಲ್ಲಿಯೂ ದೇಣಿಗೆ ಹಣ ದುರುಪಯೋಗವಾಗುವುದಿಲ್ಲ ಎಂದು ಭರವಸೆ ನೀಡಿದರು.

ಗಾಯಕ ವಿಜಯಪ್ರಕಾಶ್ ಮಾತನಾಡಿ, ಈ ಕಲಾನಿಧಿಯ ನಿಧಿ ನಿಜವಾಗಿ ಕಲಾವಿದರಿಗೆ ಸಲ್ಲಲಿದೆ. ಸಮಾಜದಲ್ಲಿ ಹಲವರು ಕಷ್ಟ ಅನುಭವಿಸುತ್ತಿದ್ದು,ಇವರ ಜೊತೆ ಕಲಾವಿದರೂ ಸಹ ಕಷ್ಟದಲ್ಲಿದ್ದಾರೆ. ಇದಕ್ಕೆ ಪರಿಹಾರವಾಗಿ ಸಿಕ್ಕಿದ್ದೇ ಕಲಾನಿಧಿ ಕಾರ್ಯಕ್ರಮ. ಕಲಾವಿದರು ಪ್ರತಿನಿತ್ಯ ಕನಸಿನಲ್ಲೇ ಇರುತ್ತೇವೆ. ಎಲ್ಲಾ  ಕಲಾವಿದರು ಇದರಲ್ಲಿ ಹಾಡಿದ್ದಾರೆ. ಒಂದು ರೂ. ಪಡೆಯದೆ ಕಲಾವಿದರಿಗಾಗಿ ಹಾಡಿಹೋಗಿದ್ದಾರೆ.

ಇದರಿಂದ ಸಂಗ್ರಹವಾಗುವ ನಿಧಿ ಎಲ್ಲರಿಗೆ ಹಂಚುತ್ತೇವೆ. ಜನರು 5 ರೂ. ಕೊಟ್ಟರು ಅದು ಮಹಾ ದೇಣಿಗೆಯಾಗಲಿದೆ ಎಂದು ಜನರಿಗೆ ಗಾಯಕ ವಿಜಯ ಪ್ರಕಾಶ್ ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT