ಸಂಗ್ರಹ ಚಿತ್ರ 
ರಾಜ್ಯ

ನ್ಯಾಯಾಧಿಕರಣಗಳಿಗೂ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ: ಮಾಹಿತಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗದ ಹಿನ್ನೆಲೆ ರಾಜ್ಯದ ಅರೆ ನ್ಯಾಯಿಕ ಪ್ರಾಧಿಕಾರಗಳು ಹಾಗೂ ಮೇಲ್ಮನವಿ ನ್ಯಾಯಾಧಿಕರಣಗಳಿಗೂ ಕಲಾಪ ನಡೆಸಲು ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ಒದಗಿಸುವ ಕುರಿತಂತೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. 

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗದ ಹಿನ್ನೆಲೆ ರಾಜ್ಯದ ಅರೆ ನ್ಯಾಯಿಕ ಪ್ರಾಧಿಕಾರಗಳು ಹಾಗೂ ಮೇಲ್ಮನವಿ ನ್ಯಾಯಾಧಿಕರಣಗಳಿಗೂ ಕಲಾಪ ನಡೆಸಲು ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ಒದಗಿಸುವ ಕುರಿತಂತೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. 

ಸರ್ಕಾರಿ ಭೂಮಿ ಒತ್ತುವರಿ ಆರೋಪ ಪ್ರಕರಣವೊಂದರ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಕೋವಿಡ್ ಕಾರಣಕ್ಕಾಗಿ ತಹಶೀಲ್ದಾರ್​ (ಅರೆ ನ್ಯಾಯಿಕ ಅಧಿಕಾರ ಹೊಂದಿರುವ) ಒತ್ತುವರಿ ಕುರಿತ ಅರ್ಜಿ ವಿಚಾರಣೆ ನಡೆಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು.

ಅಲ್ಲದೇ, ಕೊರೊನಾ ಸೋಂಕು ಉಲ್ಭಣಿಸಿರುವ ಹಿನ್ನೆಲೆ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರು ನಡೆಸುವ ಅರೆ ನ್ಯಾಯಿಕ ಪ್ರಾಧಿಕಾರಗಳ ವಿಚಾರಣಾ ಕಲಾಪಗಳು, ಮೇಲ್ಮನವಿ ನ್ಯಾಯಾಧೀಕರಣಗಳ ವಿಚಾರಣೆ, ಲೋಕಾಯುಕ್ತ ನ್ಯಾಯಾಲಯದ ಕಲಾಪಗಳು ನಡೆಯುತ್ತಿಲ್ಲ ಎಂದು ವಿವರಿಸಿದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ, ಕೊರೋನಾ ಒಂದು ಮತ್ತು ಎರಡನೇ ಅಲೆ ಎದುರಿಸುವ ಅವಧಿಯಲ್ಲೇ ಅರೆ ನ್ಯಾಯಿಕ ಪ್ರಾಧಿಕಾರಗಳಿಗೆ ಮತ್ತು ಮೇಲ್ಮನವಿ ನ್ಯಾಯಾಧಿಕರಣಗಳ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ಕಲ್ಪಿಸಬೇಕಿತ್ತು. ಇದೀಗ 3ನೇ ಅಲೆ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಅರೆ ನ್ಯಾಯಿಕ ಪ್ರಾಧಿಕಾರಿಗಳು ಮತ್ತು ಮೇಲ್ಮನವಿ ನ್ಯಾಯಾಧಿಕರಣಗಳಿಗೆ ವಿಸಿ ಸೌಲಭ್ಯ ಅಳವಡಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ.

ಅಲ್ಲದೇ, ವಿಪತ್ತು ಎದುರಾದ ಸಂದರ್ಭಗಳಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಅನುಸಾರ ರಾಜ್ಯದ ಎಲ್ಲ ಸಾರ್ವಜನಿಕ ಪ್ರಾಧಿಕಾರಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಅದರಂತೆ, ರಾಜ್ಯದ ಎಲ್ಲಾ ಅರೆ ನ್ಯಾಯಿಕ ಪ್ರಾಧಿಕಾರಿಗಳು ಮತ್ತು ಮೇಲ್ಮನವಿ ನ್ಯಾಯಾಧಿಕರಣಗಳು ತಮ್ಮ ಮುಂದಿರುವ ಪ್ರಕರಣಗಳನ್ನು ತಡೆಯಿಲ್ಲದೇ ವಿಚಾರಣೆ ನಡೆಸಲು ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ಕಲ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ತುರ್ತು ಅಗತ್ಯವಿರುವ ಕಡೆ ಆದ್ಯತೆ ಮೇರೆಗೆ ಸೌಲಭ್ಯ ಕಲ್ಪಿಸಬೇಕು. ಪ್ರಸ್ತುತ ಎಷ್ಟು ಕಡೆ ಸೌಲಭ್ಯವಿದೆ ಎಂಬ ಬಗ್ಗೆ ಮಾಹಿತಿ ನೀಡುವಂತೆ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಜುಲೈ 13ಕ್ಕೆ ಮುಂದೂಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT