ಸಂಗ್ರಹ ಚಿತ್ರ 
ರಾಜ್ಯ

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣಾನೆ ಸಾವು

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸುರಕ್ಷತಾ ವಲಯದಲ್ಲಿರುವ ರಾಗಿಹಳ್ಳಿ ಬಳಿ ಎರಡು ದಿನಗಳ ಹಿಂದಷ್ಟೇ ಹೆಣ್ಣಾನೆಯೊಂದು ಸಾವನ್ನಪ್ಪಿದ್ದು, ತಡವಾಗಿ ಬೆಳಕಿಗೆ ಬಂದಿದೆ. 

ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸುರಕ್ಷತಾ ವಲಯದಲ್ಲಿರುವ ರಾಗಿಹಳ್ಳಿ ಬಳಿ ಎರಡು ದಿನಗಳ ಹಿಂದಷ್ಟೇ ಹೆಣ್ಣಾನೆಯೊಂದು ಸಾವನ್ನಪ್ಪಿದ್ದು, ತಡವಾಗಿ ಬೆಳಕಿಗೆ ಬಂದಿದೆ. 

ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅರಣ್ಯಾಧಿಕಾರಿಗಳು, 35-40 ವರ್ಷದ ಹೆಣ್ಣಾನೆ ಇದಾಗಿದ್ದು, ಹೃದಯ ಸ್ತಂಭನದಿಂದ ಸಾವನ್ನಪ್ಪಿದೆ ಎಂದು ಹೇಳಿದ್ದಾರೆ. 

ಆನೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೊಳಪಡಿಲಾಗಿದ್ದು, ಹೃದಯ ಸ್ತಂಭನದಿಂದ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ ಎಂದು ತಿಳಿಸಿದ್ದಾರೆ. 

ಗುಡ್ಡದಿಂದ ಜಾರಿದ ಪರಿಣಾಮ ಹೃದಯ ಸ್ತಂಭನ ಎದುರಾಗಿದೆ. ಆನೆಯ ದೇಹದಲ್ಲಿ ಯಾವುದೇ ರೀತಿಯ ಗಾಯಗಳು ಬಂದಿಲ್ಲ. ಕಾಡಿನಲ್ಲಿದ್ದ ಕೆಲ ನಾಯಿಗಳು ಆನೆಯ ದೇಹದ ಕೆಲ ಭಾಗವನ್ನು ತಿಂದಿವೆ ಎಂದು ಮಾಹಿತಿ ನೀಡಿದ್ದಾರೆ. 

ಇದೇ ವೇಳೆ ಮಾನವ-ಪ್ರಾಣಿ ಸಂಘರ್ಷ ಕುರಿತ ವದಂತಿಗಳ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಘಟನೆ ಅರಣ್ಯ ಪ್ರದೇಶದೊಳಗೆ ನಡೆದಿದೆ. ಕಾಲು ಜಾರಿದ್ದರಿಂದ ಆನೆ ಸಾವನ್ನಪ್ಪಿದ್ದು, ಸ್ಥಳದಲ್ಲಿ 2-3 ಮರಗಳು ಧರೆಗುರುಳಿವೆ ಎಂದಿದ್ದಾರೆ. 

ಆನೆ ಆಹಾರ, ನೀರಿನ ಕೊರತೆಯಿಂದ ಸಾವನ್ನಪ್ಪಿಲ್ಲ. ಆನೆಯ ಹೊಟ್ಟೆಯಲ್ಲಿ ಅರ್ಧಂಬರ್ಧ ಜೀರ್ಣವಾಗಿರುವ ಆಹಾರ ಇರುವುದು ಕಂಡು ಬಂದಿದೆ. ಉದ್ಯಾನವನದಲ್ಲಿ ಆರೋಗ್ಯಕರ ಪ್ರಾಣಿಗಳಿದ್ದು, ಆನೆಗಳು ಗ್ರಾಮಗಳಿಗೆ ನುಗ್ಗದಂತೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ, ಹೀಗಾಗಿ ಇಲ್ಲಿ ಮಾನವ-ಪ್ರಾಣಿ ಸಂಘರ್ಷ ಯಾವುದೇ ಘಟನೆಗಳು ಈ ವರೆಗೂ ನಡೆದಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT