ಸಿಎಂ ಯಡಿಯೂರಪ್ಪ 
ರಾಜ್ಯ

ವಿಧಾನಸೌಧದ ಆವರಣದಲ್ಲಿ ಬಸವಣ್ಣನವರ ಪುತ್ಥಳಿ ನಿರ್ಮಾಣ ಬಿಎಸ್'ವೈ ಚಿಂತನೆ

ವಿಧಾನಸೌಧದ ಆವರಣದಲ್ಲಿ ಬಸವಣ್ಣನವರ ಪುತ್ಥಳಿ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಿಂತನೆ ನಡೆಸಿದ್ದು, ಕುರಿತಾಗಿ ಸೂಕ್ತ ಪ್ರಸ್ತಾವಣೆಯೊಂದಿಗೆ ಕಡತವನ್ನು ಮಂಡಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ. 

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಬಸವಣ್ಣನವರ ಪುತ್ಥಳಿ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಿಂತನೆ ನಡೆಸಿದ್ದು, ಕುರಿತಾಗಿ ಸೂಕ್ತ ಪ್ರಸ್ತಾವಣೆಯೊಂದಿಗೆ ಕಡತವನ್ನು ಮಂಡಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ. 

12 ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ ಸಮಾನತೆಯ ಹರಿಕಾರ ಬಸವಣ್ಣನವರ ಪುತ್ಥಳಿಯನ್ನು ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದ ಆವರಣದಲ್ಲಿ ನಿರ್ಮಿಸುವುದರಿಂದ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಮುಖುಟಪ್ರಾಯವಾಗುತ್ತದೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಿದೆ. 

9/6/2021ರಂದು ಮುಖ್ಯಮಂತ್ರಿಗಳು ಈ ಕುರಿತ ಟಿಪ್ಪಣಿಗೆ ಸಹಿ ಹಾಕಿದ್ದಾರೆ. ವಿಧಾನಸೌಧದ ಆವರಣದಲ್ಲಿ ಜಗಜ್ಯೋತಿ ಶ್ರೀ ಬಸವಣ್ಣನವರ ಪುತ್ಥಳಿಯನ್ನು ಸ್ಥಾಪಿಸಲು ಸೂಕ್ತ ಪ್ರಸ್ತಾವನೆಯೊಂದಿಗೆ ಕಡತವನ್ನು ಮಂಡಿಸಲು ಸೂಚನೆ ನೀಡಿದ್ದಾರೆಂದು ವರದಿಗಳು ತಿಳಿಸಿವೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು, ಇದೊಂದು ಉತ್ತಮ ಚಿಂತನೆ. ಈ ಕುರಿತು ಕಾನೂನಾತ್ಮಕವಾಗಿ ಪರಿಶೀಲನೆ ನಡೆಸುವ ಅಗತ್ಯವಿದೆ. ಐದು ವರ್ಷಗಳ ಹಿಂದಷ್ಟೇ ಸಾರ್ವಜನಿಕ ಪ್ರದೇಶಗಳಲ್ಲಿ ಯಾವುದೇ ರೀತಿಯ ಹೊಸ ಪ್ರತಿಮೆಗಳನ್ನು ಸ್ಥಾಪನೆ ಮಾಡಬಾರದು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಹೀಗಾಗಿ ಈ ಕುರಿತು ಪರಿಶೀಲನೆ ನಡೆಸುವ ಅಗತ್ಯವಿದೆ ಎಂದು ಹೇಳಿದ್ದಾರೆ. 

ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವುದಕ್ಕೂ ಮುನ್ನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಣಿ ಹಾಗೂ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. 

ವಿಧಾನಸೌಧದ ಆವರಣದಲ್ಲಿ ಈಗಾಗಲೇ ಸಾಕಷ್ಟು ಪ್ರತಿಮೆಗಳಿವೆ. ರೂ.500 ಕೋಟಿ ವೆಚ್ಚದಲ್ಲಿ ಈಗಾಗಲೇ ರಾಜ್ಯ ಸರ್ಕಾರ ಬಸವಕಲ್ಯಾಣದಲ್ಲಿ ಅನುಭವ ಮಂಟಪವನ್ನು ನಿರ್ಮಾಣ ಮಾಡುತ್ತಿದೆ ಎಂದು ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT