ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ವಿರುದ್ಧ ದಿಟ್ಟ ಹೋರಾಟ: ಮಾನವ ಸಂಪನ್ಮೂಲ ಹೆಚ್ಚಿಸಲು ಬಿಬಿಎಂಪಿ ಮುಂದು

ರಾಜ್ಯದಲ್ಲಿ ಕೊರೋನಾ 2ನೇ ಅಲೆ ಬಳಿಕ ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ವೈರಸ್ ಆತಂಕ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸೂಕ್ತವಾಗಿ ಎದುರಿಸಲು ಮಾನವ ಸಂಪನ್ಮೂಲ ಹೆಚ್ಚಿಸಲು ಬಿಬಿಎಂಪಿ ಮುಂದಾಗಿದೆ. 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆ ಬಳಿಕ ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ವೈರಸ್ ಆತಂಕ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸೂಕ್ತವಾಗಿ ಎದುರಿಸಲು ಮಾನವ ಸಂಪನ್ಮೂಲ ಹೆಚ್ಚಿಸಲು ಬಿಬಿಎಂಪಿ ಮುಂದಾಗಿದೆ. 

ಕೊರೋನಾ ನಿಯಂತ್ರಣಕ್ಕೆ ಟ್ರಯಾಜಿಂಗ್ ಕೇಂದ್ರಗಳಲ್ಲಿ ಹಾಸಿಗೆ ಹಂಚಿಗೆ ಹಾಗೂ ಸೋಂಕಿತರ ಸಂಪರ್ಕಿತರ ಪತ್ತೆ ಕಾರ್ಯವನ್ನು ಸರ್ಕಾರ ಚುರುಕುಗೊಳಿಸಿದ ಹಿನ್ನೆಲೆಯಲ್ಲಿ ಬಿಬಿಎಂಪಿ ಮಾನವ ಸಂಪನ್ಮೂಲ ಹೆಚ್ಚಿಸಲು ಮುಂದಾಗಿದೆ ಎಂದು ವರದಿಗಳು ತಿಳಿಸಿವೆ. 

ಪರಿಸ್ಥಿತಿ ಎದುರಿಸಲು ಮಾನವಶಕ್ತಿ ಹೆಚ್ಚಾಗಿರುವುದು ಮುಖ್ಯವಾಗಿದ್ದು, ಇದರತ್ತ ಗಮನಹರಿಸಲಾಗುತ್ತಿದೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಿ.ರಣದೀಪ್ ಅವರು ಹೇಳಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆ ಬಳಿಕ ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ವೈರಸ್ ಆತಂಕ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸೂಕ್ತವಾಗಿ ಎದುರಿಸಲು ಮಾನವ ಶಕ್ತಿ ಹೆಚ್ಚಿಸಲು ಬಿಬಿಎಂಪಿ ಮುಂದಾಗಿದೆ. 

ಕೊರೋನಾ ನಿಯಂತ್ರಣಕ್ಕೆ ಟ್ರಯಾಜಿಂಗ್ ಕೇಂದ್ರಗಳಲ್ಲಿ ಹಾಸಿಗೆ ಹಂಚಿಗೆ ಹಾಗೂ ಸೋಂಕಿತರ ಸಂಪರ್ಕಿತರ ಪತ್ತೆ ಕಾರ್ಯವನ್ನು ಸರ್ಕಾರ ಚುರುಕುಗೊಳಿಸಿದ ಹಿನ್ನೆಲೆಯಲ್ಲಿ ಬಿಬಿಎಂಪಿ ಮಾನವ ಶಕ್ತಿ ಹೆಚ್ಚಿಸಲು ಮುಂದಾಗಿದೆ ಎಂದು ವರದಿಗಳು ತಿಳಿಸಿವೆ. 

ಪರಿಸ್ಥಿತಿ ಎದುರಿಸಲು ಮಾನವಶಕ್ತಿ ಹೆಚ್ಚಾಗಿರುವುದು ಮುಖ್ಯವಾಗಿದ್ದು, ಇದರತ್ತ ಗಮನಹರಿಸಲಾಗುತ್ತಿದೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಿ.ರಣದೀಪ್ ಅವರು ಹೇಳಿದ್ದಾರೆ. 

ಕೊರೋನಾ ವಿರುದ್ಧ ದಿಟ್ಟ ಹೋರಾಟಕ್ಕೆ ಸೂಕ್ತ ರೀತಿಯ ಮಾನವಶಕ್ತಿಯ ಅಗತ್ಯವಿದೆ. ಮನೆಗಳಿಗೆ ಭೇಟಿ ನೀಡಿ ಚಿಕಿತ್ಸೆ ನೀಡುವುದ, ಕಂಟೈನ್ಮೆಂಟ್ ಝೋನ್ ಗಳ ಪರಿಶೀಲನೆ, ಟ್ರಯಾಜಿಂಗ್ ಕೇಂದ್ರಗಳಲ್ಲಿ ಸೇವೆ, ಸೋಂಕಿತರ ಸಂಪರ್ಕ ಪತ್ತೆ, ಮನೆ ಮನೆ ಸಮೀಕ್ಷೆ ನಡೆಸಲು ಸಿಬ್ಬಂದಿಗಳ ಅಗತ್ಯವಿದೆ. ಪ್ರತಿಯೊಂದು ಉದ್ದೇಶಕ್ಕೂ ಬಿಬಿಎಂಪಿ ಈಗಾಗಲೇ 300 ಆಶಾ ಕಾರ್ಯಕರ್ತೆಯನ್ನು ನಿಯೋಜಿಸಿದೆ. ಈ ಬಲವನ್ನು ಇದೀಗ 871 ಮತ್ತು 1,622ಕ್ಕೆ ಏರಿಕೆ ಮಾಡಲು ನಿರ್ಧರಿಸಲಾಗಿದೆ. ಜಂಟಿ ಆರೋಗ್ಯ ಇನ್ಸ್'ಪೆಕ್ಟರ್ ಸಂಖ್ಯೆ ಏರಿಕೆ ಮಾಡುವಂತೆಯೂ ಆಗ್ರಹಗಳು ಕೇಳಿ ಬರುತ್ತಿವೆ ಎಂದು ತಿಳಿಸಿದ್ದಾರೆ. 

ಸಿಬ್ಬಂದಿಗಳ ನೇಮಕ ಪ್ರಕ್ರಿಯೆ ಶೀಘ್ರದಲ್ಲಿ ಆರಂಭ ಮಾಡುವಂತೆ ರಾಜ್ಯ ಸರ್ಕಾರ, ಬಿಬಿಎಂಪಿ ಮುಖ್ಯ ಆಯುಕ್ತ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಟ್ರಯಾಜಿಂಗ್ ಕೇಂದ್ರಗಳಲ್ಲಿ ತಪಾಸಣೆ ನಡೆಸಿದ ಬಳಿಕವೇ ಹಾಸಿಗೆ ಹಂಚಿಗೆ ಮಾಡಲಾಗುತ್ತಿದೆ. ಹೀಗಾಗಿ ಸಿಬ್ಬಂದಿಗಳ ನೇಮಕಾತಿ ಅಗತ್ಯವಿದೆ. ಹೋಂ ಐಸೋಸೇಷನ್ ಆಯ್ಕೆ ನೀಡುವುದಕ್ಕೂ ಮುನ್ನ ಸೋಂಕಿತ ವ್ಯಕ್ತಿಯ ಆರೋಗ್ಯವನ್ನು ಆರೋಗ್ಯಾಧಿಕಾರಿಗಳು ತಪಾಸಣೆ ನಡೆಸುತ್ತಾರೆಂದಿದ್ದಾರೆ. 

ಸೋಂಕಿಗೊಳಗಾಗಿರುವ ವ್ಯಕ್ತಿಗಳ ಮೇಲೆ ನಿಗಾ ಇಡುವಂತೆ ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್ ಮತ್ತು ಅಪಾರ್ಟ್'ಮೆಂಟ್ ಸಂಕೀರ್ಣದ ಸದಸ್ಯರಿಗೆ ಸೂಚಿಸಲಾಗಿದೆ. ಒಳಾಂಗಣದಲ್ಲಿಯೇ ಜನರು ಇರುವುದರಿಂದ ಕೋವಿಡ್ ನಿಯಮಗಳನ್ನು ಮುರಿಯಬಾರದು. ವಿಪತ್ತು ನಿರ್ವಹಣಾ ಮಾನದಂಡಗಳನ್ನು ಉಲ್ಲಂಘನೆ ಮಾಡಬಾರದು, ರೂಪಾಂತರಿ ಕೊರೋನಾ ಆತಂಕ ಕೂಡ ಶುರುವಾಗಿದ್ದು, ಸೋಂಕಿತರ ಮನೆಗಳ ಮೇಲೆ ಹೆಚ್ಚಿನ ನಿಗಾ ಇಡಬೇಕು. ಇದಕ್ಕೆ ಹೆಚ್ಚಿನ ಸಿಬ್ಬಂದಿಗಳ ನಿಯೋಜನೆ ಅಗತ್ಯವಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT