ರಾಜ್ಯ

ಶಾಸಕರ ಕಚೇರಿಗೆ ಹೋಗಿ ಕೋವಿಡ್ ಲಸಿಕೆ ಪಡೆಯಲು ಹೇಳುತ್ತಿದ್ದಾರೆ: ರಾಜರಾಜೇಶ್ವರಿ ನಗರ ನಿವಾಸಿಗಳ ಗಂಭೀರ ಆರೋಪ

ಕೋವಿಡ್ ಲಸಿಕೆ ಪಡೆಯಲು ಇಚ್ಛಿಸುವವರು ಸ್ಥಳೀಯ ಶಾಸಕರ ಕಚೇರಿಗೆ ತೆರಳಿ ವೋಟರ್ ಐಡಿ ನೀಡಿ ಲಸಿಕೆ ಪಡೆಯುವಂತೆ ಆರೋಗ್ಯ ಸಿಬ್ಬಂದಿಗಳು ಹೇಳುತ್ತಿದ್ದಾರೆಂದು ರಾಜರಾಜೇಶ್ವರಿ ನಗರ ನಿವಾಸಿಗಳು ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. 

ಬೆಂಗಳೂರು: ಕೋವಿಡ್ ಲಸಿಕೆ ಪಡೆಯಲು ಇಚ್ಛಿಸುವವರು ಸ್ಥಳೀಯ ಶಾಸಕರ ಕಚೇರಿಗೆ ತೆರಳಿ ವೋಟರ್ ಐಡಿ ನೀಡಿ ಲಸಿಕೆ ಪಡೆಯುವಂತೆ ಆರೋಗ್ಯ ಸಿಬ್ಬಂದಿಗಳು ಹೇಳುತ್ತಿದ್ದಾರೆಂದು ರಾಜರಾಜೇಶ್ವರಿ ನಗರ ನಿವಾಸಿಗಳು ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. 

ವಾರ್ಡ್ ನಂ.160ರಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿದ್ದೆ, ಆದರೆ, ಅಲ್ಲಿದ್ದ ಸಿಬ್ಬಂದಿಗಳು ಲಸಿಕೆ ದಾಸ್ತಾನು ಇಲ್ಲ ಎಂದು ಹೇಳಿದರು. ಬಳಿಕ ಲಸಿಕೆ ಪಡೆದುಕೊಳ್ಳಲು ಶಾಸಕರ ಕಚೇರಿಗೆ ತೆರಳಿ ಆಧಾರ್ ಹಾಗೂ ವೋಟರ್ ಐಡಿ ನೀಡಿ ಪಡೆದುಕೊಳ್ಳಿ ಎಂದು ಹೇಳಿದರು. ಉಚಿತವಾಗಿ ಲಸಿಕೆ ನೀಡುತ್ತಿದ್ದರೂ ಇದರಲ್ಲಿ ಏಕೆ ರಾಜಕೀಯ ಮಾಡುತ್ತಿದ್ದಾರೆಂದು ರಾಜರಾಜೇಶ್ವರಿ ನಗರದ ನಿವಾಸಿ ಶಾರದಮ್ಮ ಎಂಬುವವರು ಪ್ರಶ್ನಿಸಿದ್ದಾರೆ. 

ಬಿಬಿಎಂಪಿ ಸಿಬ್ಬಂದಿಗಳು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರುವವರನ್ನು ಶಾಸಕರ ಕಚೇರಿಗೆ ಹೋಗುವಂತೆ ಮಾಡುತ್ತಿದ್ದಾರೆ. ಶಾಸಕ ಮುನಿರತ್ನ ಕಚೇರಿಯ ನೆಲಮಹಡಿಯಲ್ಲಿ ಲಸಿಕೆ ನೀಡಲಾಗುತ್ತಿದೆ. ಈ ಹಿಂದೆಯೂ ಈ ರೀತಿ ಮಾಡಲಾಗಿತ್ತು. ಬಳಿಕ ಸ್ಥಗಿತಗೊಳಿಸಿದ್ದರು. ಇದೀಗ ಮತ್ತೆ ಆರಂಭಿಸಿದ್ದಾರೆಂದು ಹೆಸರು ಬಹಿರಂಗಪಡಿಸಿದ ರಾಜರಾಜೇಶ್ವರಿ ನಗರದ ನಿವಾಸಿಯೊಬ್ಬರು ಹೇಳಿದ್ದಾರೆ. 

ಲಸಿಕೆ ತಡವಾಗಿ ಬಂದ ಹಿನ್ನೆಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಂಗಳವಾರ ಲಸಿಕೆ ನೀಡಲು ಸಾಧ್ಯವಾಗಿರಲಿಲ್ಲ ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. 

ಕೇಂದ್ರ ಸ್ಥಾನವಾಗಿದ್ದರಿಂದ ಹಾಗೂ ಲಸಿಕೆ ಪಡೆಯರು ಸೂಕ್ತ ಅನುಕೂಲಕರ ವಾತಾವರಣ ಇದ್ದ ಹಿನ್ನೆಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಶಾಸಕರ ಕಚೇರಿಗೆ ತೆರಳಿ ಲಸಿಕೆ ಪಡೆದುಕೊಳ್ಳುವಂತೆ ಹೇಳಿದ್ದರು. ಯಾವುದೇ ಬಹಿರಂಗ ಪ್ರದೇಶದಲ್ಲಿ ಲಸಿಕೆ ನೀಡಬಹುದು ಸರ್ಕಾರ ಆದೇಶ ನೀಡಿದೆ. ಹೀಗಾಗಿ ಈ ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು ಎಂದು ಶಾಸಕ ಮುನಿರತ್ನ ಅವರು ಹೇಳಿದ್ದಾರೆ. 

ಕಳೆದ 2-3 ದಿನಗಳಿಂದ ನನ್ನ ಕಚೇರಿಯಲ್ಲಿ ಲಸಿಕೆಯನ್ನು ನೀಡಲಾಗುತ್ತಿದೆ. ನನ್ನ ಕ್ಷೇತ್ರದಲ್ಲಿರುವ ಜನರಿಗೆ ಮಾತ್ರ ಲಸಿಕೆ ನೀಡುವ ಉದ್ದೇಶದಿಂದ ವೋಟರ್ ಐಡಿ ಕೇಳಲಾಗಿತ್ತು. ಬೇರೆ ಕ್ಷೇತ್ರದ ಜನರು ಅವರ ಕ್ಷೇತ್ರದಲ್ಲಿ ಲಸಿಕೆ ಪಡೆದುಕೊಳ್ಳಲಿ ಎಂಬುದು ಇದರ ಉದ್ದೇಶವಾಗಿತ್ತು ಎಂದು ತಿಳಿಸಿದರು. 

ಇದೇ ವೇಳೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಯೇ ಲಸಿಕೆ ದಾಸ್ತಾನು ಇಲ್ಲದ್ದಾಗ ನಿಮ್ಮ ಕಚೇರಿಯಲ್ಲಿ ಹೇಗೆ ಲಭ್ಯವಾಗುವಂತಾಯಿತು ಎಂಬ ಪ್ರಶ್ನೆಗೆ ಕೆಂಡಾಮಂಡಲಗೊಂಡ ಮುನಿರತ್ನ ಅವರು, ಈ ಬಗ್ಗೆ ಮಾಹಿತಿ ಬೇಕಿದ್ದರೆ, ಆರ್'ಟಿಐ ಮೂಲಕ ಮಾಹಿತಿ ಪಡೆದುಕೊಳ್ಳಲಿ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT