ಎಚ್ ಡಿ ಕುಮಾರಸ್ವಾಮಿ 
ರಾಜ್ಯ

ಹೆಸರು ಬದಲಾವಣೆ ಕೈಬಿಡಿ: ಕೇರಳ ಸಿಎಂಗೆ ಎಚ್ ಡಿಕೆ ಆಗ್ರಹ

ಕಾಸರಗೋಡು ಜಿಲ್ಲೆಯ ಕೆಲವು ಗ್ರಾಮಗಳ ಕನ್ನಡ ಹೆಸರುಗಳನ್ನು ಬದಲಾವಣೆ ಮಾಡಿ, ಮಲಯಾಳಿ ಹೆಸರುಗಳನ್ನು ಇಡುವ ಪ್ರಯತ್ನ ಕೈಬಿಡುವಂತೆ ಆಗ್ರಹಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಗೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

ಬೆಂಗಳೂರು: ಕಾಸರಗೋಡು ಜಿಲ್ಲೆಯ ಕೆಲವು ಗ್ರಾಮಗಳ ಕನ್ನಡ ಹೆಸರುಗಳನ್ನು ಬದಲಾವಣೆ ಮಾಡಿ, ಮಲಯಾಳಿ ಹೆಸರುಗಳನ್ನು ಇಡುವ ಪ್ರಯತ್ನ ಕೈಬಿಡುವಂತೆ ಆಗ್ರಹಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಗೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

ಗ್ರಾಮಗಳ ಹೆಸರು ಬದಲಾವಣೆಯಿಂದ ಯಾವುದೇ ಪರಿಣಾಮ ಆಗುವುದಿಲ್ಲ ಎನ್ನುವ ವಾದ ಕೇಳಿಬರುತ್ತಿದೆ.ಆದರೆ, ಕಾಸರಗೋಡು ಜಿಲ್ಲೆ ಕೇರಳದಲ್ಲಿದ್ದರೂ ಅಲ್ಲಿನ ಜನರು ಕನ್ನಡ ಮತ್ತು ಕರ್ನಾಟಕದ ಜತೆಗೆ  ದಶಕಗಳಿಂದಲೂ ಅವಿನಾಭಾವ ಸಂಬಂಧ ಹೊಂದಿದ್ದಾರೆ. ಕನ್ನಡ ಮತ್ತು ಮಲಯಾಳ ಭಾಷೆಯ ಜನರು ಭಾಷಾ  ಸೌಹಾರ್ದ ಮತ್ತು ಸಾಂಸ್ಕೃತಿಕ ಸಹಬಾಳ್ವೆಗೆ ಮಾದರಿಯಾಗಿದ್ದಾರೆ ಎಂದು ಪತ್ರದಲ್ಲಿ ಹೇಳಿದ್ದಾರೆ.

ಕಾಸರಗೋಡಿನಲ್ಲಿ ಭಾಷಾ ಸೌಹಾರ್ದದ ಒಂದು ಪರಂಪರೆ ಇದೆ. ಗ್ರಾಮಗಳ ಹೆಸರುಗಳನ್ನು ಕನ್ನಡದಲ್ಲೇ ಉಳಿಸುವುದರಿಂದ ಅತ್ಯುತ್ತಮವಾದ ಪರಂಪರೆಯನ್ನು ಮುಂದುವರಿಸಿದಂತೆ ಆಗುತ್ತದೆ. ಆದ್ದರಿಂದ ಗ್ರಾಮಗಳ ಹೆಸರುಗಳ ಮಲಯಾಳೀಕರಣ ಪ್ರಯತ್ನವನ್ನು ಮುಂದುರಿಸಬಾರದು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT