ಮಾಜಿ ಸಚಿವ ಹೆಚ್. ಡಿ. ರೇವಣ್ಣ 
ರಾಜ್ಯ

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಿಂದ ಅರಸೀಕೆರೆ ಜೆಡಿಎಸ್ ಕಾನ್ಸಿಲರ್ ಗೆ 10 ಲಕ್ಷ ರೂ. ಆಮಿಷ: ಹೆಚ್.ಡಿ. ರೇವಣ್ಣ

ಅರಸೀಕೆರೆ ನಗರಸಭೆಯ ಜೆಡಿಎಸ್ ಕೌನ್ಸಿಲರ್ ಬಿಜೆಪಿ ಸೇರಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ 10 ಲಕ್ಷ ರೂ. ಆಮಿಷವೊಡ್ಡಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಗುರುವಾರ ಆರೋಪಿಸಿದ್ದಾರೆ.

ಹಾಸನ: ಅರಸೀಕೆರೆ ನಗರಸಭೆಯ ಜೆಡಿಎಸ್ ಕೌನ್ಸಿಲರ್ ಬಿಜೆಪಿ ಸೇರಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ 10 ಲಕ್ಷ ರೂ. ಆಮಿಷವೊಡ್ಡಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಗುರುವಾರ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂತೋಷ್, ತಮ್ಮ ಬೆಂಬಲಿಗರಾದ ಸಿಕಂಧರ್ ಮತ್ತು ಹರ್ಷವರ್ಧನ್ ಅವರ ಮೂಲಕ ವಾರ್ಡ್ ನಂ 3 ರ ಜೆಡಿಎಸ್ ಕೌನ್ಸಿಲರ್ ಕಲೈರಾಸಿ ಅವರ ಮನೆಗೆ 10 ಲಕ್ಷ ರೂ. ಕಳುಹಿಸಿದ್ದಾರೆ ಎಂದು ಹೇಳಿದರು. ಸಂತೋಷ್ ,  ಕಲೈರಸಿಗೆ ನೀಡಿದ್ದ 10 ಲಕ್ಷ ರೂ.ಗಳನ್ನು ಪ್ರದರ್ಶಿಸಿದ ರೇವಣ್ಣ ರಾಜ್ಯ ಸರ್ಕಾರ, ಇದನ್ನು ಸಿಬಿಐಗೆ ವಹಿಸಬೇಕು ಮತ್ತು ಯಾವುದೇ ಪಕ್ಷಪಾತವಿಲ್ಲದೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಅರಸೀಕರೆ ನಗರಸಭೆಯ ಜೆಡಿಎಸ್ ಕೌನ್ಸಿಲರ್ ಗಳಾದ ಹರ್ಷವರ್ಧನ್, ಚಂದ್ರಶೇಖರಯ್ಯ, ಕವಿತಾದೇವಿ, ದರ್ಶನ್, ವಿಧಾದರ್ ಮತ್ತು ಆಯಿಷ ಸೈಯದ್ ಸಿಕಾಂದರ್ ಅವರಿಗೆ  ದೊಡ್ಡ ಮೊತ್ತದ ಹಣ ಹಾಗೂ ಮುಂದೆ 1 ಕೋಟಿ ಮೊತ್ತದ ಸಿವಿಲ್ ಗುತ್ತಿಗೆ ಆಮಿಷವನ್ನು ಈಗಾಗಲೇ ಸಂತೋಷ್ ವೊಡ್ಡಿದ್ದಾರೆ ಎಂದು ಆರೋಪಿಸಿದರು.

 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದು ಅರಸೀಕೆರೆಯಲ್ಲಿ ಸ್ಪರ್ಧಿಸಲು ಸಂತೋಷ್ ಯೋಜಿಸುತ್ತಿದ್ದು, ನಗರಸಭೆ ಮೇಲೆ ಹಿಡಿತ ಸಾಧಿಸಲು ಯತ್ನಿಸುತ್ತಿದ್ದಾರೆ ಎಂದು  ಹೆಚ್ ಡಿ ರೇವಣ್ಣ ಹೇಳಿದರು.

ಬಿಜೆಪಿಗೆ ಸೇರ್ಪಡೆಯಾದರೆ 1 ಕೋಟಿ ಮೊತ್ತದ ಸಿವಿಲ್ ಗುತ್ತಿಗೆ ನೀಡುವುದಾಗಿ ತಮ್ಮ ಪತಿ ಸುಧಾಕರ್ ಅವರಿಗೆ ಸಂತೋಷ್ ಭರವಸೆ ನೀಡಿರುವುದಾಗಿ ಕಲೈರಾಸಿ ಹೇಳಿದರು.  ಸಂತೋಷ್ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ತಡೆಯುತ್ತಿದ್ದಾರೆ. ಇದರ ಬಗ್ಗೆ ತನಿಖೆ ನಡೆಯಬೇಕು ಮತ್ತು ಇದನ್ನು ಮುಖ್ಯಮಂತ್ರಿ ಗಂಭೀರವಾಗಿ ಪರಿಗಣಿಸಬೇಕು ಎಂದು ಅರಸೀಕೆರೆ ಶಾಸಕ ಕೆಎಂ ಶಿವಲಿಂಗೇಗೌಡ ಒತ್ತಾಯಿಸಿದರು.

ಈ ಸಂಬಂಧ ಸಂತೋಷ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಕಲೈರಾಸಿ ದೂರು ದಾಖಲಿಸಿದ್ದಾರೆ. ರಾಜ್ಯಪಾಲರು, ಮುಖ್ಯಮಂತ್ರಿ, ಗೃಹ ಸಚಿವರು, ಡಿಜಿ ಐಜಿ, ಎಸ್ ಪಿ ಮತ್ತು ಹಾಸನ ಜಿಲ್ಲಾಧಿಕಾರಿಗಳಿಗೆ ದೂರಿನ ಪ್ರತಿಗಳನ್ನು ಕಳುಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT