ಕಿಸಾನ್ ರೈಲಿಗೆ ಮುಖ್ಯಮಂತ್ರಿ ಹಸಿರು ನಿಶಾನೆ 
ರಾಜ್ಯ

ನವದೆಹಲಿಗೆ ಮಾವು ಸಾಗಿಸುವ ಕಿಸಾನ್ ರೈಲಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ

ಕೋಲಾರ ಜಿಲ್ಲೆ ಚಿಂತಾಮಣಿಯಿಂದ ನವದೆಹಲಿಗೆ 250 ಟನ್ ಮಾವು ಸಾಗಿಸುವ ಕಿಸಾನ್ ರೈಲಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರು: ಕೋಲಾರ ಜಿಲ್ಲೆ ಚಿಂತಾಮಣಿಯಿಂದ ನವದೆಹಲಿಗೆ 250 ಟನ್ ಮಾವು ಸಾಗಿಸುವ ಕಿಸಾನ್ ರೈಲಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಯಡಿಯೂರಪ್ಪ, ರೈತರು ಬೆಳೆದ ಬೆಳೆಗೆ ಉತ್ತಮ ಮೌಲ್ಯ ಒದಗಿಸುವ ನಿಟ್ಟಿನಲ್ಲಿ ಕಿಸಾನ್ ರೈಲು ವಹಿಸುತ್ತಿರುವ ಪಾತ್ರ ಮಹತ್ವದ್ದು ಎಂದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಮಾವಿನ ಬೆಳೆಗಾರರಿಗೆ ಈ ಯೋಜನೆಯಿಂದ ಲಾಭವಾಗುತ್ತಿದೆ. ಇತರ ತರಕಾರಿ ಹಾಗೂ ಹಣ್ಣು ಬೆಳೆಗಾರರು ಸಹ ಈ ಅವಕಾಶ ಬಳಸಿಕೊಂಡು ಅವರ ಉತ್ಪನ್ನಗಳಿಗೆ ಹೆಚ್ಚಿನ ಲಾಭ ಪಡೆದುಕೊಳ್ಳುವಂತೆ ಮುಖ್ಯಮಂತ್ರಿ ಕರೆ ನೀಡಿದರು.

ಕಿಸಾನ್ ರೈಲು ಯೋಜನೆಯಡಿ ರೈತರ ಗುಂಪು, ವರ್ತಕರು, ಲೈಸೆನ್ಸ್ ಹೊಂದಿರುವ ಕಮೀಷನ್ ಏಜೆಂಟ್ಸ್, ರಫ್ತುದಾರರು ಹಾಗೂ ಇನ್ನಿತರೆ ಭಾಗಿದಾರರಿಗೆ ನಿಯಮಾನುಸಾರ ರೈಲ್ವೆ ಸಾಗಾಣಿಕೆ ದರದಲ್ಲಿ ಶೇ. 50 ರಷ್ಟು ರಿಯಾಯಿತಿ ಸಿಗಲಿದೆ ಎಂದರು.

ಹಣ್ಣು, ತರಕಾರಿ ಮತ್ತು ಡೈರಿ ಉತ್ಪನ್ನಗಳನ್ನು ಸುರಕ್ಷಿತವಾಗಿ, ತ್ವರಿತವಾಗಿ ಬೇಡಿಕೆ ಇರುವ ಮಾರುಕಟ್ಟೆಗಳಲ್ಲಿ ತಲುಪಿಸುವಲ್ಲಿ ಕಿಸಾನ್ ರೈಲು ನೆರವಾಗಲಿದ್ದು, ರೈತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮುಖ್ಯಮಂತ್ರಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT