ಸಂಗ್ರಹ ಚಿತ್ರ 
ರಾಜ್ಯ

ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಕೊಲೆ: ಅತ್ತಿಗೆ, ಸೋದರಳಿಯನ ಬಂಧನ

ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಖಾ ಕದಿರೇಶ್ ಅವರ ಇಬ್ಬರು ಸಂಬಂಧಿಕರನ್ನು ಪಶ್ಚಿಮ ವಿಭಾಗದ ಪೊಲೀಸರು ಭಾನುವಾರ  ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ರೇಖಾ ಅವರ ಅತ್ತಿಗೆ ಮಾಲಾ ಮತ್ತು ಅವರ ಪುತ್ರ ಅರುಣ್ ಅವರನ್ನು ತನಿಖಾಧಿಕಾರಿಗಳು ಪ್ರಶ್ನಿಸಿದ ನಂತರ ಬಂಧಿಸಲಾಯಿತು.

ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಖಾ ಕದಿರೇಶ್ ಅವರ ಇಬ್ಬರು ಸಂಬಂಧಿಕರನ್ನು ಪಶ್ಚಿಮ ವಿಭಾಗದ ಪೊಲೀಸರು ಭಾನುವಾರ  ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ರೇಖಾ ಅವರ ಅತ್ತಿಗೆ ಮಾಲಾ ಮತ್ತು ಅವರ ಪುತ್ರ ಅರುಣ್ ಅವರನ್ನು ತನಿಖಾಧಿಕಾರಿಗಳು ಪ್ರಶ್ನಿಸಿದ ನಂತರ ಬಂಧಿಸಲಾಯಿತು.

ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ ಇತರ ಐದು ಶಂಕಿತರನ್ನು ಬಂಧಿಸಿದ್ದಾರೆ - ಪೀಟರ್, ಸೂರ್ಯ, ಸ್ಟೀಫನ್, ಅಜಯ್ ಮತ್ತು ಪುರುಷೋತ್ತಮ್. "ಮಾಲಾ ರೇಖಾ ಅವರ ಪತಿ ಕದಿರೇಶ್ ಅವರ ಅಕ್ಕ. ಬಂಧಿತ ವ್ಯಕ್ತಿಗಳು ಹಂಚಿಕೊಂಡ ಮಾಹಿತಿಯ ಆಧಾರದ ಮೇಲೆ ಮಾಲಾ ಮತ್ತು ಅವರ  ಮಗನನ್ನು ಪ್ರಶ್ನಿಸಲಾಯಿತು. ಕೊಲೆಗಾರರು ತಾಯಿ ಮತ್ತು ಮಗನೊಂದಿಗೆ ಸಂಪರ್ಕದಲ್ಲಿದ್ದರು ಎಂದು ತಿಳಿದುಬಂದಿದೆ ಆದ್ದರಿಂದ ಅವರನ್ನು ಬಂಧಿಸಲಾಗಿದೆ"ಹಿರಿಯ ಪೊಲೀಸ್ ಅಧಿಕಾರಿ ಹೇಳಿದರು.

ಪೀಟರ್ ರೇಖಾ ವಿರುದ್ಧ ದ್ವೇಷ ಸಾಧಿಸುತ್ತಿದ್ದನೆಂದು ತಿಳಿದುಬಂದಿದೆ. “ಪೀಟರ್ ಕದಿರೇಶ್‌ಗೆ ಹತ್ತಿರವಾಗಿದ್ದನು ಮತ್ತು ಕದಿರೇಶ್ ಕೊಲೆಯಾದ ನಂತರ ರೇಖಾ ಪೀಟರ್ ಗೆ  ಯಾವುದೇ ಪ್ರಾಮುಖ್ಯತೆ ನೀಡುತ್ತಿರಲಿಲ್ಲ. ಹಲವಾರು ಸಂದರ್ಭಗಳಲ್ಲಿ ಅವನನ್ನು ಅವಮಾನಿಸಿದ್ದರು. ಅದರಿಂದ ಪೀಟರ್ ರೇಖಾಳನ್ನು ದ್ವೇಷಿಸಲು ಪ್ರಾರಂಭಿಸಿದ್ದನು. ಆ ವೇಳೆ ಇತರ ಆರೋಪಿಗಳು ಅವನನ್ನು ಸಂಪರ್ಕಿಸಿ , ಅವರು ರೇಖಾ ಅವನೊಂದಿಗೆ ಹೇಗೆ ವರ್ತಿಸುತ್ತಿದ್ದಾರೆ ಎನ್ನುವುದು  ಮತ್ತು ಆಕೆ ಬೆಳೆಯುತ್ತಿರುವ ರೀತಿ ಬಗ್ಗೆ ಅಸನಾಧಾನ ಹೊರಹಾಕಿದ್ದಾರೆ.. ವೈಯಕ್ತಿಕ ಪೈಪೋಟಿ ಮತ್ತು ಅಸೂಯೆ ಈ ಕೊಲೆಗೆ ಎರಡು ಪ್ರಮುಖ ಕಾರಣಗಳಾಗಿದೆ." ಅಧಿಕಾರಿ ಹೇಳಿದ್ದಾರೆ. ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸಿದ ಇತರ ಜನರಿಗೆ ಪೊಲೀಸ್ ತಂಡಗಳು ಶೋಧ ನಡೆಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT